ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಸ್: ತಪ್ಪಿತಸ್ಥರ ವಿರುದ್ಧ ಕಾನೂನು‌ಕ್ರಮಕ್ಕೆ ಬಿಜೆಪಿ ಆಗ್ರಹ

ನಿನ್ನೆ ನೂತನ ರಾಜ್ಯಸಭಾ ಸದಸ್ಯ ಡಾ ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ವಿಧಾನಸೌಧ ಆವರಣದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಹಿನ್ನೆಲೆ, ಘೋಷಣೆ ಕೂಗಿದವರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಂಡು ದೇಶ ದ್ರೋಹ ಕೇಸ್ ದಾಖಲು ಮಾಡಬೇಕು ಎಂದು ಆಗ್ರಹಿಸಿ ನಗರದ ತಾಲ್ಲೂಕು ಕಚೇರಿ ವೃತ್ತದ ಬಳಿ ಬಿಜೆಪಿ ಮುಖಂಡರು ಪ್ರತಿಭಟಿಸಿ ನಂತರ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ದೇಶದ ಅಸ್ಮಿತೆ ಹಾಳು ಮಾಡುವುದಲ್ಲದೆ ದೇಶ ದ್ರೋಹಿ ಕೆಲಸ ಮಾಡಿದ ನಾಸಿರ್ ಅವರು ತಮ್ಮ ಬೆಂಬಲಿಗರನ್ನು ರಕ್ಷಿಸುವ ಬರದಲ್ಲಿ ಮಾಧ್ಯಮದವರನ್ನ ಹೇ ನಡಿಯೋ ನಡಿಯೋ ಎಂದು ಹೇಳುವ ಮೂಲಕ ಉದ್ಧಟತನ ಮೆರೆಯುವುದರ ಜೊತೆ ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿದರು. ಒಬ್ಬ ಜನಪ್ರತಿನಿಧಿ ಈ ರೀತಿ ವರ್ತನೆ ತೋರಿರುವುದು ಅಕ್ಷಮ್ಯ ಅಪರಾಧ ಕೂಡಲೇ ಇದರ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು ಎಂದು ಆಗ್ರಹಿಸಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ನಾಗೇಶ್, ನಗರ ಅಧ್ಯಕ್ಷರಾದ ಮುದ್ದಪ್ಪ, ತಾ.ಪ್ರ.ಕಾರ್ಯದರ್ಶಿ ರಾಜಘಟ್ಟ ಕಾಂತರಾಜು, ನ.ಪ್ರ.ಕಾರ್ಯದರ್ಶಿ ಮುನಿರಾಜು, ಸಂಚಾಲಕರಾದ ವೆಂಕಟರಾಜು, ನಿಕಟ ಪೂರ್ವ ಜಿ.ಪ್ರ.ಕಾರ್ಯದರ್ಶಿ ಗೋವಿಂದರಾಜ್, ನಿಕಟ ಪೂರ್ವ ರಾಜ್ಯ ಕಾರ್ಯದರ್ಶಿ ಬಿ.ಸಿ ನಾರಾಯಣಸ್ವಾಮಿ, ನಿಕಟ ಪೂರ್ವ ಮ.ಕಾರ್ಯದರ್ಶಿ ವತ್ಸಲಾ, ನಗರ ಸಭಾ ಸದಸ್ಯರುಗಳಾದ ಪದ್ಮನಾಭ್, ವತ್ಸಲಾ, ನಾಗರತ್ನಮ್ಮ ಕೃಷ್ಣಮೂರ್ತಿ, ಹಂಸಪ್ರೀಯ ದೇವರಾಜ್, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎನ್.ಕೆ ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

17 hours ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

19 hours ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

1 day ago

ಫುಟ್ ಪಾತ್…… (ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ….)

Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…

1 day ago

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ವಿಸ್ತರಣೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…

2 days ago

ಪೂರ್ವ ವೈಷಮ್ಯದ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ…

2 days ago