ಪರಿಸರ ಸ್ನೇಹಿ ಕಾರ್ಯಗಳಿಗೆ ಎಲ್ಲರು ಒತ್ತು ನೀಡಬೇಕು-ನವೋದಯ ವಿದ್ಯಾಲಯದ ಪ್ರಾಂಶುಪಾಲ ಆರ್. ಚಕ್ರವರ್ತಿ

ಶಾಲಾ ಆವರಣದಲ್ಲಿ ಮಳೆ ನೀರು ಹಿಂಗಿಸುವುದು, ನೀರು ಶುದ್ಧೀಕಾರಣ, ನೀರು ಮರುಬಳಕೆ ಮತ್ತು ಶಾಲಾ ಆವರಣದಲ್ಲಿ ಹೆಚ್ಚು ಗಿಡಮರಗಳನ್ನು ಬೆಳಸುವುದರ ಮೂಲಕ ಪರಿಸರ ಸ್ನೇಹಿ ಕಾರ್ಯಗಳಿಗೆ ಎಲ್ಲರು ಒತ್ತು ನೀಡಲಾಗುವುದು ಎಂದು ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಆರ್. ಚಕ್ರವರ್ತಿ ತಿಳಿಸಿದರು.

ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆ, ಜವಾಹರ್ ನವೋದಯ ವಿದ್ಯಾಲಯ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದಲ್ಲಿರುವ ನವೋದಯ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನದವನ್ನು ಆಚರಿಸಿ, ಈ ವೇಳೆ ಮಾತನಾಡಿದರು.

ವಲಯ ಅರಣ್ಯ ಅಧಿಕಾರಿಗಳಾದ ರಾಜಶೇಖರ್ ಮಾತನಾಡಿ, ಇಲಾಖೆಯ ವತಿಯಿಂದ ತಾಲೂಕಿನಾದ್ಯಂತ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಎಲ್ಲರೂ ಪ್ರತಿದಿನವನ್ನೂ ಪರಿಸರ ದಿನದಂತೆ ಪರಿಸರವನ್ನು ಕಾಪಾಡಬೇಕು ಎಂದರು.

ಈ ವೇಳೆ ಹೊಂಗೆ, ನೇರಳೆ, ಹಲಸು, ಬೆಟ್ಟದ ನೆಲ್ಲಿ, ಸಿಹಿ ಉಣಸೆ ಮತ್ತು ಹಿಪ್ಪೆ ಸಸಿಗಳನ್ನು ನೆಟ್ಟು ಶಾಲಾ ಮಕ್ಕಳಿಗೆ ನೀರಿನ ಮಿತ ಬಳಕೆಯ ಬಗ್ಗೆ ಅರಿವು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಉಪ ವಲಯ ಅರಣ್ಯಾಧಿಕಾರಿ ಚಂದ್ರಕುಮಾರ್, ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ಲೋಹಿತ್ ವೈ ಟಿ, ಡಾ. ಶಾಂತನು ಗುಪ್ತ, ಕಾರ್ತಿಕ್, ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು  ಭಾಗವಹಿಸಿದ್ದರು.

Ramesh Babu

Journalist

Recent Posts

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

2 hours ago

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

22 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

2 days ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

2 days ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago