ನಿನ್ನೆ ನೂತನ ರಾಜ್ಯಸಭಾ ಸದಸ್ಯ ಡಾ ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ವಿಧಾನಸೌಧ ಆವರಣದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಹಿನ್ನೆಲೆ, ಘೋಷಣೆ ಕೂಗಿದವರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಂಡು ದೇಶ ದ್ರೋಹ ಕೇಸ್ ದಾಖಲು ಮಾಡಬೇಕು ಎಂದು ಆಗ್ರಹಿಸಿ ನಗರದ ತಾಲ್ಲೂಕು ಕಚೇರಿ ವೃತ್ತದ ಬಳಿ ಬಿಜೆಪಿ ಮುಖಂಡರು ಪ್ರತಿಭಟಿಸಿ ನಂತರ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ದೇಶದ ಅಸ್ಮಿತೆ ಹಾಳು ಮಾಡುವುದಲ್ಲದೆ ದೇಶ ದ್ರೋಹಿ ಕೆಲಸ ಮಾಡಿದ ನಾಸಿರ್ ಅವರು ತಮ್ಮ ಬೆಂಬಲಿಗರನ್ನು ರಕ್ಷಿಸುವ ಬರದಲ್ಲಿ ಮಾಧ್ಯಮದವರನ್ನ ಹೇ ನಡಿಯೋ ನಡಿಯೋ ಎಂದು ಹೇಳುವ ಮೂಲಕ ಉದ್ಧಟತನ ಮೆರೆಯುವುದರ ಜೊತೆ ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿದರು. ಒಬ್ಬ ಜನಪ್ರತಿನಿಧಿ ಈ ರೀತಿ ವರ್ತನೆ ತೋರಿರುವುದು ಅಕ್ಷಮ್ಯ ಅಪರಾಧ ಕೂಡಲೇ ಇದರ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು ಎಂದು ಆಗ್ರಹಿಸಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ನಾಗೇಶ್, ನಗರ ಅಧ್ಯಕ್ಷರಾದ ಮುದ್ದಪ್ಪ, ತಾ.ಪ್ರ.ಕಾರ್ಯದರ್ಶಿ ರಾಜಘಟ್ಟ ಕಾಂತರಾಜು, ನ.ಪ್ರ.ಕಾರ್ಯದರ್ಶಿ ಮುನಿರಾಜು, ಸಂಚಾಲಕರಾದ ವೆಂಕಟರಾಜು, ನಿಕಟ ಪೂರ್ವ ಜಿ.ಪ್ರ.ಕಾರ್ಯದರ್ಶಿ ಗೋವಿಂದರಾಜ್, ನಿಕಟ ಪೂರ್ವ ರಾಜ್ಯ ಕಾರ್ಯದರ್ಶಿ ಬಿ.ಸಿ ನಾರಾಯಣಸ್ವಾಮಿ, ನಿಕಟ ಪೂರ್ವ ಮ.ಕಾರ್ಯದರ್ಶಿ ವತ್ಸಲಾ, ನಗರ ಸಭಾ ಸದಸ್ಯರುಗಳಾದ ಪದ್ಮನಾಭ್, ವತ್ಸಲಾ, ನಾಗರತ್ನಮ್ಮ ಕೃಷ್ಣಮೂರ್ತಿ, ಹಂಸಪ್ರೀಯ ದೇವರಾಜ್, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎನ್.ಕೆ ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…