ಪಾಲನಜೋಗಿಹಳ್ಳಿ ಪ್ರವೇಶ ದ್ವಾರದ ಬಳಿ ದುರ್ವಾಸನೆಯೊಂದಿಗೆ ತ್ಯಾಜ್ಯ ರಾಶಿಗಳ ಸ್ವಾಗತ: ಕಣ್ಮುಚ್ಚಿ ಕುಳಿತ ಪಂಚಾಯಿತಿ: ಜನ ಆಕ್ರೋಶ

ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿ ಪ್ರವೇಶ ದ್ವಾರದ ಬಳಿ ದುರ್ವಾಸನೆಯೊಂದಿಗೆ ತ್ಯಾಜ್ಯ ರಾಶಿ ಸ್ವಾಗತಿಸುತ್ತದೆ. ಪಾಲನಜೋಗಿಹಳ್ಳಿ ದಿನದಿನಕ್ಕೆ ನಗರಕ್ಕೆ ಹೊಂದಿಕೊಳ್ಳುತ್ತಿದ್ದು, ಇದಕ್ಕೆ ತಕ್ಕಂತೆ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಆಗದೇ ಸಾರ್ವಜನಿಕರು ಪರದಾಡುವಂತಾಗಿದೆ.

ಪಾಲನಜೋಗಿಹಳ್ಳಿಯನ್ನು ಪ್ರವೇಶಿ ಸುತ್ತಿದ್ದಂತೆ ‘ಸುಸ್ವಾಗತ’ ಎಂಬ ಬೃಹತ್ ನಾಮಫಲಕ ಸ್ವಾಗತಿಸುತ್ತದೆ. ಅದನ್ನು ದಾಟಿ ಮುಂದೆ ಹೆಜ್ಜೆ ಹಾಕುತ್ತಿದ್ದಂತೆ ದುರ್ವಾಸನೆಯೊಂದಿಗೆ ರಸ್ತೆಯ ಬದಿಯಲ್ಲಿ ತ್ಯಾಜ್ಯ ರಾಶಿಗಳು ಕಣ್ಣಿಗೆ ರಾಚುತ್ತದೆ.

ಸ್ಥಳದಲ್ಲಿ ಪಾರ್ಕ್, ಶಾಲೆ, ದೇವಸ್ಥಾನ, ಅಂಗಡಿಗಳು, ಮನೆಗಳು ಇದ್ದು, ಇದರ ಪಕ್ಕದಲ್ಲೇ ಇರುವ ತ್ಯಾಜ್ಯ ರಾಶಿಗಳು ಮಕ್ಕಳು, ವೃದ್ಧರು, ಮಹಿಳೆಯರು ಹಾಗೂ ರೋಗಿಗಳ ಆರೋಗ್ಯಕ್ಕೂ ಹಾನಿ ತರುತ್ತಿದೆ.

ಕಸದ ದುರ್ವಾಸನೆಯೊಂದಿಗೆ ಬೀದಿ ನಾಯಿಗಳ ಕಾಟವೂ ಇಲ್ಲಿ ವಿಪರೀತವಾಗಿದೆ. ಹೋಟೆಲ್ ಆಹಾರ ತ್ಯಾಜ್ಯ, ಮಾಂಸದಂಗಡಿಗಳ ತ್ಯಾಜ್ಯದಿಂದ ಹಲವು ಬೀದಿನಾಯಿಗಳು ಇಲ್ಲಿಯೇ ವಾಸವಾಗಿವೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಡಿದ ಗ್ರಾಮ ಪಂಚಾಯಿತಿ ಸದಸ್ಯೆ ಗಾಯತ್ರಿ ಮಂಜುನಾಥ್, ಕಸದ ಸಮಸ್ಯೆ ನಿವಾರಣೆ ಮಾಡಲು ಪಂಚಾಯಿತಿಗೆ ಹಲವು ಬಾರಿ ಮನವಿ ಮಾಡಿದ್ದೇನೆ. ಸಿಸಿಟಿವಿ ಅಳವಡಿಕೆ ಮಾಡಿ, ಕಸ ಹಾಕುವವರಿಗೆ ದಂಡ ವಿಧಿಸುವಂತೆಯೂ ಸಹ ಮನವಿ ಮಾಡಿದ್ದೇನೆ. ಆದರೆ, ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಯಾವುದೇ ಕ್ರಮಕೈಗೊಂಡಿಲ್ಲ. ಒಂದು ವೇಳೆ ಇದೇರೀತಿ ಬೇಜವಾಬ್ದಾರಿತನ ಮೆರೆದರೆ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು….

ಪ್ರತಿದಿನ ಮನೆಮನೆಗೆ ಬಂದು ಕಸ ಶೇಖರಿಸಬೇಕು. ಆದರೆ, ಪಂಚಾಯಿತಿಯವರು ವಾರಕ್ಕೊಮ್ಮೆ ಬಂದು ಕಸ ಶೇಖರಣೆ ಮಾಡುತ್ತಿದ್ದಾರೆ. ಇದರಿಂದ ಕಸ ಎಲ್ಲೆಂದರಲ್ಲಿ ಜನ ಹಾಕುತ್ತಿದ್ದಾರೆ. ಎರಡು ಹಾಗೂ ಮೂರನೇ ವಾರ್ಡ್ ನಲ್ಲಿ ಹೆಚ್ಚಾಗಿ ಖಾಸಗಿ ಕಂಪನಿಗಳಿಗೆ ಹೋಗುವ ಕಾರ್ಮಿಕರಿದ್ದಾರೆ. ಅವರು ಎಲ್ಲೆಂದರಲ್ಲಿ ಕಸವನ್ನು ಸುರಿಯುತ್ತಿದ್ದಾರೆ. ಅವರಿಗೆ ಅರಿವು ಮೂಡಿಸಬೇಕಾಗಿದೆ ಎಂದರು.

ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಈ ಪಾಲನಜೋಗಿಹಳ್ಳಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಿ. ತ್ಯಾಜ್ಯ ವಿಲೇವಾರಿ ಸ್ಥಳಾಂತರಕ್ಕೆ ಶೀಘ್ರ ಕ್ರಮ ಕೈಗೊಳ್ಳಲಿ. ಜನತೆಯ ಆರೋಗ್ಯ ಕಾಪಾಡಲಿ, ಜೊತೆಗೆ ಚರಂಡಿ ದುರಸ್ತಿ ಮಾಡಿ, ಸ್ವಚ್ಛತೆಗೆ ಮೊದಲ ನೀಡಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

28 minutes ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

21 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago