ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಸ್: ತಪ್ಪಿತಸ್ಥರ ವಿರುದ್ಧ ಕಾನೂನು‌ಕ್ರಮಕ್ಕೆ ಬಿಜೆಪಿ ಆಗ್ರಹ

ನಿನ್ನೆ ನೂತನ ರಾಜ್ಯಸಭಾ ಸದಸ್ಯ ಡಾ ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ವಿಧಾನಸೌಧ ಆವರಣದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಹಿನ್ನೆಲೆ, ಘೋಷಣೆ ಕೂಗಿದವರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಂಡು ದೇಶ ದ್ರೋಹ ಕೇಸ್ ದಾಖಲು ಮಾಡಬೇಕು ಎಂದು ಆಗ್ರಹಿಸಿ ನಗರದ ತಾಲ್ಲೂಕು ಕಚೇರಿ ವೃತ್ತದ ಬಳಿ ಬಿಜೆಪಿ ಮುಖಂಡರು ಪ್ರತಿಭಟಿಸಿ ನಂತರ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ದೇಶದ ಅಸ್ಮಿತೆ ಹಾಳು ಮಾಡುವುದಲ್ಲದೆ ದೇಶ ದ್ರೋಹಿ ಕೆಲಸ ಮಾಡಿದ ನಾಸಿರ್ ಅವರು ತಮ್ಮ ಬೆಂಬಲಿಗರನ್ನು ರಕ್ಷಿಸುವ ಬರದಲ್ಲಿ ಮಾಧ್ಯಮದವರನ್ನ ಹೇ ನಡಿಯೋ ನಡಿಯೋ ಎಂದು ಹೇಳುವ ಮೂಲಕ ಉದ್ಧಟತನ ಮೆರೆಯುವುದರ ಜೊತೆ ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿದರು. ಒಬ್ಬ ಜನಪ್ರತಿನಿಧಿ ಈ ರೀತಿ ವರ್ತನೆ ತೋರಿರುವುದು ಅಕ್ಷಮ್ಯ ಅಪರಾಧ ಕೂಡಲೇ ಇದರ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು ಎಂದು ಆಗ್ರಹಿಸಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ನಾಗೇಶ್, ನಗರ ಅಧ್ಯಕ್ಷರಾದ ಮುದ್ದಪ್ಪ, ತಾ.ಪ್ರ.ಕಾರ್ಯದರ್ಶಿ ರಾಜಘಟ್ಟ ಕಾಂತರಾಜು, ನ.ಪ್ರ.ಕಾರ್ಯದರ್ಶಿ ಮುನಿರಾಜು, ಸಂಚಾಲಕರಾದ ವೆಂಕಟರಾಜು, ನಿಕಟ ಪೂರ್ವ ಜಿ.ಪ್ರ.ಕಾರ್ಯದರ್ಶಿ ಗೋವಿಂದರಾಜ್, ನಿಕಟ ಪೂರ್ವ ರಾಜ್ಯ ಕಾರ್ಯದರ್ಶಿ ಬಿ.ಸಿ ನಾರಾಯಣಸ್ವಾಮಿ, ನಿಕಟ ಪೂರ್ವ ಮ.ಕಾರ್ಯದರ್ಶಿ ವತ್ಸಲಾ, ನಗರ ಸಭಾ ಸದಸ್ಯರುಗಳಾದ ಪದ್ಮನಾಭ್, ವತ್ಸಲಾ, ನಾಗರತ್ನಮ್ಮ ಕೃಷ್ಣಮೂರ್ತಿ, ಹಂಸಪ್ರೀಯ ದೇವರಾಜ್, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎನ್.ಕೆ ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

8 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

24 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago