ಪರ್ಸ್ ನಲ್ಲಿದ್ದ ಒಂದು ಲಕ್ಷದ ಐವತ್ತು‌ ಸಾವಿರ ಬೆಲೆಯ 30ಗ್ರಾಂ ಚಿನ್ನದ ಸರ ಕಳವು

ಪರ್ಸ್ ನಲ್ಲಿದ್ದ ಒಂದು ಲಕ್ಷದ ಐವತ್ತು‌ ಸಾವಿರ ರೂ. ಬೆಲೆ ಬಾಳುವ 30ಗ್ರಾಂ ಚಿನ್ನದ ಸರವನ್ನು ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯದ ಬಳಿ ನಡೆದಿದೆ.

ನಿರ್ಮಲಾ (42) ಚಿನ್ನದ ಸರ ಕಳೆದು ಕೊಂಡ ಮಹಿಳೆ. ಶ್ರೀನಿವಾಸಪುರ ಮೂಲದ ಇವರು ತನ್ನ ಕುಟುಂಬದ ಜೊತೆ ಯಲಹಂಕದ ಸಂಬಂಧಿಕರ ಮನೆಗೆ ತೆರಳಿ, ಅಲ್ಲಿಂದ ಅ.21ರಂದು ಘಾಟಿ ಸುಬ್ರಹ್ಮಣ್ಯ ದೇವಾಲಯ ದರ್ಶನಕ್ಕೆ ಬಂದು ಮಧ್ಯಾಹ್ನ ಸುಮಾರು 1:30ರ ಸಮಯದಲ್ಲಿ ದೇವಸ್ಥಾನ ಬಳಿಯ ಇರುವ ಹುತ್ತಕ್ಕೆ ಪೂಜೆ ಮಾಡಲು ಚಿನ್ನದ ಸರ ಇದ್ದ ಬ್ಯಾಗ್ ನ್ನು ಹುತ್ತದ ಪಕ್ಕ ಇಟ್ಟು ಪೂಜೆ ಮಾಡುವಾಗ ಘಟನೆ ನಡೆದಿದೆ.

ನಿರ್ಮಾಲ ಅವರು ಹುತ್ತಕ್ಕೆ ಪೂಜೆ ಮಾಡುವಲ್ಲಿ ಮಗ್ನರಾಗಿದ್ದಾಗ, ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ಬ್ಯಾಗ್ ನಲ್ಲಿದ್ದ ಚಿನ್ನದ ಸರ ಹಾಗೂ ಹಣ ಇರುವ ಪರ್ಸ್ ನ್ನ ದೋಚಿ ಬ್ಯಾಗ್ ನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ನಿರ್ಮಲಾ ಅವರು ಸುಮಾರು 15 ನಿಮೀಷ ಪೂಜೆ ಮಾಡಿ ಬಾಗ್ ತೆಗೆದುಕೊಂಡು ಅಲ್ಲಿಂದ ಮತ್ತೆ ದೇವರ ದರ್ಶನಕ್ಕೆ ಹೋಗಿ ವಾಪಸ್ ಮಧ್ಯಾಹ್ನ 2:30ಕ್ಕೆ ದೇವಸ್ಥಾನದಿಂದ ಆಚೆ ಬಂದು ದೊಡ್ಡಬಳ್ಳಾಪುರಕ್ಕೆ ಹೋಗಲು ಕೆ.ಎಸ್.ಅರ್.ಟಿ.ಸಿ ಬಸ್ ಹತ್ತಿದ್ದಾರೆ. ಸುಮಾರು 1 ಕಿಮೀ ಮುಂದೆ ಬಂದು ಬ್ಯಾಗ್ ತೆಗೆದು ನೋಡಿದಾಗ 1,50,00 ಮೌಲ್ಯದ 30 ಗ್ರಾಂ ಚಿನ್ನದ ಸರ ಹಾಗೂ ನಗದು ಇಟ್ಟಿದ್ದ ಪರ್ಸ್ ನಾಪತ್ತೆ ಆಗಿರುತ್ತದೆ.

ಗಾಬರಿಗೊಂಡ ನಿರ್ಮಲಾ ಮತ್ತೆ ವಾಪಸ್ ಹುತ್ತದ ಬಳಿ ಬಂದು ನೋಡಿದರೂ, ಮನೆಯಲ್ಲಿ ಬಂದು ಹುಡುಕಾಡಿದರೂ ಚಿನ್ನದ ಸರ ಸಿಗದ ಕಾರಣ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ಈ ಕುರಿತು ದೂರು ನೀಡಿರುತ್ತಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

1 day ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago