ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಸ್: ತಪ್ಪಿತಸ್ಥರ ವಿರುದ್ಧ ಕಾನೂನು‌ಕ್ರಮಕ್ಕೆ ಬಿಜೆಪಿ ಆಗ್ರಹ

ನಿನ್ನೆ ನೂತನ ರಾಜ್ಯಸಭಾ ಸದಸ್ಯ ಡಾ ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ವಿಧಾನಸೌಧ ಆವರಣದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಹಿನ್ನೆಲೆ, ಘೋಷಣೆ ಕೂಗಿದವರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಂಡು ದೇಶ ದ್ರೋಹ ಕೇಸ್ ದಾಖಲು ಮಾಡಬೇಕು ಎಂದು ಆಗ್ರಹಿಸಿ ನಗರದ ತಾಲ್ಲೂಕು ಕಚೇರಿ ವೃತ್ತದ ಬಳಿ ಬಿಜೆಪಿ ಮುಖಂಡರು ಪ್ರತಿಭಟಿಸಿ ನಂತರ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ದೇಶದ ಅಸ್ಮಿತೆ ಹಾಳು ಮಾಡುವುದಲ್ಲದೆ ದೇಶ ದ್ರೋಹಿ ಕೆಲಸ ಮಾಡಿದ ನಾಸಿರ್ ಅವರು ತಮ್ಮ ಬೆಂಬಲಿಗರನ್ನು ರಕ್ಷಿಸುವ ಬರದಲ್ಲಿ ಮಾಧ್ಯಮದವರನ್ನ ಹೇ ನಡಿಯೋ ನಡಿಯೋ ಎಂದು ಹೇಳುವ ಮೂಲಕ ಉದ್ಧಟತನ ಮೆರೆಯುವುದರ ಜೊತೆ ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿದರು. ಒಬ್ಬ ಜನಪ್ರತಿನಿಧಿ ಈ ರೀತಿ ವರ್ತನೆ ತೋರಿರುವುದು ಅಕ್ಷಮ್ಯ ಅಪರಾಧ ಕೂಡಲೇ ಇದರ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು ಎಂದು ಆಗ್ರಹಿಸಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ನಾಗೇಶ್, ನಗರ ಅಧ್ಯಕ್ಷರಾದ ಮುದ್ದಪ್ಪ, ತಾ.ಪ್ರ.ಕಾರ್ಯದರ್ಶಿ ರಾಜಘಟ್ಟ ಕಾಂತರಾಜು, ನ.ಪ್ರ.ಕಾರ್ಯದರ್ಶಿ ಮುನಿರಾಜು, ಸಂಚಾಲಕರಾದ ವೆಂಕಟರಾಜು, ನಿಕಟ ಪೂರ್ವ ಜಿ.ಪ್ರ.ಕಾರ್ಯದರ್ಶಿ ಗೋವಿಂದರಾಜ್, ನಿಕಟ ಪೂರ್ವ ರಾಜ್ಯ ಕಾರ್ಯದರ್ಶಿ ಬಿ.ಸಿ ನಾರಾಯಣಸ್ವಾಮಿ, ನಿಕಟ ಪೂರ್ವ ಮ.ಕಾರ್ಯದರ್ಶಿ ವತ್ಸಲಾ, ನಗರ ಸಭಾ ಸದಸ್ಯರುಗಳಾದ ಪದ್ಮನಾಭ್, ವತ್ಸಲಾ, ನಾಗರತ್ನಮ್ಮ ಕೃಷ್ಣಮೂರ್ತಿ, ಹಂಸಪ್ರೀಯ ದೇವರಾಜ್, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎನ್.ಕೆ ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 hour ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

12 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

13 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

13 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

16 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

19 hours ago