ಪರೀಕ್ಷಾ ಮಂಡಳಿ ಅಧ್ಯಕ್ಷ ತಿಮ್ಮರಾಯಪ್ಪಗೆ ಬೀಳ್ಕೊಡುಗೆ

ಕನ್ನಡ ಅಧ್ಯಾಪಕರುಗಳು ಬೇರೆ ವಿಷಯಗಳ ಅಧ್ಯಾಪಕರುಗಳಿಗೆ ಹೋಲಿಕೆ ಮಾಡಿದರೆ ಮಾದರಿ ಎನ್ನಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಮುನಿನಾರಾಯಣಪ್ಪ ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸಕೋಟೆ ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕನ್ನಡ ಅಧ್ಯಾಪಕರ ಒಕ್ಕೂಟದ ಸಹಯೋಗದಲ್ಲಿ  ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರೊಫೆಸರ್ ತಿಮ್ಮರಾಯಪ್ಪ ಅವರು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಪರೀಕ್ಷಾ ಮಂಡಳಿಯ ಅಧ್ಯಕ್ಷರಾಗಿ 3 ವರ್ಷಗಳ ಕಾಲ ಪ್ರಶ್ನೆ ಪತ್ರಿಕೆ ತಯಾರಿ, ಮೌಲ್ಯಮಾಪನ ಕಾರ್ಯಗಳನ್ನು ಸಕಾಲಕ್ಕೆ ನೆರವೇರಿಸಿ , ಇವರು ಹಿರಿಯರಲ್ಲಿ ಹಿರಿಯರಾಗಿ, ಕಿರಿಯರಲ್ಲಿ ಕಿರಿಯರಾಗಿ ಅಜಾತಶತ್ರುವಾಗಿ ತಮ್ಮ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ, ಸದ್ಯ ಪರೀಕ್ಷಾ ಮಂಡಳಿಯ ಸದಸ್ಯರಾಗಿ ಮುಂದುವರಿದಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಡಾ. ಚೆಲುವನಾರಾಯಣ, ಡಾ.ಈರಣ್ಣ,ಡಾ. ಅಂಜನೇಯರೆಡ್ಡಿ, ಡಾ.ಅಶ್ವಥ್ ನಾರಾಯಣ್, ಡಾ. ವಿಜಯೇಂದ್ರ, ಡಾ. ಕೃಷ್ಣಪ್ಪ,ಡಾ.ಎಂ ಚಿಕ್ಕಣ್ಣ, ಪ್ರವೀಣ್, ಕುಬೇರಗೌಡ, ಶೆಟ್ಟಿನಾಯಕ, ನಾಗೇಶ್, ದೇವರಾಜ ಎಂ ಸೇರಿದಂತೆ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

5 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

6 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

6 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

7 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

19 hours ago