ಪಾಲನಜೋಗಿಹಳ್ಳಿ ಪ್ರವೇಶ ದ್ವಾರದ ಬಳಿ ದುರ್ವಾಸನೆಯೊಂದಿಗೆ ತ್ಯಾಜ್ಯ ರಾಶಿಗಳ ಸ್ವಾಗತ: ಕಣ್ಮುಚ್ಚಿ ಕುಳಿತ ಪಂಚಾಯಿತಿ: ಜನ ಆಕ್ರೋಶ

ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿ ಪ್ರವೇಶ ದ್ವಾರದ ಬಳಿ ದುರ್ವಾಸನೆಯೊಂದಿಗೆ ತ್ಯಾಜ್ಯ ರಾಶಿ ಸ್ವಾಗತಿಸುತ್ತದೆ. ಪಾಲನಜೋಗಿಹಳ್ಳಿ ದಿನದಿನಕ್ಕೆ ನಗರಕ್ಕೆ ಹೊಂದಿಕೊಳ್ಳುತ್ತಿದ್ದು, ಇದಕ್ಕೆ ತಕ್ಕಂತೆ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಆಗದೇ ಸಾರ್ವಜನಿಕರು ಪರದಾಡುವಂತಾಗಿದೆ.

ಪಾಲನಜೋಗಿಹಳ್ಳಿಯನ್ನು ಪ್ರವೇಶಿ ಸುತ್ತಿದ್ದಂತೆ ‘ಸುಸ್ವಾಗತ’ ಎಂಬ ಬೃಹತ್ ನಾಮಫಲಕ ಸ್ವಾಗತಿಸುತ್ತದೆ. ಅದನ್ನು ದಾಟಿ ಮುಂದೆ ಹೆಜ್ಜೆ ಹಾಕುತ್ತಿದ್ದಂತೆ ದುರ್ವಾಸನೆಯೊಂದಿಗೆ ರಸ್ತೆಯ ಬದಿಯಲ್ಲಿ ತ್ಯಾಜ್ಯ ರಾಶಿಗಳು ಕಣ್ಣಿಗೆ ರಾಚುತ್ತದೆ.

ಸ್ಥಳದಲ್ಲಿ ಪಾರ್ಕ್, ಶಾಲೆ, ದೇವಸ್ಥಾನ, ಅಂಗಡಿಗಳು, ಮನೆಗಳು ಇದ್ದು, ಇದರ ಪಕ್ಕದಲ್ಲೇ ಇರುವ ತ್ಯಾಜ್ಯ ರಾಶಿಗಳು ಮಕ್ಕಳು, ವೃದ್ಧರು, ಮಹಿಳೆಯರು ಹಾಗೂ ರೋಗಿಗಳ ಆರೋಗ್ಯಕ್ಕೂ ಹಾನಿ ತರುತ್ತಿದೆ.

ಕಸದ ದುರ್ವಾಸನೆಯೊಂದಿಗೆ ಬೀದಿ ನಾಯಿಗಳ ಕಾಟವೂ ಇಲ್ಲಿ ವಿಪರೀತವಾಗಿದೆ. ಹೋಟೆಲ್ ಆಹಾರ ತ್ಯಾಜ್ಯ, ಮಾಂಸದಂಗಡಿಗಳ ತ್ಯಾಜ್ಯದಿಂದ ಹಲವು ಬೀದಿನಾಯಿಗಳು ಇಲ್ಲಿಯೇ ವಾಸವಾಗಿವೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಡಿದ ಗ್ರಾಮ ಪಂಚಾಯಿತಿ ಸದಸ್ಯೆ ಗಾಯತ್ರಿ ಮಂಜುನಾಥ್, ಕಸದ ಸಮಸ್ಯೆ ನಿವಾರಣೆ ಮಾಡಲು ಪಂಚಾಯಿತಿಗೆ ಹಲವು ಬಾರಿ ಮನವಿ ಮಾಡಿದ್ದೇನೆ. ಸಿಸಿಟಿವಿ ಅಳವಡಿಕೆ ಮಾಡಿ, ಕಸ ಹಾಕುವವರಿಗೆ ದಂಡ ವಿಧಿಸುವಂತೆಯೂ ಸಹ ಮನವಿ ಮಾಡಿದ್ದೇನೆ. ಆದರೆ, ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಯಾವುದೇ ಕ್ರಮಕೈಗೊಂಡಿಲ್ಲ. ಒಂದು ವೇಳೆ ಇದೇರೀತಿ ಬೇಜವಾಬ್ದಾರಿತನ ಮೆರೆದರೆ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು….

ಪ್ರತಿದಿನ ಮನೆಮನೆಗೆ ಬಂದು ಕಸ ಶೇಖರಿಸಬೇಕು. ಆದರೆ, ಪಂಚಾಯಿತಿಯವರು ವಾರಕ್ಕೊಮ್ಮೆ ಬಂದು ಕಸ ಶೇಖರಣೆ ಮಾಡುತ್ತಿದ್ದಾರೆ. ಇದರಿಂದ ಕಸ ಎಲ್ಲೆಂದರಲ್ಲಿ ಜನ ಹಾಕುತ್ತಿದ್ದಾರೆ. ಎರಡು ಹಾಗೂ ಮೂರನೇ ವಾರ್ಡ್ ನಲ್ಲಿ ಹೆಚ್ಚಾಗಿ ಖಾಸಗಿ ಕಂಪನಿಗಳಿಗೆ ಹೋಗುವ ಕಾರ್ಮಿಕರಿದ್ದಾರೆ. ಅವರು ಎಲ್ಲೆಂದರಲ್ಲಿ ಕಸವನ್ನು ಸುರಿಯುತ್ತಿದ್ದಾರೆ. ಅವರಿಗೆ ಅರಿವು ಮೂಡಿಸಬೇಕಾಗಿದೆ ಎಂದರು.

ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಈ ಪಾಲನಜೋಗಿಹಳ್ಳಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಿ. ತ್ಯಾಜ್ಯ ವಿಲೇವಾರಿ ಸ್ಥಳಾಂತರಕ್ಕೆ ಶೀಘ್ರ ಕ್ರಮ ಕೈಗೊಳ್ಳಲಿ. ಜನತೆಯ ಆರೋಗ್ಯ ಕಾಪಾಡಲಿ, ಜೊತೆಗೆ ಚರಂಡಿ ದುರಸ್ತಿ ಮಾಡಿ, ಸ್ವಚ್ಛತೆಗೆ ಮೊದಲ ನೀಡಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

8 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

10 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

15 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago