ಪರ್ಸ್ ನಲ್ಲಿದ್ದ ಒಂದು ಲಕ್ಷದ ಐವತ್ತು‌ ಸಾವಿರ ಬೆಲೆಯ 30ಗ್ರಾಂ ಚಿನ್ನದ ಸರ ಕಳವು

ಪರ್ಸ್ ನಲ್ಲಿದ್ದ ಒಂದು ಲಕ್ಷದ ಐವತ್ತು‌ ಸಾವಿರ ರೂ. ಬೆಲೆ ಬಾಳುವ 30ಗ್ರಾಂ ಚಿನ್ನದ ಸರವನ್ನು ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯದ ಬಳಿ ನಡೆದಿದೆ.

ನಿರ್ಮಲಾ (42) ಚಿನ್ನದ ಸರ ಕಳೆದು ಕೊಂಡ ಮಹಿಳೆ. ಶ್ರೀನಿವಾಸಪುರ ಮೂಲದ ಇವರು ತನ್ನ ಕುಟುಂಬದ ಜೊತೆ ಯಲಹಂಕದ ಸಂಬಂಧಿಕರ ಮನೆಗೆ ತೆರಳಿ, ಅಲ್ಲಿಂದ ಅ.21ರಂದು ಘಾಟಿ ಸುಬ್ರಹ್ಮಣ್ಯ ದೇವಾಲಯ ದರ್ಶನಕ್ಕೆ ಬಂದು ಮಧ್ಯಾಹ್ನ ಸುಮಾರು 1:30ರ ಸಮಯದಲ್ಲಿ ದೇವಸ್ಥಾನ ಬಳಿಯ ಇರುವ ಹುತ್ತಕ್ಕೆ ಪೂಜೆ ಮಾಡಲು ಚಿನ್ನದ ಸರ ಇದ್ದ ಬ್ಯಾಗ್ ನ್ನು ಹುತ್ತದ ಪಕ್ಕ ಇಟ್ಟು ಪೂಜೆ ಮಾಡುವಾಗ ಘಟನೆ ನಡೆದಿದೆ.

ನಿರ್ಮಾಲ ಅವರು ಹುತ್ತಕ್ಕೆ ಪೂಜೆ ಮಾಡುವಲ್ಲಿ ಮಗ್ನರಾಗಿದ್ದಾಗ, ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ಬ್ಯಾಗ್ ನಲ್ಲಿದ್ದ ಚಿನ್ನದ ಸರ ಹಾಗೂ ಹಣ ಇರುವ ಪರ್ಸ್ ನ್ನ ದೋಚಿ ಬ್ಯಾಗ್ ನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ನಿರ್ಮಲಾ ಅವರು ಸುಮಾರು 15 ನಿಮೀಷ ಪೂಜೆ ಮಾಡಿ ಬಾಗ್ ತೆಗೆದುಕೊಂಡು ಅಲ್ಲಿಂದ ಮತ್ತೆ ದೇವರ ದರ್ಶನಕ್ಕೆ ಹೋಗಿ ವಾಪಸ್ ಮಧ್ಯಾಹ್ನ 2:30ಕ್ಕೆ ದೇವಸ್ಥಾನದಿಂದ ಆಚೆ ಬಂದು ದೊಡ್ಡಬಳ್ಳಾಪುರಕ್ಕೆ ಹೋಗಲು ಕೆ.ಎಸ್.ಅರ್.ಟಿ.ಸಿ ಬಸ್ ಹತ್ತಿದ್ದಾರೆ. ಸುಮಾರು 1 ಕಿಮೀ ಮುಂದೆ ಬಂದು ಬ್ಯಾಗ್ ತೆಗೆದು ನೋಡಿದಾಗ 1,50,00 ಮೌಲ್ಯದ 30 ಗ್ರಾಂ ಚಿನ್ನದ ಸರ ಹಾಗೂ ನಗದು ಇಟ್ಟಿದ್ದ ಪರ್ಸ್ ನಾಪತ್ತೆ ಆಗಿರುತ್ತದೆ.

ಗಾಬರಿಗೊಂಡ ನಿರ್ಮಲಾ ಮತ್ತೆ ವಾಪಸ್ ಹುತ್ತದ ಬಳಿ ಬಂದು ನೋಡಿದರೂ, ಮನೆಯಲ್ಲಿ ಬಂದು ಹುಡುಕಾಡಿದರೂ ಚಿನ್ನದ ಸರ ಸಿಗದ ಕಾರಣ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ಈ ಕುರಿತು ದೂರು ನೀಡಿರುತ್ತಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

8 minutes ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

2 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

9 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

17 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

18 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

2 days ago