ಪಾಲನಜೋಗಿಹಳ್ಳಿ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ: ಬಂಧಿತರಿಂದ ಬೆಲೆಬಾಳುವ ವಸ್ತು ವಶ: ಕಳುವಾಗಿದ್ದ ಮಾಲನ್ನು ದೂರುದಾರರಿಗೆ ಹಿಂದಿರುಗಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಬೀಗ ಹೊಡೆದು ಒಳಗೆ ಹೋಗಿ ಬೆಡ್ ರೂಮಿನ ಮರದ ಬೀರುವಿನಲ್ಲಿದ್ದ ಸುಮಾರು 7.5 ಗ್ರಾಂ ತೂಕದ ಸುಮಾರು 75000 ಬೆಲೆ ಬಾಳುವ ಒಂದು ಜೊತೆ ಚಿನ್ನದ ಓಲೆಗಳನ್ನು ಹಾಗೂ ರೂ 5000 ನಗದನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಖದೀಮರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕಳವು ಮಾಲನ್ನು ವಶಕ್ಕೆ ಪಡೆದು ದೂರುದಾರರಿಗೆ ವಾಪಸ್ ನೀಡಿದ್ದಾರೆ.

ಸೆ.21ರಂದು ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿಹಳ್ಳಿಯ ಜೆಪಿನಗರದ ಸಿದ್ದರಾಮಯ್ಯ ಲೇಔಟ್ ನ ಮನೆಯಲ್ಲಿ ನಡೆದ ಕಳ್ಳತನ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡ ದೂರು ದಾಖಲಿಸಿಕೊಂಡ ಪೊಲೀಸರು, ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಚಂದ್ರಕಲಾ ಹಾಗೂ ಸಿಬ್ಬಂದಿಯವರಾದ ಸುನಿಲ್ ಬಾಸಗಿ, ಫೈರೋಜ್ ಕೆ, ಪ್ರವೀಣ್, ಸಚಿನ್ ಉಪ್ಪಾರ್, ಹರೀಶ್ ತಂಡವು ಕಳ್ಳರನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ಬಂಧಿತರಿಂದ ಕಳ್ಳತನ ಮಾಡಿದ್ದ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದು ದೂರುದಾರರಿಗೆ ವಾಪಸ್ ನೀಡಿದ್ದಾರೆ.

ವಿಪರ್ಯಾಸವೆಂದರೆ ದೊಡ್ಡಬಳ್ಳಾಪುರ ತಾಲೂಕಿನ ನಿಜಗಲ್ ಲೇಔಟ್, ನಂದಿನಿ ಲೇಔಟ್, ಟಿ.ಬಿ ನಾರಾಯಣಪ್ಪ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಮನೆ ಕಳ್ಳತನಕ್ಕೆ ಇಳಿದಿದ್ದ ಪುರುಷೋತ್ತಮ, ಚಂದ್ರು, ದರ್ಶನ್, ಸೌಭಾಗ್ಯ ಎಂಬ ಆರೋಪಿಗಳೇ ಇಲ್ಲಿಯೂ ಸಹ ಕೈಚಳಕ ತೋರಿಸಿದ್ದಾರೆ ಎಂಬ ಮಾಹಿತಿ ತನಿಖೆಯಿಂದ ಬಯಲಿಗೆ ಬಂದಿದೆ…

ಕಳುವಾಗಿದ್ದ ವಸ್ತುಗಳನ್ನು ಮತ್ತೆ ವಾಪಸ್ ಪಡೆದ ದೂರುದಾರರು ನಿಟ್ಟುಸಿರು ಬಿಟ್ಟಿದ್ದಾರೆ. ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕರು ಹಾಗೂ ದೂರುದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!