ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ತಾಲೂಕಿನ ಪಾಲ್ ಪಾಲ್ ದಿನ್ನೆಯಲ್ಲಿ ಕೃಷಿ ಬೃಂದಾವನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇದರ ಅಂಗವಾಗಿ ಬೆಳೆ ಕ್ಷೇತ್ರೋತ್ಸವ, ಕೃಷಿ ವಸ್ತು ಪ್ರದರ್ಶನ, ಕೃಷಿ ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೃಷಿ ವಿದ್ಯಾರ್ಥಿಗಳು 3 ತಿಂಗಳಿಂದ ಹಳ್ಳಿಯಲ್ಲಿ ಬಿಡಾರ ಹೂಡಿದ್ದು, ರೈತರ ಮಾಹಿತಿ ಕಲೆ ಹಾಕಿ ಸಮಸ್ಯೆಗಳ ಪಟ್ಟಿ ಮಾಡಿ ಅದರ ಬಗ್ಗೆ ಹೊಸ ತಂತ್ರಜ್ಞಾನ, ತಾಂತ್ರಿಕ ಪ್ರಾತ್ಯಕ್ಷಿಕೆ ಜೊತೆ ಮಾಹಿತಿ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಷ್ಟ್ರೋತ್ಥಾನ ಗೋಶಾಲೆ ಮುಖ್ಯಸ್ಥ ಗವ್ಯ ಸಿದ್ಧ ವೈದ್ಯ ಡಾ.ಜೀವನ್ ಕುಮಾರ್, ಸಾವಯವ ಕೃಷಿಯ ಬಗ್ಗೆ ಇಂದು ಹೆಚ್ಚಿನ ಪ್ರಚಾರವಾಗಬೇಕಿದ್ದು, ಗೋವಿನ ಮಹತ್ವದ ಬಗ್ಗೆ ಅರಿಯಬೇಕಿದೆ. ಪುಸ್ತಕದ ಅರಿವಿಗಿಂತ ಪ್ರಾಯೋಗಿಕ ಅರಿವು ಮುಖ್ಯ ಎಂದು ತಮ್ಮ ಕೃಷಿ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಗ್ರಾಮೀಣ ಕೃಷಿ ಶಿಬಿರದ ಸಹ ಸಂಯೋಜಕ ಡಾ.ಪಂಕಜಾ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಉಮಾಬಾಯಿ, ಅಪ್ಪಯ್ಯಪ್ಪ, ವೆಂಕಟೇಶ್, ವಾಸುದೇವ, ರೈತ ಮಹಿಳೆ ರೂಪಾ ,ರೈತ ಮುಖಂಡ ನರಸಿಂಹ ಗೌಡ, ಸಂಪನ್ಮೂಲ ವಿಜ್ಞಾನಿಗಳಾದ ಲಕ್ಷ್ಮೀನಾರಾಯಣ ರೆಡ್ಡಿ , ಲಕ್ಷ್ಮೀಪತಿ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…