ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್ (28) ಬಂಧಿತ ಆರೋಪಿ.
ಕೌಂಟರ್ ಇಂಟಲಿಜೆನ್ಸ್ ಸೆಲ್ ಹಾಗೂ ಸೆಂಟ್ರಲ್ ಐಬಿ ಅಧಿಕಾರಿಗಳಿಂದ ಬಂದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿ ಕಳೆದ ಎರಡು ವರ್ಷಗಳಿಂದ ಇನ್ಸ್ಟಾಗ್ರಾಂ ಮೂಲಕ ಪಾಕಿಸ್ತಾನ ಮೂಲದ ಶಾಜದ್ ಬುಟ್ಟಿ ನೆಟ್ವರ್ಕ್ಗೆ ಸಂಬಂಧಿಸಿದ ಗ್ಯಾಂಗ್ನೊಂದಿಗೆ ಸಂಪರ್ಕದಲ್ಲಿದ್ದ ಎನ್ನಲಾಗಿದೆ. Hammadmemon333 ಹೆಸರಿನ ಇನ್ಸ್ಟಾಗ್ರಾಂ ಖಾತೆಯ ಮೂಲಕ ಸಂಪರ್ಕ ಹೊಂದಿದ್ದ ಆರೋಪಿಯು, ತನ್ನ ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ಮಾಹಿತಿಗಳನ್ನು ನೀಡಿ ಆ ಖಾತೆಗೆ ಲಾಗಿನ್ ಆಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಾಕಿಸ್ತಾನಿ ಗ್ಯಾಂಗ್ ಗಣ್ಯರು ಹಾಗೂ ಉದ್ಯಮಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುವ ಚಟುವಟಿಕೆಗಳಲ್ಲಿ ತೊಡಗಿರುವ ಶಂಕೆ ಇದ್ದು, ಇನ್ಸ್ಟಾಗ್ರಾಂ ಖಾತೆಗಳ ಮೂಲಕ ಸಂಪರ್ಕ ಸಾಧಿಸಿ ವಿವಿಧ ಕೆಲಸಗಳನ್ನು ಮಾಡಿಸುತ್ತಿತ್ತು ಎನ್ನಲಾಗಿದೆ.
ಅಬೂಬಕರ್ ಎಸಿ ರಿಪೇರಿ ಕೆಲಸ ಮಾಡುತ್ತಿದ್ದು, ಬೆಂಗಳೂರಿನ ಮಸೀದಿಯೊಂದರಲ್ಲಿ ಪಾಠ ಮಾಡುತ್ತಿದ್ದ ಎನ್ನಲಾಗಿದೆ. ಗ್ಯಾಂಗ್ನ ಸೂಚನೆಯಂತೆ ಕೇರಳ ಹಾಗೂ ದೆಹಲಿಗೆ ತೆರಳಿ ತರಬೇತಿ ಪಡೆದು ಬಂದಿದ್ದಾನೆ ಎಂಬ ಮಾಹಿತಿಯೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.
ಇಸ್ಲಾಂಪುರದಲ್ಲಿರುವ ಮನೆಯಲ್ಲಿದ್ದ ವೇಳೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಆರೋಪಿಯ ವಿರುದ್ಧ ಬಿಎನ್ಎಸ್ ಕಾಯ್ದೆಯ ಸೆಕ್ಷನ್ 113(3) ಹಾಗೂ 197(2) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…