ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಸ್: ತಪ್ಪಿತಸ್ಥರ ವಿರುದ್ಧ ಕಾನೂನು‌ಕ್ರಮಕ್ಕೆ ಬಿಜೆಪಿ ಆಗ್ರಹ

ನಿನ್ನೆ ನೂತನ ರಾಜ್ಯಸಭಾ ಸದಸ್ಯ ಡಾ ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ವಿಧಾನಸೌಧ ಆವರಣದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಹಿನ್ನೆಲೆ, ಘೋಷಣೆ ಕೂಗಿದವರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಂಡು ದೇಶ ದ್ರೋಹ ಕೇಸ್ ದಾಖಲು ಮಾಡಬೇಕು ಎಂದು ಆಗ್ರಹಿಸಿ ನಗರದ ತಾಲ್ಲೂಕು ಕಚೇರಿ ವೃತ್ತದ ಬಳಿ ಬಿಜೆಪಿ ಮುಖಂಡರು ಪ್ರತಿಭಟಿಸಿ ನಂತರ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ದೇಶದ ಅಸ್ಮಿತೆ ಹಾಳು ಮಾಡುವುದಲ್ಲದೆ ದೇಶ ದ್ರೋಹಿ ಕೆಲಸ ಮಾಡಿದ ನಾಸಿರ್ ಅವರು ತಮ್ಮ ಬೆಂಬಲಿಗರನ್ನು ರಕ್ಷಿಸುವ ಬರದಲ್ಲಿ ಮಾಧ್ಯಮದವರನ್ನ ಹೇ ನಡಿಯೋ ನಡಿಯೋ ಎಂದು ಹೇಳುವ ಮೂಲಕ ಉದ್ಧಟತನ ಮೆರೆಯುವುದರ ಜೊತೆ ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿದರು. ಒಬ್ಬ ಜನಪ್ರತಿನಿಧಿ ಈ ರೀತಿ ವರ್ತನೆ ತೋರಿರುವುದು ಅಕ್ಷಮ್ಯ ಅಪರಾಧ ಕೂಡಲೇ ಇದರ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು ಎಂದು ಆಗ್ರಹಿಸಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ನಾಗೇಶ್, ನಗರ ಅಧ್ಯಕ್ಷರಾದ ಮುದ್ದಪ್ಪ, ತಾ.ಪ್ರ.ಕಾರ್ಯದರ್ಶಿ ರಾಜಘಟ್ಟ ಕಾಂತರಾಜು, ನ.ಪ್ರ.ಕಾರ್ಯದರ್ಶಿ ಮುನಿರಾಜು, ಸಂಚಾಲಕರಾದ ವೆಂಕಟರಾಜು, ನಿಕಟ ಪೂರ್ವ ಜಿ.ಪ್ರ.ಕಾರ್ಯದರ್ಶಿ ಗೋವಿಂದರಾಜ್, ನಿಕಟ ಪೂರ್ವ ರಾಜ್ಯ ಕಾರ್ಯದರ್ಶಿ ಬಿ.ಸಿ ನಾರಾಯಣಸ್ವಾಮಿ, ನಿಕಟ ಪೂರ್ವ ಮ.ಕಾರ್ಯದರ್ಶಿ ವತ್ಸಲಾ, ನಗರ ಸಭಾ ಸದಸ್ಯರುಗಳಾದ ಪದ್ಮನಾಭ್, ವತ್ಸಲಾ, ನಾಗರತ್ನಮ್ಮ ಕೃಷ್ಣಮೂರ್ತಿ, ಹಂಸಪ್ರೀಯ ದೇವರಾಜ್, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎನ್.ಕೆ ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

5 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

6 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

6 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

7 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

10 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

10 hours ago