ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ತಾಲೂಕಿನ ಪಾಲ್ ಪಾಲ್ ದಿನ್ನೆಯಲ್ಲಿ ಕೃಷಿ ಬೃಂದಾವನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇದರ ಅಂಗವಾಗಿ ಬೆಳೆ ಕ್ಷೇತ್ರೋತ್ಸವ, ಕೃಷಿ ವಸ್ತು ಪ್ರದರ್ಶನ, ಕೃಷಿ ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೃಷಿ ವಿದ್ಯಾರ್ಥಿಗಳು 3 ತಿಂಗಳಿಂದ ಹಳ್ಳಿಯಲ್ಲಿ ಬಿಡಾರ ಹೂಡಿದ್ದು, ರೈತರ ಮಾಹಿತಿ ಕಲೆ ಹಾಕಿ ಸಮಸ್ಯೆಗಳ ಪಟ್ಟಿ ಮಾಡಿ ಅದರ ಬಗ್ಗೆ ಹೊಸ ತಂತ್ರಜ್ಞಾನ, ತಾಂತ್ರಿಕ ಪ್ರಾತ್ಯಕ್ಷಿಕೆ ಜೊತೆ ಮಾಹಿತಿ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಷ್ಟ್ರೋತ್ಥಾನ ಗೋಶಾಲೆ ಮುಖ್ಯಸ್ಥ ಗವ್ಯ ಸಿದ್ಧ ವೈದ್ಯ ಡಾ.ಜೀವನ್ ಕುಮಾರ್, ಸಾವಯವ ಕೃಷಿಯ ಬಗ್ಗೆ ಇಂದು ಹೆಚ್ಚಿನ ಪ್ರಚಾರವಾಗಬೇಕಿದ್ದು, ಗೋವಿನ ಮಹತ್ವದ ಬಗ್ಗೆ ಅರಿಯಬೇಕಿದೆ. ಪುಸ್ತಕದ ಅರಿವಿಗಿಂತ ಪ್ರಾಯೋಗಿಕ ಅರಿವು ಮುಖ್ಯ ಎಂದು ತಮ್ಮ ಕೃಷಿ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಗ್ರಾಮೀಣ ಕೃಷಿ ಶಿಬಿರದ ಸಹ ಸಂಯೋಜಕ ಡಾ.ಪಂಕಜಾ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಉಮಾಬಾಯಿ, ಅಪ್ಪಯ್ಯಪ್ಪ, ವೆಂಕಟೇಶ್, ವಾಸುದೇವ, ರೈತ ಮಹಿಳೆ ರೂಪಾ ,ರೈತ ಮುಖಂಡ ನರಸಿಂಹ ಗೌಡ, ಸಂಪನ್ಮೂಲ ವಿಜ್ಞಾನಿಗಳಾದ ಲಕ್ಷ್ಮೀನಾರಾಯಣ ರೆಡ್ಡಿ , ಲಕ್ಷ್ಮೀಪತಿ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…