ಪಾಲನಜೋಗಿಹಳ್ಳಿ ಕೆರೆಯ ಭಾಗದಲ್ಲಿ ಸ್ವಚ್ಛತಾ ಕಾರ್ಯ

ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಮತ್ತು WWF ಸಂಸ್ಥೆಯ ಸಹಭಾಗಿತ್ವದಲ್ಲಿ ದೊಡ್ಡಬಳ್ಳಾಪುರ ನಗರದ ಪಾಲನಜೋಗಿಹಳ್ಳಿ ಕೆರೆಯ ಭಾಗದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.

ಪಂಚಾಯಿತಿ ಅಧ್ಯಕ್ಷೆ ಅಶಾರಾಣಿ ನಾಗರಾಜ್ ಮಾತನಾಡಿ, ಹೆದ್ದಾರಿಯ ಪಕ್ಕದಲ್ಲೇ ಕೆರೆಕಟ್ಟೆ ಇರುವುದರಿಂದ ತ್ಯಾಜ್ಯ ವಸ್ತುಗಳನ್ನು ಹಾಕುವುದು ಹೆಚ್ಚಾಗಿದೆ, ಇದರ ಬಗ್ಗೆ ಹೆಚ್ಚಿನ ಗಮನ ಹರಿಸಿ ಕೆರೆ ಅಂಗಳ ಕಲುಷಿತಗೊಳಿಸುವವರಿಗೆ ದಂಡ ವಿಧಿಸಲಾಗುವುದು ಎಚ್ಚರಿಕೆ ನೀಡಿದರು.

ಅರ್ಕಾವತಿ ನದಿ ಜಲಾನಯನ ಪ್ರದೇಶದಲ್ಲಿ ಈ ಕೆರೆ ಒಳಪಡುವುದರಿಂದ ಸ್ಥಳೀಯ ಸಾರ್ವಜನಿಕರು ಕೆರೆಯ ಸುತ್ತ ಮುತ್ತ ಕಲುಷಿತ ಮತ್ತು ತ್ಯಾಜ್ಯ ವಸ್ತುಗಳನ್ನು ಹಾಕುವುದು ತಪ್ಪಿಸಿದರೆ ಕೆರೆಯಲ್ಲಿನ ಜಲಚರಗಳು ಮತ್ತು ಪಕ್ಷಿಗಳು ಜೀವಿಸಲು ಅನುಕೂಲ ಮಾಡಿದಂತಾಗುತ್ತದೆ ಎಂದು ಕೆರೆಮಿತ್ರ ಜನಾರ್ದನ್ ತಿಳಿಸಿದರು.

ಸ್ವಚ್ಚತಾ ಕಾರ್ಯದಲ್ಲಿ ಪಂಚಾಯಿತಿ ಅಧಿಕಾರಿಗಳು, ಅಧ್ಯಕ್ಷರು, ಗ್ರಾಮ ಪಂಚಾಯಿತಿ ಸದಸ್ಯರು, WWF ಸಂಸ್ಥೆಯ ಶಶಿಕಲಾ ಐಯ್ಯರ್, ಡಾ. ಶಾಂತಾನು ಗುಪ್ತ, ಕಾರ್ತಿಕ್ ಗೌಡ ಮತ್ತು HSBC ಸಂಸ್ಥೆಯ ಸ್ವಯಂಸೇವಕರು ಭಾಗವಹಿಸಿದ್ದರು.

Ramesh Babu

Journalist

Recent Posts

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

2 hours ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

7 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

11 hours ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

2 days ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

3 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago