ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ತಾಲೂಕಿನ ಪಾಲ್ ಪಾಲ್ ದಿನ್ನೆಯಲ್ಲಿ ಕೃಷಿ ಬೃಂದಾವನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇದರ ಅಂಗವಾಗಿ ಬೆಳೆ ಕ್ಷೇತ್ರೋತ್ಸವ, ಕೃಷಿ ವಸ್ತು ಪ್ರದರ್ಶನ, ಕೃಷಿ ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೃಷಿ ವಿದ್ಯಾರ್ಥಿಗಳು 3 ತಿಂಗಳಿಂದ ಹಳ್ಳಿಯಲ್ಲಿ ಬಿಡಾರ ಹೂಡಿದ್ದು, ರೈತರ ಮಾಹಿತಿ ಕಲೆ ಹಾಕಿ ಸಮಸ್ಯೆಗಳ ಪಟ್ಟಿ ಮಾಡಿ ಅದರ ಬಗ್ಗೆ ಹೊಸ ತಂತ್ರಜ್ಞಾನ, ತಾಂತ್ರಿಕ ಪ್ರಾತ್ಯಕ್ಷಿಕೆ ಜೊತೆ ಮಾಹಿತಿ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಷ್ಟ್ರೋತ್ಥಾನ ಗೋಶಾಲೆ ಮುಖ್ಯಸ್ಥ ಗವ್ಯ ಸಿದ್ಧ ವೈದ್ಯ ಡಾ.ಜೀವನ್ ಕುಮಾರ್, ಸಾವಯವ ಕೃಷಿಯ ಬಗ್ಗೆ ಇಂದು ಹೆಚ್ಚಿನ ಪ್ರಚಾರವಾಗಬೇಕಿದ್ದು, ಗೋವಿನ ಮಹತ್ವದ ಬಗ್ಗೆ ಅರಿಯಬೇಕಿದೆ. ಪುಸ್ತಕದ ಅರಿವಿಗಿಂತ ಪ್ರಾಯೋಗಿಕ ಅರಿವು ಮುಖ್ಯ ಎಂದು ತಮ್ಮ ಕೃಷಿ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಗ್ರಾಮೀಣ ಕೃಷಿ ಶಿಬಿರದ ಸಹ ಸಂಯೋಜಕ ಡಾ.ಪಂಕಜಾ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಉಮಾಬಾಯಿ, ಅಪ್ಪಯ್ಯಪ್ಪ, ವೆಂಕಟೇಶ್, ವಾಸುದೇವ, ರೈತ ಮಹಿಳೆ ರೂಪಾ ,ರೈತ ಮುಖಂಡ ನರಸಿಂಹ ಗೌಡ, ಸಂಪನ್ಮೂಲ ವಿಜ್ಞಾನಿಗಳಾದ ಲಕ್ಷ್ಮೀನಾರಾಯಣ ರೆಡ್ಡಿ , ಲಕ್ಷ್ಮೀಪತಿ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಭಾಗವಹಿಸಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…