Categories: ಕೋಲಾರ

ಪಿಎಲ್ಡಿ ಬ್ಯಾಂಕ್ ಸರ್ವ ಸದಸ್ಯರ ವಾರ್ಷಿಕ ಸಭೆ: ರೈತರಿಂದ ಬರಬೇಕಾದ ಹೊರಬಾಕಿ ಸಾಲದಿಂದ ಬ್ಯಾಂಕ್ ನಷ್ಟದಲ್ಲಿ – ಶಿವಕುಮಾರ್

ಕೋಲಾರ: ರೈತರಿಂದ ಸುಮಾರು 7.57 ಕೋಟಿಯಷ್ಟು ಹೊರಬಾಕಿ ಸಾಲವನ್ನು ಬಾಕಿ ಉಳಿಸಿಕೊಂಡಿದ್ದರಿಂದ ಬ್ಯಾಂಕ್‌ ಪ್ರಸಕ್ತ ಸಾಲಿನಲ್ಲಿ ನಷ್ಟದಲ್ಲಿ ನಡೆಯಬೇಕಾಗಿದೆ ಕೂಡಲೇ ರೈತರು ಸಾಲ ಮರುಪಾವತಿಗೆ ಮುಂದಾಗಿ ಬೇರೆ ರೈತರಿಗೆ ಹೊಸದಾಗಿ ಸಾಲ ನೀಡಲು ಸಹಕರಿಸಬೇಕಾಗಿದೆ ಎಂದು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ಡಿ) ಬ್ಯಾಂಕ್‌ನ ಅಧ್ಯಕ್ಷ ಕೆಂದಟ್ಟಿ ಎ.ಶಿವಕುಮಾರ್ ತಿಳಿಸಿದರು

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಶನಿವಾರ ನಡೆದ ಬ್ಯಾಂಕ್‌ನ 2024–25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಹೊರಬಾಕಿಯು ಪಿಎಲ್ಡಿ ಬ್ಯಾಂಕ್ ಮತ್ತು ರಾಜ್ಯ ಬ್ಯಾಂಕ್ ಮಧ್ಯೆ ಸುಮಾರು 4.22 ಕೋಟಿ ಇದೆ ರೈತರು ಹೊರ ಬಾಕಿ ಸಾಲವನ್ನು ಕಟ್ಟಿದರೆ ಮಾತ್ರವೇ ಸರಿದೂಗಿಸಲು ಸಾಧ್ಯವಾಗುತ್ತದೆ ಅದರ ಮಧ್ಯೆ ಸುಮಾರು 1.15 ಕೋಟಿ ಸಾಲವನ್ನು ರೈತರಿಗೆ ನೀಡಲು ಬ್ಯಾಂಕ್ ತಯಾರಿ ಮಾಡಿಕೊಳ್ಳಲಾಗಿದೆ ಎಂದರು.

ಹಿರಿಯ ಸಹಕಾರಿ ಧುರೀಣರ ಆದರ್ಶ ಮತ್ತು ಮಾರ್ಗದರ್ಶನದಲ್ಲಿ ಬ್ಯಾಂಕ್‌ ಆಡಳಿತ ನಡೆಸುತ್ತಿದೆ ಸರ್ಕಾರದ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ರೈತರ ಮನೆ ಬಾಗಿಲಿಗೆ ತಲುಪುವಂತೆ ಮಾಡುವುದಕ್ಕೆ ಎಲ್ಲರ ಸಹಕಾರ ಅಗತ್ಯ ರೈತರು ಪಡೆದ ಸಾಲವನ್ನು ನಿಗದಿತ ಅವಧಿಯಲ್ಲಿ ಸಮರ್ಪಕವಾಗಿ ಮರುಪಾವತಿಸಿದರೆ ಮಾತ್ರ ಬ್ಯಾಂಕ್‌ನ ಅಭಿವೃದ್ಧಿ ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಕಸ್ಕಾರ್ಡ್ ಬ್ಯಾಂಕ್ ರಾಜ್ಯ ನಿರ್ದೇಶಕ ಯಲವಾರ ಸೊಣ್ಣೇಗೌಡ ಮಾತನಾಡಿ ಬ್ಯಾಂಕ್ ನಲ್ಲಿ ಸುಮಾರು 8 ಸಾವಿರ
ಷೇರುದಾರರು ಇದ್ದು ವಹಿವಾಟು ಸರಿಯಾಗಿ ನಡೆಯಬೇಕೆಂದರೆ ಒಂದು ಚಕ್ರ ಸಿಬ್ಬಂದಿ ಮತ್ತೊಂದು ಚಕ್ರ ರೈತರು ಎರಡು ಚಕ್ರಗಳು ಸರಿಯಾಗಿ ಹೋದರೆ ಸಂಸ್ಥೆ ಚೆನ್ನಾಗಿ ಬೆಳೆಯುತ್ತದೆ ಲೆಕ್ಕಪತ್ರಗಳು ಮುಕ್ತವಾಗಿವೆ ಅವುಗಳನ್ನು ಯಾವುದೇ ಸಮಯದಲ್ಲಾದರೂ ಬಂದು ಬ್ಯಾಂಕ್ ನಲ್ಲಿ ಮಾಹಿತಿಯನ್ನು ಪಡೆಯಬಹುದು ರೈತರು ಸಾಲ ಪಡೆದು ಸರಿಯಾಗಿ ಮರುಪಾವತಿ ಮಾಡುತ್ತಿಲ್ಲ ಬಡ್ಡಿ ಮನ್ನಾ ಆಗುತ್ತೆ ಅಂತ ಹೇಳಿ ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಬ್ಯಾಂಕ್ ಉತ್ತಮ ವಹಿವಾಟು ಮಾಡಲು ಚೆನ್ನಾಗಿರುವ ರೈತರು ಪಿಗ್ಮಿ, ಡಿಪಾಸಿಟ್ ಕೊಡುವಂತೆ ಮನವಿ ಮಾಡಿದರು

ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಎನ್ ಜಿ ಬ್ಯಾಟಪ್ಪ ಮಾತನಾಡಿ ಸಹಕಾರಿ ಸಂಸ್ಥೆಯನ್ನು ನಮ್ಮ ಧೀಮಂತ ನಾಯಕರಾದ ಬೈರೇಗೌಡರು, ವೆಂಕಟಗಿರಿಯಪ್ಪ ಶ್ರೀನಿವಾಸಗೌಡ ಬೆಳೆಸಿದ್ದಾರೆ ಸಂಸ್ಥೆ ಉಳಿಯಬೇಕು ರೈತರ ಅಭಿವೃದ್ಧಿಗೆ ಒತ್ತು ಕೊಡಿ ರೈತರಿಗೆ ಕಡಿಮೆ ಬಡ್ಡಿಗೆ ಸಾಲ ಕೊಡತ್ತಾ ಇದ್ದು ಅದನ್ನು ರೈತರು ತೆಗೆದುಕೊಂಡು ಸದುಪಯೋಗಪಡಿಸಿಕೊಂಡು ಸರಿಯಾಗಿ ಹಣ ಪಾವತಿ ಮಾಡಿ ಸಂಸ್ಥೆ ಉಳಿಸಿ ಹಳೇ ಸುಸ್ತಿದಾರರ ಪಟ್ಟಿಯನ್ನು ಜಿಬಿಎಂನಲ್ಲಿ ಪ್ರಕಟಿಸಬೇಕು ಅವರ ಸಂಬಂಧಿಕರು ಬಂದಿರುತ್ತಾರೆ ಅವರಿಗೆ ವಿಷಯ ತಿಳಿಸಿ ಲೋನ್ ಮರುಪಾವತಿ ಮಾಡಲು ಸಹಾಯ ಆಗುತ್ತೆ ಬೇರೆಯವರಿಗೆ ಹೊಸ ಸಾಲ ಕೊಡಲು ಅನುಕೂಲವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬ್ಯಾಂಕ್ ಉಪಾಧ್ಯಕ್ಷ ಎಂ.ವೆಂಕಟರಾಮ್, ನಿರ್ದೇಶಕರಾದ ಡೇರಿ ವೆಂಕಟೇಶ್, ವಿ.ಎ ಶಶಿಧರ್, ಬೈರೇಗೌಡ, ಮಂಜುನಾಥ್, ಕೆ.ಎಂ ವೆಂಕಟೇಶಪ್ಪ, ನರೇಶ್ ಬಾಬು, ಲಕ್ಷ್ಮಮ್ಮ, ಅಂಬಿಕಾ, ವೆಂಕಟರಾಮಪ್ಪ, ಮುನಿರತ್ನಮ್ಮ, ವೆಂಕಟಲಕ್ಷ್ಮಮ್ಮ, ಸುರೇಶ್ ಬಾಬು, ಸಿಇಒ ಶ್ರೀನಿವಾಸ್ ಸೇರಿದಂತೆ ರೈತರು ಸಿಬ್ಬಂದಿ ಇದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

4 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago