ಈ ವರ್ಷದ ಬೇಸಿಗೆಯ ತಾಪಮಾನ ಬಹುತೇಕ ಇಡೀ ಕರ್ನಾಟಕದ ಜನರನ್ನು ಅಲುಗಾಡಿಸಿ ಬಿಟ್ಟಿತು. ಅದರಲ್ಲೂ ಮಧ್ಯಮ, ಕೆಳಮಧ್ಯಮ ಮತ್ತು ಬಡವರ್ಗದ ಜನರು ತಾಪಮಾನದ ಏರಿಕೆಯಿಂದ ತತ್ತರಿಸಿ ಹೋದರು. ಕೆಲವು ಜೀವಗಳು ಹೊರಟೇ ಹೋದವು. ಇನ್ನೊಂದಷ್ಟು ಜನ ಅನಾರೋಗ್ಯಗಳಿಗೆ ತುತ್ತಾದರು. ಪ್ರಾಣಿಪಕ್ಷಿಗಳು ಕಣ್ಣ ಮುಂದೆಯೇ ತುಂಬಾ ಒದ್ದಾಡಿದವು……
ಈಗ ಎರಡು ಮೂರು ದಿನದಿಂದ ಸ್ವಲ್ಪಮಟ್ಟಿಗೆ ಉಷ್ಣಾಂಶ ಕಡಿಮೆಯಾಗಿದೆ. ಆದರೆ ಆ ತಾಪಮಾನದ ಹೊಡೆತ ನಮಗೆ ಒಂದು ಬಹುದೊಡ್ಡ ಪಾಠವಾಗಬೇಕು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿ ವರ್ಷ ಹೀಗೆ ಒಂದೊಂದು ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಜಾಸ್ತಿಯಾಗುತ್ತಾ ಹೋಗುತ್ತದೆ ಎಂದು ಯಾರೋ ಬರೆದ ಒಂದು ಲೇಖನ ಪ್ರಸಾರವಾಗುತ್ತಿದೆ. ಅದು ಎಷ್ಟರಮಟ್ಟಿಗೆ ನಿಜವೋ ಗೊತ್ತಿಲ್ಲ. ಆದರೆ ಮುಂದೆಯೂ ಪರಿಸರವನ್ನು ಹೀಗೇ ನಿರ್ಲಕ್ಷಿಸಿದರೆ ಖಂಡಿತವಾಗಿಯೂ ತಾಪಮಾನದ ಹೊಡೆತಕ್ಕೆ ನಾವೆಲ್ಲರೂ ನಾಶವಾಗುವುದು ನಿಶ್ಚಿತ. ಅದಕ್ಕಾಗಿ ಆ ಹಂತ ತಲುಪುವ ಮುನ್ನವೇ ನಾವೆಲ್ಲ ಎಚ್ಚೆತ್ತುಕೊಳ್ಳಬೇಕಾಗಿದೆ ಮತ್ತು ಆ ನಿಟ್ಟಿನಲ್ಲಿ ಒಂದಷ್ಟು ಕೆಲಸ ಮಾಡಬೇಕಾಗಿದೆ……..
ಮುಖ್ಯವಾಗಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ, ಈ ವರ್ಷದ ಈಗ ಪ್ರಾರಂಭವಾಗಿರುವ ಮಳೆಗಾಲದಲ್ಲಿ ಕನಿಷ್ಠ ಒಂದು ಲಕ್ಷ ಗಿಡಗಳನ್ನು ಬೆಳೆಸುವ ಪ್ರತಿಜ್ಞೆ ಮಾಡಬೇಕು. ಹಾಗೆಯೇ ಹೋಬಳಿ ಮಟ್ಟದಲ್ಲಿ 10 ಲಕ್ಷ ಗಿಡಗಳು, ತಾಲೂಕು ಮಟ್ಟದಲ್ಲಿ 50 ಲಕ್ಷದಷ್ಟು ಗಿಡಗಳು ಮತ್ತು ಗ್ರೇಡ್-ಒನ್ ನಗರಗಳಲ್ಲಿ ಅಂದರೆ ಜಿಲ್ಲಾಮಟ್ಟದಲ್ಲಿ ಒಂದು ಕೋಟಿ ಗಿಡಮರಗಳನ್ನು ನೆಡುವ ಕಾರ್ಯಕ್ರಮವನ್ನು ತತ್ ಕ್ಷಣದಿಂದಲೇ ಹಮ್ಮಿಕೊಳ್ಳಬೇಕು. ಸರ್ಕಾರ ಮತ್ತು ಸ್ವಯಂಸೇವಾ ಸಂಸ್ಥೆಗಳ ಜಂಟಿ ನೇತೃತ್ವದಲ್ಲಿ ಇದನ್ನು ಆರಂಭಿಸಬೇಕು. ಅಂದರೆ ಇಡೀ ರಾಜ್ಯದಲ್ಲಿ ನೂರಾರು ಕೋಟಿ ಗಿಡಗಳನ್ನು ಈ ಮಳೆಗಾಲದ ಸಮಯದಲ್ಲಿ ನೆಟ್ಟರೆ ಕನಿಷ್ಠ ಅದರಲ್ಲಿ ತೀರಾ ಕಡಿಮೆ ಎಂದರೂ 30 ರಿಂದ 40 ಶೇಕಡಾ ಗಿಡಗಳು ಉಳಿಸಿ ಬೆಳೆಸುವಲ್ಲಿ ಯಶಸ್ವಿಯಾದರೆ ಎಷ್ಟೋ ಕೋಟಿ ಮರಗಳು ಬೆಳೆಯುತ್ತವೆ. ಇಡೀ ರಾಜ್ಯದಲ್ಲಿ ಅರಣ್ಯ ಪ್ರದೇಶ ತುಂಬಾ ಹೆಚ್ಚಾಗುತ್ತದೆ…..
ಆಗ ಆಮ್ಲಜನಕ ಹೆಚ್ಚಾಗುತ್ತದೆ. ಮಳೆಯ ಕೊರತೆ ಕಡಿಮೆಯಾಗುತ್ತದೆ. ತಾಪಮಾನದ ಕುಸಿತ, ಮನಸ್ಸಿನ ಆಹ್ಲಾದ, ಆರೋಗ್ಯ ಎಲ್ಲವುಗಳಲ್ಲಿ ಕೆಲವೇ ವರ್ಷದಲ್ಲಿ ಕ್ರಾಂತಿಕಾರಕ ಬದಲಾವಣೆ ಉಂಟು ಮಾಡುತ್ತದೆ…..
ಇಷ್ಟನ್ನು ಸಹ ನಮ್ಮಿಂದ ಮಾಡಲು ಸಾಧ್ಯವಿಲ್ಲವೇ ! ಪ್ರಕೃತಿ ತನ್ನ ಕಷ್ಟ ಸಹಿಸಿ ನಮಗೆ ಸಹಾಯ ಮಾಡುತ್ತದೆ. ನಾವು ಆ ಪರಿಸರವನ್ನು ಉಳಿಸಲು ಇಷ್ಟೂ ಪ್ರಯತ್ನ ಪಡದಿದ್ದರೆ ನಮಗೆ ಕ್ಷಮೆಯೇ ಇಲ್ಲ…..
ಯಾರು ಏನು ಮಾಡುತ್ತಿರೋ ಗೊತ್ತಿಲ್ಲ. ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ಸರ್ಕಾರ ಮತ್ತು ಸ್ವಯಂಸೇವಾ ಸಂಸ್ಥೆಗಳು ಹಾಗೂ ಸಾಮಾನ್ಯ ಜನರು ದಯವಿಟ್ಟು ಇದನ್ನು ಒಂದು ದೊಡ್ಡ ಅಭಿಯಾನವಾಗಿ ಪ್ರಾರಂಭಿಸಿ, ಮಳೆಗಾಲದಲ್ಲಿ ಗಿಡ ನೆಟ್ಟರೆ, ನೀರು ಉಣಿಸುವ ತೊಂದರೆಯೂ ಇರುವುದಿಲ್ಲ. ಸಹಜವಾಗಿಯೇ ಮಳೆ ನೀರಿನಲ್ಲಿ ಅವು ಬೆಳೆಯುತ್ತವೆ. ಸ್ವಲ್ಪ ಸಸಿ ದೊಡ್ಡದಾಗುವವರೆಗೂ ಒಂದಷ್ಟು ಜಾಗೃತಿ ವಹಿಸಿದರೆ ಸಾಕು….
ಯೋಚಿಸಿ, ಏನನ್ನಾದರೂ ಮಾಡಿ. ಮುಂದಿನ ವರ್ಷಕ್ಕೆ ಇಷ್ಟೊಂದು ತಾಪಮಾನ ಹೆಚ್ಚಾಗದೆ ನಿಯಂತ್ರಿಸಲು ನಮ್ಮ ನಮ್ಮ ಕರ್ತವ್ಯ ನಿರ್ವಹಿಸೋಣ. ಈ ವರ್ಷದ ಭೀಕರ ಬಿಸಿಲನ್ನು ಮರೆಯುವುದು ಬೇಡ. ಅದು ಸದಾ ನೆನಪಾಗಿ ಗಿಡ ಬೆಳೆಸುವ ಕೆಲಸ ವೇಗ ಪಡೆಯಲಿ……
ಹಾಗೆಯೇ, ಫ್ಲೈ ಓವರ್ ಗಳು,
ಅನಾವಶ್ಯಕವಾದ ಉದ್ದುದ್ದ, ಹೆಚ್ಚು ಅಗಲದ ರಸ್ತೆಗಳು ಮುಂತಾದವುಗಳನ್ನು ಕಡಿಮೆ ಮಾಡಿ, ಆ ಜಾಗದಲ್ಲಿ ಕೆರೆಕಟ್ಟೆಗಳು, ಇಂಗು ಗುಂಡಿಗಳು ಮುಂತಾದ ನೀರಾವರಿ ಯೋಜನೆಗಳು, ನೀರಿನ ಸಂಗ್ರಹ ಕಾಲುವೆಗಳ ಬಗ್ಗೆ ಹೆಚ್ಚು ಗಮನಹರಿಸುವಂತೆ ಸ್ಥಳೀಯ ಜನರು ಅಲ್ಲಿನ ಆಡಳಿತ ಮತ್ತು ರಾಜಕೀಯ ವ್ಯವಸ್ಥೆಯನ್ನು ಒತ್ತಾಯಿಸಬೇಕಾಗುತ್ತದೆ. ಅಭಿವೃದ್ಧಿಯ ಪರಿಕಲ್ಪನೆಯನ್ನು ನಾವು ಬದಲಾಯಿಸಿಕೊಳ್ಳದಿದ್ದರೆ ಇಡೀ ದೇಶ ಸಿಮೆಂಟ್ ಕಾಡಾಗಿ ತಾಪಮಾನ, ಬರಗಾಲ ನಮ್ಮನ್ನು ನಿರಂತರವಾಗಿ ಕಾಡುತ್ತದೆ. ನಮ್ಮ ಮುಂದಿನ ಪೀಳಿಗೆಗೆ ನಾವು ಅತ್ಯಂತ ಅಪಾಯಕಾರಿ ವಾತಾವರಣವನ್ನು ಕೊಡುಗೆಯಾಗಿ ನೀಡಿದಂತಾಗುತ್ತದೆ.
ಅವರು ನಮ್ಮನ್ನು ಕ್ಷಮಿಸುವುದಿಲ್ಲ……
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ-ವಿವೇಕಾನಂದ. ಎಚ್.ಕೆ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…