ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ತಾಲೂಕಿನ ಪಾಲ್ ಪಾಲ್ ದಿನ್ನೆಯಲ್ಲಿ ಕೃಷಿ ಬೃಂದಾವನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇದರ ಅಂಗವಾಗಿ ಬೆಳೆ ಕ್ಷೇತ್ರೋತ್ಸವ, ಕೃಷಿ ವಸ್ತು ಪ್ರದರ್ಶನ, ಕೃಷಿ ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೃಷಿ ವಿದ್ಯಾರ್ಥಿಗಳು 3 ತಿಂಗಳಿಂದ ಹಳ್ಳಿಯಲ್ಲಿ ಬಿಡಾರ ಹೂಡಿದ್ದು, ರೈತರ ಮಾಹಿತಿ ಕಲೆ ಹಾಕಿ ಸಮಸ್ಯೆಗಳ ಪಟ್ಟಿ ಮಾಡಿ ಅದರ ಬಗ್ಗೆ ಹೊಸ ತಂತ್ರಜ್ಞಾನ, ತಾಂತ್ರಿಕ ಪ್ರಾತ್ಯಕ್ಷಿಕೆ ಜೊತೆ ಮಾಹಿತಿ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಷ್ಟ್ರೋತ್ಥಾನ ಗೋಶಾಲೆ ಮುಖ್ಯಸ್ಥ ಗವ್ಯ ಸಿದ್ಧ ವೈದ್ಯ ಡಾ.ಜೀವನ್ ಕುಮಾರ್, ಸಾವಯವ ಕೃಷಿಯ ಬಗ್ಗೆ ಇಂದು ಹೆಚ್ಚಿನ ಪ್ರಚಾರವಾಗಬೇಕಿದ್ದು, ಗೋವಿನ ಮಹತ್ವದ ಬಗ್ಗೆ ಅರಿಯಬೇಕಿದೆ. ಪುಸ್ತಕದ ಅರಿವಿಗಿಂತ ಪ್ರಾಯೋಗಿಕ ಅರಿವು ಮುಖ್ಯ ಎಂದು ತಮ್ಮ ಕೃಷಿ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಗ್ರಾಮೀಣ ಕೃಷಿ ಶಿಬಿರದ ಸಹ ಸಂಯೋಜಕ ಡಾ.ಪಂಕಜಾ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಉಮಾಬಾಯಿ, ಅಪ್ಪಯ್ಯಪ್ಪ, ವೆಂಕಟೇಶ್, ವಾಸುದೇವ, ರೈತ ಮಹಿಳೆ ರೂಪಾ ,ರೈತ ಮುಖಂಡ ನರಸಿಂಹ ಗೌಡ, ಸಂಪನ್ಮೂಲ ವಿಜ್ಞಾನಿಗಳಾದ ಲಕ್ಷ್ಮೀನಾರಾಯಣ ರೆಡ್ಡಿ , ಲಕ್ಷ್ಮೀಪತಿ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಭಾಗವಹಿಸಿದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…