ಶಾಲಾ ಆವರಣದಲ್ಲಿ ಮಳೆ ನೀರು ಹಿಂಗಿಸುವುದು, ನೀರು ಶುದ್ಧೀಕಾರಣ, ನೀರು ಮರುಬಳಕೆ ಮತ್ತು ಶಾಲಾ ಆವರಣದಲ್ಲಿ ಹೆಚ್ಚು ಗಿಡಮರಗಳನ್ನು ಬೆಳಸುವುದರ ಮೂಲಕ ಪರಿಸರ ಸ್ನೇಹಿ ಕಾರ್ಯಗಳಿಗೆ ಎಲ್ಲರು ಒತ್ತು ನೀಡಲಾಗುವುದು ಎಂದು ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಆರ್. ಚಕ್ರವರ್ತಿ ತಿಳಿಸಿದರು.
ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆ, ಜವಾಹರ್ ನವೋದಯ ವಿದ್ಯಾಲಯ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದಲ್ಲಿರುವ ನವೋದಯ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನದವನ್ನು ಆಚರಿಸಿ, ಈ ವೇಳೆ ಮಾತನಾಡಿದರು.
ವಲಯ ಅರಣ್ಯ ಅಧಿಕಾರಿಗಳಾದ ರಾಜಶೇಖರ್ ಮಾತನಾಡಿ, ಇಲಾಖೆಯ ವತಿಯಿಂದ ತಾಲೂಕಿನಾದ್ಯಂತ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಎಲ್ಲರೂ ಪ್ರತಿದಿನವನ್ನೂ ಪರಿಸರ ದಿನದಂತೆ ಪರಿಸರವನ್ನು ಕಾಪಾಡಬೇಕು ಎಂದರು.
ಈ ಸಂದರ್ಭದಲ್ಲಿ ಉಪ ವಲಯ ಅರಣ್ಯಾಧಿಕಾರಿ ಚಂದ್ರಕುಮಾರ್, ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ಲೋಹಿತ್ ವೈ ಟಿ, ಡಾ. ಶಾಂತನು ಗುಪ್ತ, ಕಾರ್ತಿಕ್, ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…