ಪರ್ಸ್ ನಲ್ಲಿದ್ದ ಒಂದು ಲಕ್ಷದ ಐವತ್ತು‌ ಸಾವಿರ ಬೆಲೆಯ 30ಗ್ರಾಂ ಚಿನ್ನದ ಸರ ಕಳವು

ಪರ್ಸ್ ನಲ್ಲಿದ್ದ ಒಂದು ಲಕ್ಷದ ಐವತ್ತು‌ ಸಾವಿರ ರೂ. ಬೆಲೆ ಬಾಳುವ 30ಗ್ರಾಂ ಚಿನ್ನದ ಸರವನ್ನು ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯದ ಬಳಿ ನಡೆದಿದೆ.

ನಿರ್ಮಲಾ (42) ಚಿನ್ನದ ಸರ ಕಳೆದು ಕೊಂಡ ಮಹಿಳೆ. ಶ್ರೀನಿವಾಸಪುರ ಮೂಲದ ಇವರು ತನ್ನ ಕುಟುಂಬದ ಜೊತೆ ಯಲಹಂಕದ ಸಂಬಂಧಿಕರ ಮನೆಗೆ ತೆರಳಿ, ಅಲ್ಲಿಂದ ಅ.21ರಂದು ಘಾಟಿ ಸುಬ್ರಹ್ಮಣ್ಯ ದೇವಾಲಯ ದರ್ಶನಕ್ಕೆ ಬಂದು ಮಧ್ಯಾಹ್ನ ಸುಮಾರು 1:30ರ ಸಮಯದಲ್ಲಿ ದೇವಸ್ಥಾನ ಬಳಿಯ ಇರುವ ಹುತ್ತಕ್ಕೆ ಪೂಜೆ ಮಾಡಲು ಚಿನ್ನದ ಸರ ಇದ್ದ ಬ್ಯಾಗ್ ನ್ನು ಹುತ್ತದ ಪಕ್ಕ ಇಟ್ಟು ಪೂಜೆ ಮಾಡುವಾಗ ಘಟನೆ ನಡೆದಿದೆ.

ನಿರ್ಮಾಲ ಅವರು ಹುತ್ತಕ್ಕೆ ಪೂಜೆ ಮಾಡುವಲ್ಲಿ ಮಗ್ನರಾಗಿದ್ದಾಗ, ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ಬ್ಯಾಗ್ ನಲ್ಲಿದ್ದ ಚಿನ್ನದ ಸರ ಹಾಗೂ ಹಣ ಇರುವ ಪರ್ಸ್ ನ್ನ ದೋಚಿ ಬ್ಯಾಗ್ ನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ನಿರ್ಮಲಾ ಅವರು ಸುಮಾರು 15 ನಿಮೀಷ ಪೂಜೆ ಮಾಡಿ ಬಾಗ್ ತೆಗೆದುಕೊಂಡು ಅಲ್ಲಿಂದ ಮತ್ತೆ ದೇವರ ದರ್ಶನಕ್ಕೆ ಹೋಗಿ ವಾಪಸ್ ಮಧ್ಯಾಹ್ನ 2:30ಕ್ಕೆ ದೇವಸ್ಥಾನದಿಂದ ಆಚೆ ಬಂದು ದೊಡ್ಡಬಳ್ಳಾಪುರಕ್ಕೆ ಹೋಗಲು ಕೆ.ಎಸ್.ಅರ್.ಟಿ.ಸಿ ಬಸ್ ಹತ್ತಿದ್ದಾರೆ. ಸುಮಾರು 1 ಕಿಮೀ ಮುಂದೆ ಬಂದು ಬ್ಯಾಗ್ ತೆಗೆದು ನೋಡಿದಾಗ 1,50,00 ಮೌಲ್ಯದ 30 ಗ್ರಾಂ ಚಿನ್ನದ ಸರ ಹಾಗೂ ನಗದು ಇಟ್ಟಿದ್ದ ಪರ್ಸ್ ನಾಪತ್ತೆ ಆಗಿರುತ್ತದೆ.

ಗಾಬರಿಗೊಂಡ ನಿರ್ಮಲಾ ಮತ್ತೆ ವಾಪಸ್ ಹುತ್ತದ ಬಳಿ ಬಂದು ನೋಡಿದರೂ, ಮನೆಯಲ್ಲಿ ಬಂದು ಹುಡುಕಾಡಿದರೂ ಚಿನ್ನದ ಸರ ಸಿಗದ ಕಾರಣ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ಈ ಕುರಿತು ದೂರು ನೀಡಿರುತ್ತಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

3 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

14 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

15 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

19 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

20 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

1 day ago