ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ತಾಲೂಕಿನ ಪಾಲ್ ಪಾಲ್ ದಿನ್ನೆಯಲ್ಲಿ ಕೃಷಿ ಬೃಂದಾವನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇದರ ಅಂಗವಾಗಿ ಬೆಳೆ ಕ್ಷೇತ್ರೋತ್ಸವ, ಕೃಷಿ ವಸ್ತು ಪ್ರದರ್ಶನ, ಕೃಷಿ ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೃಷಿ ವಿದ್ಯಾರ್ಥಿಗಳು 3 ತಿಂಗಳಿಂದ ಹಳ್ಳಿಯಲ್ಲಿ ಬಿಡಾರ ಹೂಡಿದ್ದು, ರೈತರ ಮಾಹಿತಿ ಕಲೆ ಹಾಕಿ ಸಮಸ್ಯೆಗಳ ಪಟ್ಟಿ ಮಾಡಿ ಅದರ ಬಗ್ಗೆ ಹೊಸ ತಂತ್ರಜ್ಞಾನ, ತಾಂತ್ರಿಕ ಪ್ರಾತ್ಯಕ್ಷಿಕೆ ಜೊತೆ ಮಾಹಿತಿ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಷ್ಟ್ರೋತ್ಥಾನ ಗೋಶಾಲೆ ಮುಖ್ಯಸ್ಥ ಗವ್ಯ ಸಿದ್ಧ ವೈದ್ಯ ಡಾ.ಜೀವನ್ ಕುಮಾರ್, ಸಾವಯವ ಕೃಷಿಯ ಬಗ್ಗೆ ಇಂದು ಹೆಚ್ಚಿನ ಪ್ರಚಾರವಾಗಬೇಕಿದ್ದು, ಗೋವಿನ ಮಹತ್ವದ ಬಗ್ಗೆ ಅರಿಯಬೇಕಿದೆ. ಪುಸ್ತಕದ ಅರಿವಿಗಿಂತ ಪ್ರಾಯೋಗಿಕ ಅರಿವು ಮುಖ್ಯ ಎಂದು ತಮ್ಮ ಕೃಷಿ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಗ್ರಾಮೀಣ ಕೃಷಿ ಶಿಬಿರದ ಸಹ ಸಂಯೋಜಕ ಡಾ.ಪಂಕಜಾ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಉಮಾಬಾಯಿ, ಅಪ್ಪಯ್ಯಪ್ಪ, ವೆಂಕಟೇಶ್, ವಾಸುದೇವ, ರೈತ ಮಹಿಳೆ ರೂಪಾ ,ರೈತ ಮುಖಂಡ ನರಸಿಂಹ ಗೌಡ, ಸಂಪನ್ಮೂಲ ವಿಜ್ಞಾನಿಗಳಾದ ಲಕ್ಷ್ಮೀನಾರಾಯಣ ರೆಡ್ಡಿ , ಲಕ್ಷ್ಮೀಪತಿ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…