ಪರಿಸರ ಸಮತೋಲನಕ್ಕಾಗಿ ಗಿಡ-ಮರ ಬೆಳೆಸಿ-ಸಚಿವ ಕೆ.ಎಚ್. ಮುನಿಯಪ್ಪ

ಪ್ರಕೃತಿ ವಿಕೋಪಗಳನ್ನು ತಪ್ಪಿಸಿ ಸಮತೋಲನ ಕಾಪಾಡಲು ಗಿಡ-ಮರಗಳನ್ನು ಬೆಳೆಸಲು ನಾವೆಲ್ಲರು ಅಣಿಯಾದಾಗ ಮಾತ್ರ ಸರಿಯಾದ ಸಮಯಕ್ಕೆ ಮಳೆ, ಬೆಳೆ, ಪರಿಸರ ಸಮತೋಲನ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾದ ‘ವನ ಮಹೋತ್ಸವ-2024’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ತಮ್ಮ ಜಮೀನುಗಳಲ್ಲಿ ಮೂರನೇ ಒಂದು ಭಾಗ ಮಾವು, ತೆಂಗು, ಹಲಸು, ನೇರಳೆ ಮುಂತಾದ ಆದಾಯದ ಗಿಡ-ಮರಗಳನ್ನು ಬೆಳೆಸಿದರೆ ಆದಾಯದ ಜೊತೆಗೆ ಪರಿಸರ ಸಮತೋಲನ ನಿರ್ಮಾಣವಾಗುತ್ತದೆ. ಬೆಟ್ಟ-ಗುಡ್ಡ ಪ್ರದೇಶಗಳಲ್ಲಿ ಗಿಡ ಮರಗಳನ್ನು ಬೆಳೆಸುವುದರಿಂದ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಸಂಭವಿಸುವುದನ್ನು ತಪ್ಪಿಸಬಹುದು. ಜಿಲ್ಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಸ್ತೆಗಳ ಎರಡು ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ಮರಗಳನ್ನು ನೆಡಲಾಗುತ್ತಿದೆ. ಪ್ರತಿಯೊಬ್ಬರೂ ಮನೆಗಳ ಸುತ್ತಮುತ್ತ ಗಿಡ ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕು. ಇದರಿಂದ ವಾತಾವರಣದ ಮಾಲಿನ್ಯವನ್ನು ನಿಯಂತ್ರಿಸಲು ಸಹಕಾರಿಯಾಗಲಿದೆ ಎಂದು ಸಚಿವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ ಸಿಕ್ಕಲಿಗಾರ್ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯು 2,298 ಕಿ.ಮೀ ವ್ಯಾಪ್ತಿ ಹೊಂದಿದ್ದು 22,800 ಹೆಕ್ಟೇರ್ ಭೂ ವಿಸ್ತೀರ್ಣ ಹೊಂದಿದೆ. 203.89 ಚದರ ಕಿಲೋ ಮೀಟರ್ ಅರಣ್ಯ ಪ್ರದೇಶವಿದೆ. ಒಟ್ಟು ಭೂ ಪ್ರದೇಶದಲ್ಲಿ ಶೇಕಡ 8.8 ರಷ್ಟು ಅರಣ್ಯ ಭೂಮಿ ಆವೃತ್ತಿಯಾಗಿದೆ. ಈ ನಿಟ್ಟಿನಲ್ಲಿ ಪರಿಸರ ಸಮತೋಲನ ಕಾಪಾಡುವ ದೃಷ್ಟಿಯಿಂದ ಅರಣ್ಯೀಕರಣ, ವನ್ಯಜೀವಿ ಸಂರಕ್ಷಣೆ ಮುಂತಾದ ವಿವಿಧ ಕಾರ್ಯಕ್ರಮಗಳನ್ನು ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಕಳೆದ ಐದು ವರ್ಷಗಳಲ್ಲಿ 2400 ಹೆಕ್ಟೇರ್ ನೆಡುತೋಪು ಮಾಡಲಾಗಿದೆ. 383 ರೈತ ಫಲಾನುಭವಿಗಳಿಗೆ 16 ಲಕ್ಷ ಸಸಿಗಳನ್ನು ವಿತರಿಸಲಾಗಿದ್ದು ಗಿಡಗಳನ್ನು ಬೆಳೆಸಿ ಪೋಷಿಸಲು ಇದುವರೆಗೆ 74 ಲಕ್ಷ ರೂ.ಗಳ ಹಣ ರೈತ ಫಲಾನುಭವಿಗಳಿಗೆ ನೀಡಲಾಗಿದೆ ಎಂದರು.

ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯಡಿ 3065 ಫಲಾನುಭವಿಗಳಿಗೆ ಸಸಿ ವಿತರಿಸಿ ವಿವಿಧ ಸೌಲಭ್ಯ ಕಲ್ಪಿಸಲಾಗಿದೆ. 2024 ನೇ ಸಾಲಿನಲ್ಲಿ 251 ಲಕ್ಷ ರೂ.ಗಳ ಯೋಜನಾ ವೆಚ್ಚ ರೂಪಿಸಲಾಗಿದ್ದು 165 ಕಿಲೋ ಮೀಟರ್ ನೆಡುತೋಪು ನಿರ್ಮಿಸಲಾಗಿದೆ ಎಂದು ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ಅರಣ್ಯ ಮತ್ತು ಸಾಮಾಜಿಕ ಅರಣ್ಯ ವಲಯದಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿ ಸಿಬ್ಬಂದಿಗೆ ಸಚಿವರು ಪ್ರಶಂಸೆ ಪತ್ರ ವಿತರಿಸಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ರಾಜಣ್ಣ, ಕುಂದಾಣ ಗ್ರಾ.ಪಂ ಅಧ್ಯಕ್ಷರಾದ ನೇತ್ರಾವತಿ ಎ.ಆರ್, ಉಪಾಧ್ಯಕ್ಷರಾದ ನೀಲಮ್ಮ, ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧಾ, ಉಪವಿಭಾಗಾಧಿಕಾರಿ ದುರ್ಗಶ್ರೀ ಎನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ್. ಪಿ.ಎನ್, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಬಾಲಕೃಷ್ಣ, ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಅರಣ್ಯ ಇಲಾಖೆ ಸಿಬ್ಬಂದಿ, ಸ್ಥಳೀಯ ಜನಪ್ರತಿನಿಧಿಗಳು, ಕುಂದಾಣ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

4 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

14 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

16 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

21 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

23 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago