Categories: ಕೋಲಾರ

ಪಶು ಇಲಾಖೆಯ ಭ್ರಷ್ಟಾಚಾರ ತನಿಖೆಗೆ ಒತ್ತಾಯಿಸಿ ಮೇ15 ರಂದು ರೈತ ಸಂಘದಿಂದ ಪ್ರತಿಭಟನೆ

ಕೋಲಾರ: ಪಶು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಸಮರ್ಪಕ ಗ್ರಾಮೀಣ ಪಶು ವೈದ್ಯಕೀಯ ಸೇವೆ ಸಲ್ಲಿಸುವ ಜೊತೆಗೆ ಇಲಾಖೆಯಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಬೇಕೆಂದು ಮೇ.15 ರ ಗುರುವಾರ ಜಾನುವಾರುಗಳ ಸಮೇತ ಪಶು ಇಲಾಖೆ ಮುತ್ತಿಗೆ ಹಾಕಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಮೆ ಆವರಣದಲ್ಲಿ ಕರೆದಿದ್ದ ಸಬೆಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪಶು ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೆಪದಲ್ಲಿ ಗಡಿಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕವಾದ ಪಶು ವೈದ್ಯಕೀಯ ಸೇವೆ ಸಿಗದೆ ಹಸುಗಳ ರಕ್ಷಣೆಗಾಗಿ ಬಡ ರೈತರು ಸಾವಿರಾರು ರೂಪಾಯಿ ಖರ್ಚು ಮಾಡಿ ಖಾಸಗಿ ಪಶು ವೈದ್ಯರನ್ನು ಅವಲಂಭಿಸಬೇಕಾದ ಪರಿಸ್ತಿತಿ ಇದ್ದರೂ, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವಲ್ಲಿ ಪಶು ಸಚಿವರು ವಿಫಲವಾಗಿದ್ದಾರೆಂದು. ಅವ್ಯವಸ್ಥೆ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.

ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಹಾಯಕ ನಿರ್ದೇಶಕರಾದ ಡಾ, ರಾಮು ಗಮನಕ್ಕೆ ಪಶು ಇಲಾಖೆಯ ಅವ್ಯವಸ್ತೆ ವಿರುದ್ದ ಗಮನಕ್ಕೆ ತಂದರೆ ಸ್ಥಳೀಯ ಶಾಸಕರ ಅನುಮತಿ ಇಲ್ಲದೆ ಯಾವುದೇ ನಿರ್ಧಾರ ಕೈಗೊಳ್ಳಲ್ಲ ಎಂಬ ಬೇಜವಬ್ದಾರಿ ಉತ್ತರ ನೀಡುವುದರ ಜೊತೆಗೆ ಸರ್ಕಾರದಿಂದ ಬರುವ ಗ್ರಾಮೀಣ ಪಶುಗಳ ಔಷಧಿಗಳು ಮ್ಯಾಟ್‌ಗಳು ಮತ್ತಿತರ ಎಲ್ಲಾ ಸೌಲಭ್ಯಗಳನ್ನು ರೈತರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಬರುವ ಅನುದಾನಗಳಲ್ಲಿ ಕಾಳಸಂತೆಯಲ್ಲಿ ಮಾರಾಟ ಮಾಡುವ ದೊಡ್ಡ ಜಾಲವೇ ಪಶು ಇಲಾಖೆಯಲ್ಲಿ ಹತ್ತಾರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆಂದು ಆರೋಪ ಮಾಡಿದರು.

ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ ಪಶು ಇಲಾಖೆ ಅಲ್ಲಿನ ಸಿಬ್ಬಂದಿಗೆ ಚಿನ್ನದ ಮೊಟ್ಟೆ ಇಡುವ ಇಲಾಖೆಯಾಗಿ ಮಾರ್ಪಟ್ಟಿದೆ. ಪ್ರತಿ ಹೆಜ್ಜೆ ಹೆಜ್ಜೆಗೂ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮೀಣ ಸೇವೆ ಮಾಡಬೇಕಾದ ವೈದ್ಯರು ನಾಪತ್ತೆಯಾಗಿದ್ದಾರೆ. ಇನ್ನು ಗಡಿಭಾಗದ ಪಶು ಇಲಾಖಾ ಕೇಂದ್ರಗಳಲ್ಲಿ ಗುತ್ತಿಗೆ ನೌಕರರೇ ಪಶು ವೈದ್ಯರಾಗಿ ಕೆಲಸ ನಿರ್ವಹಿಸಿ ಅಲ್ಲಿ ಕೆಲಸ ನಿರ್ವಹಿಸಬೇಕಾದ ವೈದ್ಯರು ಗ್ರಾಮೀಣ ಸೇವೆಗೆ ಇದ್ದು ಇಲ್ಲದಂತಾಗಿದ್ದಾರೆಂದು ಆಕ್ರೋಷ ವ್ಯಕ್ತಪಡಿಸಿದರು.

ಹಸುಗಳಿಗೆ ಬೇಸಿಗೆಯಲ್ಲಿ ಬಾದಿಸುತ್ತಿರುವ ಚರ್ಮರೋಗ, ಗಂಟು ರೋಗ ಹಾಗೂ ಕೆಚ್ಚಲಬಾವು ಒಂದು ಕಡೆ ಯಾದರೆ, ಮೊತ್ತೊಂದು ಕಡೆ ಗರ್ಭ ಧರಿಸುವ ಹಸುಗಳಿಗೆ ಕರು ಹಾಕಿದಾಗ ಅದಕ್ಕೆ ಚಿಕಿತ್ಸೆ ನೀಡಬೇಕಾದರೆ ಬಡವನು ೫೦ ಸಾರಿ ವೈದ್ಯರಿಗೆ ಕರೆ ಮಾಡಿದರೂ ಕರೆ ಸ್ವೀಕರಿಸುವುದಿಲ್ಲ. ಕಡೆಯದಾಗಿ ಹಸು ರಕ್ಷಣೆಗೆ ರೈತನು ಆಂಧ್ರ, ತಮಿಳುನಾಡು ಮೂಲದ ನಕಲಿ ಪಶು ವೈದ್ಯರನ್ನು ಅವಲಂಭಿತಬೇಕಾದ ಪರಿಸ್ಥಿತಿ ಜೊತೆಗೆ ಸರ್ಕಾರದಿಂದ ಬರುವ ಔಷಧಿಗಳನ್ನು ಸಮರ್ಪಕವಾಗಿ ವಿತರಣೆ ಮಾಡದೆ ಗೋದಾಮುಗಳಲ್ಲಿ ಅವಧಿ ಮೀರುತ್ತಿದೆ. ಜೊತೆಗೆ ಆ ಔಷದಿಗಳನ್ನು ರೈತರ ಲೆಕ್ಕದಲ್ಲಿ ದಾಖಲೆ ತೋರಿಸಿ ಖಾಸಗಿ ಮೆಡಿಕಲ್ ಸ್ಟೋರ್‌ಗಳಿಗೆ ಮಾರಾಟ ಮಾಡುವ ದಂದೆಯನ್ನು ಮಾಡಿಕೊಂಡಿದ್ದಾರೆಂದು ಕಿಡಿಕಾರಿದರು.

ಹತ್ತಾರು ವರ್ಷಗಳಿಂದ ಇಲಾಖೆಯಲ್ಲಿ ಬೇರೆ ಬಿಟ್ಟು ಹೆಜ್ಜೆ ಹೆಜ್ಜೆಗೂ ಭ್ರಷ್ಟಾಚಾರ ನಡೆಸುತ್ತಿರುವ ಸಿಬ್ಬಂದಿಯನ್ನು ಬೇರೆ ಕಡೆ ವರ್ಗಾವಣೆ ಮಾಡಿ, ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಸಮರ್ಪಕವಾದ ಗ್ರಾಮೀಣ ಸೇವೆ ಒದಗಿಸುವಂತೆ ಮೇ.15 ರ ಗುರುವಾರ ಜಾನುವಾರುಗಳ ಸಮೇತ ಪಶು ಇಲಾಖೆ ಮುತ್ತಿಗೆ ಹಾಕುವ ನಿರ್ದಾರವನ್ನು ಕೈಗೊಳ್ಳಲಾಯಿತು ಎಂದರು.

ಸಭೆಯಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ತಾಲ್ಲೂಕು ಅಧ್ಯಕ್ಷ ಕದರಿನತ್ತ ಅಪ್ಪೋಜಿರಾವ್, ಯಲ್ಲಣ್ಣ, ಕಾಮಸಮುದ್ರ ಹೋಬಳಿ ಅಧ್ಯಕ್ಷ ಮುನಿಕೃಷ್ಣ, ವಿಶ್ವ, ಮುನಿರಾಜು, ಚಾಂದ್‌ಪಾಷ, ಬಾಬಾಜಾನ್, ಸುರೇಶ್‌ಬಾಬು, ರಾಮಸಾಗರ ವೇಣು, ಯಲ್ಲಣ್ಣ, ಶೈಲಜ, ಅಕ್ಕಮ್ಮ, ವೆಂಕಟಮ್ಮ ಮುಂತಾದವರು ಇದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

5 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

8 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

20 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

21 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

23 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago