ಕೋಲಾರ: ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ 90,49,439 ಲಕ್ಷ ಲಾಭ ಗಳಿಸಿದ್ದು ಅಲ್ಲದೇ ಸಾಲ ವಸೂಲಾತಿಯಲ್ಲಿ ಜಿಲ್ಲೆಗೆ ದ್ವೀತಿಯ ಸ್ಥಾನವನ್ನು ಪಡೆದಿದೆ ಎಂದು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ನ ಅಧ್ಯಕ್ಷ ಹೊಳಲಿ ಹೊಸೂರು ಜಿ.ಅಮರೇಶ್ ಹೇಳಿದರು.
ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಶುಕ್ರವಾರ ಬ್ಯಾಂಕ್ನ 2023–24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ವರ್ಷದಲ್ಲಿ ರೈತರಿಗೆ ಸರಕಾರದ ಸಾಲಮನ್ನಾ ಯೋಜನೆಯಿಂದ 1.22 ಕೋಟಿ ರೂಪಾಯಿಗಳ ಪ್ರಯೋಜನವಾಗಿದೆ ಹಿಂದೆ ಆಡಳಿತ ನಡೆಸಿದವರ ಮಾರ್ಗದರ್ಶನದಲ್ಲಿ ಬ್ಯಾಂಕ್ ಮುನ್ನಡೆಸಿಕೊಂಡು ಹೋಗಿದ್ದೇವೆ ಎಂದರು.
ಸರ್ಕಾರದ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ರೈತರ ಮನೆ ಬಾಗಿಲಿಗೆ ತಲುಪುವಂತೆ ಮಾಡುವುದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ರೈತರು ಪಡೆದ ಸಾಲವನ್ನು ನಿಗದಿತ ಅವಧಿಯಲ್ಲಿ ಸಮರ್ಪಕವಾಗಿ ಮರುಪಾವತಿಸಿದರೆ ಮಾತ್ರ ಬ್ಯಾಂಕ್ನ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.
ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರು ರಾಜ್ಯದಲ್ಲೇ ಶ್ರಮಜೀವಿಗಳಾಗಿದ್ದಾರೆ. ಹೆಚ್ಚಿನ ಮಳೆಯಿಲ್ಲದಿದ್ದರೂ ಸ್ವಾಭಿಮಾನಿಗಳಾಗಿ ದುಡಿಯುತ್ತಾರೆ. ಮಾರುಕಟ್ಟೆಗೆ ಅನುಗುಣವಾಗಿ ವ್ಯವಸಾಯ ಮಾಡತ್ತಾರೆ. ವಾಣಿಜ್ಯ ಬೆಳೆಗಳಲ್ಲಿ ನಷ್ಟವಾದರೆ ಹೈನುಗಾರಿಕೆ ಕೈ ಹಿಡಿದಿದೆ ಸಾಲ ಮರುಪಾವತಿಯಲ್ಲಿ ಬ್ಯಾಂಕ್ ಅಧಿಕಾರಿಗಳು ಮತ್ತು ಆಡಳಿತ ಮಂಡಳಿ ಬಂದಾಗ ಸಹಕರಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಿಎಲ್ಲಿ ಬ್ಯಾಂಕ್ ಉಪಾಧ್ಯಕ್ಷೆ ಸುನಂದಮ್ಮ, ನಿರ್ದೇಶಕರಾದ ಯಲವಾರ ಸೊಣ್ಣೆಗೌಡ, ವಿಟ್ಟಪ್ಪನಹಳ್ಳಿ ಡೇರಿ ವೆಂಕಟೇಶ್, ವಿ.ಎ ಶಶಿಧರ್, ಹೆಚ್ ಕೃಷ್ಣೇಗೌಡ, ಚಿಕ್ಕಹಸಾಳ ಮಂಜುನಾಥ್, ಬೈರೇಗೌಡ, ರಾಧಾಕೃಷ್ಣ, ಕೆ.ಸಿ ಮಂಜುನಾಥ್, ಗಂಗಪ್ಪ, ಶೋಭಾ, ಗೋವಿಂದಪ್ಪ, ಬ್ಯಾಂಕ್ ಸಿಇಒ ಶ್ರೀನಿವಾಸ್, ಲೆಕ್ಕಾಧಿಕಾರಿ ಶೋಭಾರಾಣಿ, ಸಿ.ಶ್ಯಾಮಲಾ ಮುಂತಾದವರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…