ಪಾರದರ್ಶಕ ಚುನಾವಣೆ ನಡೆಸಲು ಜಿಲ್ಲಾಡಳಿತ ಯಂತ್ರ ಕಾರ್ಯೋನ್ಮುಖ- ಜಿಲ್ಲಾಧಿಕಾರಿ ಆರ್ ಲತಾ

ಜಿಲ್ಲೆಯಲ್ಲಿ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ನೆರವೇರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಯಂತ್ರ ಸಕಲ ರೀತಿಯಲ್ಲೂ ಕಾರ್ಯೋನ್ಮುಖವಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್. ಲತಾ ಹೇಳಿದರು

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಆಯೋಗದಿಂದ ನೇಮಕಗೊಂಡ ಚುನಾವಣಾ ಸಾಮಾನ್ಯ ವೀಕ್ಷಕರು, ವೆಚ್ಚ ವೀಕ್ಷಕರು, ಪೊಲೀಸ್ ವೀಕ್ಷಕರಿಗೆ ಚುನಾವಣಾ ಸಿದ್ಧತೆ ಗಳು ಬಗ್ಗೆ ಮಾಹಿತಿ ನೀಡಲು
ಜಿಲ್ಲಾಡಳಿತ ಭವನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿರುವ 1137 ಮತಗಟ್ಟೆಗಳು, ಗ್ರಾಮಾಂತರ ಜಿಲ್ಲೆಯೊಂದಿಗೆ ಗಡಿ ಹಂಚಿಕೊಂಡಿರುವ ನೆರೆಯ ಜಿಲ್ಲೆಗಳ ಮಾಹಿತಿ, ಜಿಲ್ಲೆಯ ಒಟ್ಟು ಮತದಾರರು, 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಕಲಚೇತನರು, ಅವರಿಗೆ ಒದಗಿಸಲಾಗಿರುವ 12 D ನಮೂನೆ ಕುರಿತು ಮಾಹಿತಿಗಳನ್ನು ಹಂಚಿಕೊಂಡರು.

ಜಿಲ್ಲೆಯಲ್ಲಿನ ಸೂಕ್ಷ್ಮ ಮತಗಟ್ಟೆಗಳು, ವೆಚ್ಚ ಸೂಕ್ಷ್ಮ ಪ್ರದೇಶಗಳ ಬಗ್ಗೆ ವೀಕ್ಷಕರಿಗೆ ಮಾಹಿತಿ ನೀಡಿದರು.

ಜಿಲ್ಲೆಯ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸೌಲಭ್ಯ ಅಳವಡಿಸಿರುವ ಹಾಗೂ ಮತಗಟ್ಟೆಗಳಲ್ಲಿ ವಿಡಿಯೋ ಚಿತ್ರೀಕರಣ ಕಾರ್ಯದ ಬಗ್ಗೆಯೂ ವೀಕ್ಷಕರಿಗೆ ಮಾಹಿತಿ ನೀಡಿದರು.

ಜಿಲ್ಲೆಯಾದ್ಯಂತ ಇದುವರೆಗೆ ವಶಪಡಿಸಿಕೊಂಡ ನಗದು, ಮದ್ಯ, ಮಾದಕ ವಸ್ತುಗಳು, ಮನೆಬಳಕೆ ಸಾಮಗ್ರಿಗಳು ಬಗ್ಗೆ ವೀಕ್ಷಕರಿಗೆ ಮಾಹಿತಿ ನೀಡಿದರು.

ಪೊಲೀಸ್ ವೀಕ್ಷಕರಾದ ರೋಮಿಲ್ ಬಾನಿಯ ಅವರು ಮಾತನಾಡಿ ಜಿಲ್ಲೆಯಲ್ಲಿ ನಿಯೋಜಿಸಲಾಗಿರುವ ಪೊಲೀಸ್ ಸಿಬ್ಬಂದಿ ಹಾಗೂ ಭದ್ರತಾ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಹೊಸಕೋಟೆ ಹಾಗೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ರೊನಾಲ್ಡೊ ರೋಸ್, ದೊಡ್ಬಳ್ಳಾಪುರ ಹಾಗೂ ನೆಲಮಂಗಲ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಶಿಲ್ಪಾಗುಪ್ತ, ವೆಚ್ಚ ವೀಕ್ಷಕರುಗಳಾದ ಡಾ. ದಿನೇಶ್ ಕುಮಾರ್ ಬಿಸೇನ್, ಅತುಲ್ ಪಾಂಡೆ, ರಾಮಚಂದ್ರನ್ ಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಹೆಚ್ ಅಮರೇಶ್, ನಾಲ್ಕು ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

2 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

13 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

13 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

17 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

1 day ago