ಕೋಲಾರ: ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪಕ್ಷಾತೀತವಾಗಿ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರೈತರಿಂದ ಸಾಲ ವಸೂಲಿ ಮಾಡುವ ಮೂಲಕ ಬ್ಯಾಂಕ್ ಏಳಿಗೆಗಾಗಿ ಶ್ರಮಿಸುವಂತೆ ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ಯಲವಾರ ಸೊಣ್ಣೇಗೌಡ ತಿಳಿಸಿದರು.
ನಗರದ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಕಛೇರಿಯಲ್ಲಿ ಶನಿವಾರ ಜಿಲ್ಲೆಯ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರು ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳ ಸಭೆಯಲ್ಲಿ ಮಾತನಾಡಿದ ಅವರು ಅಧಿಕಾರಿಗಳು ಬ್ಯಾಂಕ್ ವಿಚಾರದಲ್ಲಿ ಯಾವತ್ತೂ ರಾಜಕಾರಣ ಮಾಡಬಾರದು ಎಲ್ಲಾ ಪಕ್ಷಗಳ ಜೊತೆಗೆ ಆಡಳಿತ ಮಂಡಳಿಯೊಂದಿಗೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಬ್ಯಾಂಕ್ ಅನ್ನು ಸರಿದಾರಿಗೆ ತೆಗೆದುಕೊಳ್ಳಬೇಕು ಆರ್ಥಿಕವಾಗಿ ವ್ಯವಸ್ಥೆ ಸರಿ ಇದ್ದರೆ ಮಾತ್ರವೇ ಬ್ಯಾಂಕ್ ನಡೆಯಲು ಸಾಧ್ಯ ವಸೂಲಿ ಮಾಡದೇ ಹೋದರೆ ರೈತರಿಗೆ ಸಾಲ ನೀಡಲು ಸಾಧ್ಯವಿಲ್ಲ ಎಂದರು
ಕೆಲವು ಕಡೆ ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ಲಕ್ಷ್ಯದಿಂದ ವಸೂಲಿ ಕಡಿಮೆಯಾಗಿದೆ ಎಲ್ಲೂ ಸಹ ದುರುಪಯೋಗ ಆಗಿಲ್ಲ ಗ್ಯಾಪ್ ಉಳಿದಿದೆ ಬ್ಯಾಂಕಿಂಗ್ ಚಟುವಟಿಕೆ ಚುರುಕುಗೊಳಿಸಬೇಕು. ವಸೂಲಿಗೆ ಮೊದಲ ಆದ್ಯತೆ ನೀಡಬೇಕು ಜನರಿಗೆ ಮತ್ತೆ ಸಾಲ ನೀಡಿ ಲಾಭಾದಾಯಕವಾಗಿ ಬ್ಯಾಂಕ್ ಮಾಡಬೇಕು ಮಾರ್ಚ್ ತಿಂಗಳೊಳಗೆ ರಾತ್ರಿ ಹಗಲು ಎನ್ನದೆ ರೈತರನ್ನು ಮನವೊಲಿಸಿ ವಸೂಲಿ ಮಾಡಬೇಕು. ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಒಳ್ಳೆಯ ಭಾವನೆಯಿಂದ ಕೆಲಸ ಮಾಡಿದರೆ ಪ್ರತಿಫಲ ಖಂಡಿತ ಸಿಗುತ್ತದೆ ಎಂದರು
ರೈತರು ಸಹ ಮಾರ್ಚ್ 31 ರೊಳಗೆ ಸಾಲ ಮರುಪಾವತಿ ಮಾಡುವಂತೆ ಮನವರಿಕೆ ಮಾಡಿ ಮಾರ್ಚ್ ಮುಗಿದ ನಂತರ ಹೆಚ್ಚುವರಿ ಬಡ್ಡಿ ಕಟ್ಟಬೇಕಾಗುತ್ತದೆ ರೈತರು ಸಹ ಸ್ವಯಂಪ್ರೇರಿತವಾಗಿ ತಾವು ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವುದರಿಂದ ಇತರ ರೈತರಿಗೆ ಸಾಲ ನೀಡುವುದರ ಜತೆಗೆ ಬ್ಯಾಂಕಿನ ಅಭಿವೃದ್ಧಿಗೂ ಅವಕಾಶವಾಗಲಿದೆ. ಆದ್ದರಿಂದ ಈಗ ಪಡೆಯುತ್ತಿರುವ ಸಾಲವನ್ನು ನಿಯಮಿತವಾಗಿ ರೈತರು ಕಟ್ಟಲು ಮುಂದಾಗಬೇಕೆಂದು ಎಂದರು.
ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಮುಳಬಾಗಿಲು ತಾಲೂಕು ಅಧ್ಯಕ್ಷ ಗಂಗಿರೆಡ್ಡಿ, ಕೋಲಾರ ಅಧ್ಯಕ್ಷ ಕೆಂದಟ್ಟಿ ಶಿವಕುಮಾರ್, ಬಂಗಾರಪೇಟೆ ಅಧ್ಯಕ್ಷ ಹೆಚ್.ಎಸ್ ರಘುನಾಥ್, ಮಾಲೂರು ಉಪಾಧ್ಯಕ್ಷ ವೆಂಕಟೇಶಪ್ಪ, ಸೇರಿದಂತೆ ಅಧಿಕಾರಿಗಳು ಸಿಬ್ಬಂದಿ ಸಭೆಯಲ್ಲಿ ಇದ್ದರು
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…