ಪರಿಸರ ಸ್ನೇಹಿ ಕಾರ್ಯಗಳಿಗೆ ಎಲ್ಲರು ಒತ್ತು ನೀಡಬೇಕು-ನವೋದಯ ವಿದ್ಯಾಲಯದ ಪ್ರಾಂಶುಪಾಲ ಆರ್. ಚಕ್ರವರ್ತಿ

ಶಾಲಾ ಆವರಣದಲ್ಲಿ ಮಳೆ ನೀರು ಹಿಂಗಿಸುವುದು, ನೀರು ಶುದ್ಧೀಕಾರಣ, ನೀರು ಮರುಬಳಕೆ ಮತ್ತು ಶಾಲಾ ಆವರಣದಲ್ಲಿ ಹೆಚ್ಚು ಗಿಡಮರಗಳನ್ನು ಬೆಳಸುವುದರ ಮೂಲಕ ಪರಿಸರ ಸ್ನೇಹಿ ಕಾರ್ಯಗಳಿಗೆ ಎಲ್ಲರು ಒತ್ತು ನೀಡಲಾಗುವುದು ಎಂದು ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಆರ್. ಚಕ್ರವರ್ತಿ ತಿಳಿಸಿದರು.

ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆ, ಜವಾಹರ್ ನವೋದಯ ವಿದ್ಯಾಲಯ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದಲ್ಲಿರುವ ನವೋದಯ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನದವನ್ನು ಆಚರಿಸಿ, ಈ ವೇಳೆ ಮಾತನಾಡಿದರು.

ವಲಯ ಅರಣ್ಯ ಅಧಿಕಾರಿಗಳಾದ ರಾಜಶೇಖರ್ ಮಾತನಾಡಿ, ಇಲಾಖೆಯ ವತಿಯಿಂದ ತಾಲೂಕಿನಾದ್ಯಂತ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಎಲ್ಲರೂ ಪ್ರತಿದಿನವನ್ನೂ ಪರಿಸರ ದಿನದಂತೆ ಪರಿಸರವನ್ನು ಕಾಪಾಡಬೇಕು ಎಂದರು.

ಈ ವೇಳೆ ಹೊಂಗೆ, ನೇರಳೆ, ಹಲಸು, ಬೆಟ್ಟದ ನೆಲ್ಲಿ, ಸಿಹಿ ಉಣಸೆ ಮತ್ತು ಹಿಪ್ಪೆ ಸಸಿಗಳನ್ನು ನೆಟ್ಟು ಶಾಲಾ ಮಕ್ಕಳಿಗೆ ನೀರಿನ ಮಿತ ಬಳಕೆಯ ಬಗ್ಗೆ ಅರಿವು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಉಪ ವಲಯ ಅರಣ್ಯಾಧಿಕಾರಿ ಚಂದ್ರಕುಮಾರ್, ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ಲೋಹಿತ್ ವೈ ಟಿ, ಡಾ. ಶಾಂತನು ಗುಪ್ತ, ಕಾರ್ತಿಕ್, ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು  ಭಾಗವಹಿಸಿದ್ದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

9 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

10 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

19 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago