ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಸ್: ತಪ್ಪಿತಸ್ಥರ ವಿರುದ್ಧ ಕಾನೂನು‌ಕ್ರಮಕ್ಕೆ ಬಿಜೆಪಿ ಆಗ್ರಹ

ನಿನ್ನೆ ನೂತನ ರಾಜ್ಯಸಭಾ ಸದಸ್ಯ ಡಾ ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ವಿಧಾನಸೌಧ ಆವರಣದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಹಿನ್ನೆಲೆ, ಘೋಷಣೆ ಕೂಗಿದವರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಂಡು ದೇಶ ದ್ರೋಹ ಕೇಸ್ ದಾಖಲು ಮಾಡಬೇಕು ಎಂದು ಆಗ್ರಹಿಸಿ ನಗರದ ತಾಲ್ಲೂಕು ಕಚೇರಿ ವೃತ್ತದ ಬಳಿ ಬಿಜೆಪಿ ಮುಖಂಡರು ಪ್ರತಿಭಟಿಸಿ ನಂತರ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ದೇಶದ ಅಸ್ಮಿತೆ ಹಾಳು ಮಾಡುವುದಲ್ಲದೆ ದೇಶ ದ್ರೋಹಿ ಕೆಲಸ ಮಾಡಿದ ನಾಸಿರ್ ಅವರು ತಮ್ಮ ಬೆಂಬಲಿಗರನ್ನು ರಕ್ಷಿಸುವ ಬರದಲ್ಲಿ ಮಾಧ್ಯಮದವರನ್ನ ಹೇ ನಡಿಯೋ ನಡಿಯೋ ಎಂದು ಹೇಳುವ ಮೂಲಕ ಉದ್ಧಟತನ ಮೆರೆಯುವುದರ ಜೊತೆ ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿದರು. ಒಬ್ಬ ಜನಪ್ರತಿನಿಧಿ ಈ ರೀತಿ ವರ್ತನೆ ತೋರಿರುವುದು ಅಕ್ಷಮ್ಯ ಅಪರಾಧ ಕೂಡಲೇ ಇದರ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು ಎಂದು ಆಗ್ರಹಿಸಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ನಾಗೇಶ್, ನಗರ ಅಧ್ಯಕ್ಷರಾದ ಮುದ್ದಪ್ಪ, ತಾ.ಪ್ರ.ಕಾರ್ಯದರ್ಶಿ ರಾಜಘಟ್ಟ ಕಾಂತರಾಜು, ನ.ಪ್ರ.ಕಾರ್ಯದರ್ಶಿ ಮುನಿರಾಜು, ಸಂಚಾಲಕರಾದ ವೆಂಕಟರಾಜು, ನಿಕಟ ಪೂರ್ವ ಜಿ.ಪ್ರ.ಕಾರ್ಯದರ್ಶಿ ಗೋವಿಂದರಾಜ್, ನಿಕಟ ಪೂರ್ವ ರಾಜ್ಯ ಕಾರ್ಯದರ್ಶಿ ಬಿ.ಸಿ ನಾರಾಯಣಸ್ವಾಮಿ, ನಿಕಟ ಪೂರ್ವ ಮ.ಕಾರ್ಯದರ್ಶಿ ವತ್ಸಲಾ, ನಗರ ಸಭಾ ಸದಸ್ಯರುಗಳಾದ ಪದ್ಮನಾಭ್, ವತ್ಸಲಾ, ನಾಗರತ್ನಮ್ಮ ಕೃಷ್ಣಮೂರ್ತಿ, ಹಂಸಪ್ರೀಯ ದೇವರಾಜ್, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎನ್.ಕೆ ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago