Categories: ಕೋಲಾರ

ಪಶು ಇಲಾಖೆಯ ಭ್ರಷ್ಟಾಚಾರ ತನಿಖೆಗೆ ಒತ್ತಾಯಿಸಿ ಮೇ15 ರಂದು ರೈತ ಸಂಘದಿಂದ ಪ್ರತಿಭಟನೆ

ಕೋಲಾರ: ಪಶು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಸಮರ್ಪಕ ಗ್ರಾಮೀಣ ಪಶು ವೈದ್ಯಕೀಯ ಸೇವೆ ಸಲ್ಲಿಸುವ ಜೊತೆಗೆ ಇಲಾಖೆಯಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಬೇಕೆಂದು ಮೇ.15 ರ ಗುರುವಾರ ಜಾನುವಾರುಗಳ ಸಮೇತ ಪಶು ಇಲಾಖೆ ಮುತ್ತಿಗೆ ಹಾಕಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಮೆ ಆವರಣದಲ್ಲಿ ಕರೆದಿದ್ದ ಸಬೆಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪಶು ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೆಪದಲ್ಲಿ ಗಡಿಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕವಾದ ಪಶು ವೈದ್ಯಕೀಯ ಸೇವೆ ಸಿಗದೆ ಹಸುಗಳ ರಕ್ಷಣೆಗಾಗಿ ಬಡ ರೈತರು ಸಾವಿರಾರು ರೂಪಾಯಿ ಖರ್ಚು ಮಾಡಿ ಖಾಸಗಿ ಪಶು ವೈದ್ಯರನ್ನು ಅವಲಂಭಿಸಬೇಕಾದ ಪರಿಸ್ತಿತಿ ಇದ್ದರೂ, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವಲ್ಲಿ ಪಶು ಸಚಿವರು ವಿಫಲವಾಗಿದ್ದಾರೆಂದು. ಅವ್ಯವಸ್ಥೆ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.

ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಹಾಯಕ ನಿರ್ದೇಶಕರಾದ ಡಾ, ರಾಮು ಗಮನಕ್ಕೆ ಪಶು ಇಲಾಖೆಯ ಅವ್ಯವಸ್ತೆ ವಿರುದ್ದ ಗಮನಕ್ಕೆ ತಂದರೆ ಸ್ಥಳೀಯ ಶಾಸಕರ ಅನುಮತಿ ಇಲ್ಲದೆ ಯಾವುದೇ ನಿರ್ಧಾರ ಕೈಗೊಳ್ಳಲ್ಲ ಎಂಬ ಬೇಜವಬ್ದಾರಿ ಉತ್ತರ ನೀಡುವುದರ ಜೊತೆಗೆ ಸರ್ಕಾರದಿಂದ ಬರುವ ಗ್ರಾಮೀಣ ಪಶುಗಳ ಔಷಧಿಗಳು ಮ್ಯಾಟ್‌ಗಳು ಮತ್ತಿತರ ಎಲ್ಲಾ ಸೌಲಭ್ಯಗಳನ್ನು ರೈತರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಬರುವ ಅನುದಾನಗಳಲ್ಲಿ ಕಾಳಸಂತೆಯಲ್ಲಿ ಮಾರಾಟ ಮಾಡುವ ದೊಡ್ಡ ಜಾಲವೇ ಪಶು ಇಲಾಖೆಯಲ್ಲಿ ಹತ್ತಾರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆಂದು ಆರೋಪ ಮಾಡಿದರು.

ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ ಪಶು ಇಲಾಖೆ ಅಲ್ಲಿನ ಸಿಬ್ಬಂದಿಗೆ ಚಿನ್ನದ ಮೊಟ್ಟೆ ಇಡುವ ಇಲಾಖೆಯಾಗಿ ಮಾರ್ಪಟ್ಟಿದೆ. ಪ್ರತಿ ಹೆಜ್ಜೆ ಹೆಜ್ಜೆಗೂ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮೀಣ ಸೇವೆ ಮಾಡಬೇಕಾದ ವೈದ್ಯರು ನಾಪತ್ತೆಯಾಗಿದ್ದಾರೆ. ಇನ್ನು ಗಡಿಭಾಗದ ಪಶು ಇಲಾಖಾ ಕೇಂದ್ರಗಳಲ್ಲಿ ಗುತ್ತಿಗೆ ನೌಕರರೇ ಪಶು ವೈದ್ಯರಾಗಿ ಕೆಲಸ ನಿರ್ವಹಿಸಿ ಅಲ್ಲಿ ಕೆಲಸ ನಿರ್ವಹಿಸಬೇಕಾದ ವೈದ್ಯರು ಗ್ರಾಮೀಣ ಸೇವೆಗೆ ಇದ್ದು ಇಲ್ಲದಂತಾಗಿದ್ದಾರೆಂದು ಆಕ್ರೋಷ ವ್ಯಕ್ತಪಡಿಸಿದರು.

ಹಸುಗಳಿಗೆ ಬೇಸಿಗೆಯಲ್ಲಿ ಬಾದಿಸುತ್ತಿರುವ ಚರ್ಮರೋಗ, ಗಂಟು ರೋಗ ಹಾಗೂ ಕೆಚ್ಚಲಬಾವು ಒಂದು ಕಡೆ ಯಾದರೆ, ಮೊತ್ತೊಂದು ಕಡೆ ಗರ್ಭ ಧರಿಸುವ ಹಸುಗಳಿಗೆ ಕರು ಹಾಕಿದಾಗ ಅದಕ್ಕೆ ಚಿಕಿತ್ಸೆ ನೀಡಬೇಕಾದರೆ ಬಡವನು ೫೦ ಸಾರಿ ವೈದ್ಯರಿಗೆ ಕರೆ ಮಾಡಿದರೂ ಕರೆ ಸ್ವೀಕರಿಸುವುದಿಲ್ಲ. ಕಡೆಯದಾಗಿ ಹಸು ರಕ್ಷಣೆಗೆ ರೈತನು ಆಂಧ್ರ, ತಮಿಳುನಾಡು ಮೂಲದ ನಕಲಿ ಪಶು ವೈದ್ಯರನ್ನು ಅವಲಂಭಿತಬೇಕಾದ ಪರಿಸ್ಥಿತಿ ಜೊತೆಗೆ ಸರ್ಕಾರದಿಂದ ಬರುವ ಔಷಧಿಗಳನ್ನು ಸಮರ್ಪಕವಾಗಿ ವಿತರಣೆ ಮಾಡದೆ ಗೋದಾಮುಗಳಲ್ಲಿ ಅವಧಿ ಮೀರುತ್ತಿದೆ. ಜೊತೆಗೆ ಆ ಔಷದಿಗಳನ್ನು ರೈತರ ಲೆಕ್ಕದಲ್ಲಿ ದಾಖಲೆ ತೋರಿಸಿ ಖಾಸಗಿ ಮೆಡಿಕಲ್ ಸ್ಟೋರ್‌ಗಳಿಗೆ ಮಾರಾಟ ಮಾಡುವ ದಂದೆಯನ್ನು ಮಾಡಿಕೊಂಡಿದ್ದಾರೆಂದು ಕಿಡಿಕಾರಿದರು.

ಹತ್ತಾರು ವರ್ಷಗಳಿಂದ ಇಲಾಖೆಯಲ್ಲಿ ಬೇರೆ ಬಿಟ್ಟು ಹೆಜ್ಜೆ ಹೆಜ್ಜೆಗೂ ಭ್ರಷ್ಟಾಚಾರ ನಡೆಸುತ್ತಿರುವ ಸಿಬ್ಬಂದಿಯನ್ನು ಬೇರೆ ಕಡೆ ವರ್ಗಾವಣೆ ಮಾಡಿ, ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಸಮರ್ಪಕವಾದ ಗ್ರಾಮೀಣ ಸೇವೆ ಒದಗಿಸುವಂತೆ ಮೇ.15 ರ ಗುರುವಾರ ಜಾನುವಾರುಗಳ ಸಮೇತ ಪಶು ಇಲಾಖೆ ಮುತ್ತಿಗೆ ಹಾಕುವ ನಿರ್ದಾರವನ್ನು ಕೈಗೊಳ್ಳಲಾಯಿತು ಎಂದರು.

ಸಭೆಯಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ತಾಲ್ಲೂಕು ಅಧ್ಯಕ್ಷ ಕದರಿನತ್ತ ಅಪ್ಪೋಜಿರಾವ್, ಯಲ್ಲಣ್ಣ, ಕಾಮಸಮುದ್ರ ಹೋಬಳಿ ಅಧ್ಯಕ್ಷ ಮುನಿಕೃಷ್ಣ, ವಿಶ್ವ, ಮುನಿರಾಜು, ಚಾಂದ್‌ಪಾಷ, ಬಾಬಾಜಾನ್, ಸುರೇಶ್‌ಬಾಬು, ರಾಮಸಾಗರ ವೇಣು, ಯಲ್ಲಣ್ಣ, ಶೈಲಜ, ಅಕ್ಕಮ್ಮ, ವೆಂಕಟಮ್ಮ ಮುಂತಾದವರು ಇದ್ದರು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 hour ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

5 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

7 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

18 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

19 hours ago