ಕೋಲಾರ: ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ 90,49,439 ಲಕ್ಷ ಲಾಭ ಗಳಿಸಿದ್ದು ಅಲ್ಲದೇ ಸಾಲ ವಸೂಲಾತಿಯಲ್ಲಿ ಜಿಲ್ಲೆಗೆ ದ್ವೀತಿಯ ಸ್ಥಾನವನ್ನು ಪಡೆದಿದೆ ಎಂದು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ನ ಅಧ್ಯಕ್ಷ ಹೊಳಲಿ ಹೊಸೂರು ಜಿ.ಅಮರೇಶ್ ಹೇಳಿದರು.
ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಶುಕ್ರವಾರ ಬ್ಯಾಂಕ್ನ 2023–24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ವರ್ಷದಲ್ಲಿ ರೈತರಿಗೆ ಸರಕಾರದ ಸಾಲಮನ್ನಾ ಯೋಜನೆಯಿಂದ 1.22 ಕೋಟಿ ರೂಪಾಯಿಗಳ ಪ್ರಯೋಜನವಾಗಿದೆ ಹಿಂದೆ ಆಡಳಿತ ನಡೆಸಿದವರ ಮಾರ್ಗದರ್ಶನದಲ್ಲಿ ಬ್ಯಾಂಕ್ ಮುನ್ನಡೆಸಿಕೊಂಡು ಹೋಗಿದ್ದೇವೆ ಎಂದರು.
ಸರ್ಕಾರದ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ರೈತರ ಮನೆ ಬಾಗಿಲಿಗೆ ತಲುಪುವಂತೆ ಮಾಡುವುದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ರೈತರು ಪಡೆದ ಸಾಲವನ್ನು ನಿಗದಿತ ಅವಧಿಯಲ್ಲಿ ಸಮರ್ಪಕವಾಗಿ ಮರುಪಾವತಿಸಿದರೆ ಮಾತ್ರ ಬ್ಯಾಂಕ್ನ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.
ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರು ರಾಜ್ಯದಲ್ಲೇ ಶ್ರಮಜೀವಿಗಳಾಗಿದ್ದಾರೆ. ಹೆಚ್ಚಿನ ಮಳೆಯಿಲ್ಲದಿದ್ದರೂ ಸ್ವಾಭಿಮಾನಿಗಳಾಗಿ ದುಡಿಯುತ್ತಾರೆ. ಮಾರುಕಟ್ಟೆಗೆ ಅನುಗುಣವಾಗಿ ವ್ಯವಸಾಯ ಮಾಡತ್ತಾರೆ. ವಾಣಿಜ್ಯ ಬೆಳೆಗಳಲ್ಲಿ ನಷ್ಟವಾದರೆ ಹೈನುಗಾರಿಕೆ ಕೈ ಹಿಡಿದಿದೆ ಸಾಲ ಮರುಪಾವತಿಯಲ್ಲಿ ಬ್ಯಾಂಕ್ ಅಧಿಕಾರಿಗಳು ಮತ್ತು ಆಡಳಿತ ಮಂಡಳಿ ಬಂದಾಗ ಸಹಕರಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಿಎಲ್ಲಿ ಬ್ಯಾಂಕ್ ಉಪಾಧ್ಯಕ್ಷೆ ಸುನಂದಮ್ಮ, ನಿರ್ದೇಶಕರಾದ ಯಲವಾರ ಸೊಣ್ಣೆಗೌಡ, ವಿಟ್ಟಪ್ಪನಹಳ್ಳಿ ಡೇರಿ ವೆಂಕಟೇಶ್, ವಿ.ಎ ಶಶಿಧರ್, ಹೆಚ್ ಕೃಷ್ಣೇಗೌಡ, ಚಿಕ್ಕಹಸಾಳ ಮಂಜುನಾಥ್, ಬೈರೇಗೌಡ, ರಾಧಾಕೃಷ್ಣ, ಕೆ.ಸಿ ಮಂಜುನಾಥ್, ಗಂಗಪ್ಪ, ಶೋಭಾ, ಗೋವಿಂದಪ್ಪ, ಬ್ಯಾಂಕ್ ಸಿಇಒ ಶ್ರೀನಿವಾಸ್, ಲೆಕ್ಕಾಧಿಕಾರಿ ಶೋಭಾರಾಣಿ, ಸಿ.ಶ್ಯಾಮಲಾ ಮುಂತಾದವರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…