Categories: ಕೋಲಾರ

ಪಿಎಲ್ ಡಿ ಬ್ಯಾಂಕ್ ಅಧಿಕಾರಿಗಳು ಆಡಳಿತ ಮಂಡಳಿಗಳ ಜೊತೆಗೆ ರಾಜಕಾರಣಿಗಳನ್ನು ವಿಶ್ವಾಸ ಪಡೆದು ರೈತರಿಂದ ಸಾಲ ವಸೂಲಿಗೆ ಆದ್ಯತೆ ನೀಡಿ- ಯಲವಾರ ಸೊಣ್ಣೇಗೌಡ ಅಧಿಕಾರಿಗಳಿಗೆ ಸೂಚನೆ

ಕೋಲಾರ: ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪಕ್ಷಾತೀತವಾಗಿ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರೈತರಿಂದ ಸಾಲ ವಸೂಲಿ ಮಾಡುವ ಮೂಲಕ ಬ್ಯಾಂಕ್ ಏಳಿಗೆಗಾಗಿ ಶ್ರಮಿಸುವಂತೆ ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ ನಿರ್ದೇಶಕ ಯಲವಾರ ಸೊಣ್ಣೇಗೌಡ ತಿಳಿಸಿದರು.

ನಗರದ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ ಕಛೇರಿಯಲ್ಲಿ ಶನಿವಾರ ಜಿಲ್ಲೆಯ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರು ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳ ಸಭೆಯಲ್ಲಿ ಮಾತನಾಡಿದ ಅವರು ಅಧಿಕಾರಿಗಳು ಬ್ಯಾಂಕ್ ವಿಚಾರದಲ್ಲಿ ಯಾವತ್ತೂ ರಾಜಕಾರಣ ಮಾಡಬಾರದು ಎಲ್ಲಾ ಪಕ್ಷಗಳ ಜೊತೆಗೆ ಆಡಳಿತ ಮಂಡಳಿಯೊಂದಿಗೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಬ್ಯಾಂಕ್ ಅನ್ನು ಸರಿದಾರಿಗೆ ತೆಗೆದುಕೊಳ್ಳಬೇಕು ಆರ್ಥಿಕವಾಗಿ ವ್ಯವಸ್ಥೆ ಸರಿ ಇದ್ದರೆ‌ ಮಾತ್ರವೇ ಬ್ಯಾಂಕ್ ನಡೆಯಲು ಸಾಧ್ಯ ವಸೂಲಿ ಮಾಡದೇ ಹೋದರೆ ರೈತರಿಗೆ ಸಾಲ ನೀಡಲು ಸಾಧ್ಯವಿಲ್ಲ ಎಂದರು

ಕೆಲವು ಕಡೆ ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ಲಕ್ಷ್ಯದಿಂದ ವಸೂಲಿ ಕಡಿಮೆಯಾಗಿದೆ ಎಲ್ಲೂ ಸಹ ದುರುಪಯೋಗ ಆಗಿಲ್ಲ ಗ್ಯಾಪ್ ಉಳಿದಿದೆ ಬ್ಯಾಂಕಿಂಗ್ ಚಟುವಟಿಕೆ ಚುರುಕುಗೊಳಿಸಬೇಕು. ವಸೂಲಿಗೆ ಮೊದಲ ‌ಆದ್ಯತೆ‌ ನೀಡಬೇಕು ಜನರಿಗೆ ‌ಮತ್ತೆ ಸಾಲ‌ ನೀಡಿ ಲಾಭಾದಾಯಕವಾಗಿ ಬ್ಯಾಂಕ್ ಮಾಡಬೇಕು ಮಾರ್ಚ್ ತಿಂಗಳೊಳಗೆ ರಾತ್ರಿ ಹಗಲು ಎನ್ನದೆ ರೈತರನ್ನು ಮನವೊಲಿಸಿ ವಸೂಲಿ‌ ಮಾಡಬೇಕು.‌ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಒಳ್ಳೆಯ ಭಾವನೆಯಿಂದ ಕೆಲಸ ಮಾಡಿದರೆ ಪ್ರತಿಫಲ ಖಂಡಿತ ಸಿಗುತ್ತದೆ ಎಂದರು

ರೈತರು ಸಹ ಮಾರ್ಚ್ 31 ರೊಳಗೆ ಸಾಲ ಮರುಪಾವತಿ ಮಾಡುವಂತೆ ಮನವರಿಕೆ ಮಾಡಿ ಮಾರ್ಚ್ ಮುಗಿದ ನಂತರ ಹೆಚ್ಚುವರಿ ಬಡ್ಡಿ ಕಟ್ಟಬೇಕಾಗುತ್ತದೆ ರೈತರು ಸಹ ಸ್ವಯಂಪ್ರೇರಿತವಾಗಿ ತಾವು ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವುದರಿಂದ ಇತರ ರೈತರಿಗೆ ಸಾಲ ನೀಡುವುದರ ಜತೆಗೆ ಬ್ಯಾಂಕಿನ ಅಭಿವೃದ್ಧಿಗೂ ಅವಕಾಶವಾಗಲಿದೆ. ಆದ್ದರಿಂದ ಈಗ ಪಡೆಯುತ್ತಿರುವ ಸಾಲವನ್ನು ನಿಯಮಿತವಾಗಿ ರೈತರು ಕಟ್ಟಲು ಮುಂದಾಗಬೇಕೆಂದು ಎಂದರು.

ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಮುಳಬಾಗಿಲು ತಾಲೂಕು ಅಧ್ಯಕ್ಷ ಗಂಗಿರೆಡ್ಡಿ, ಕೋಲಾರ ಅಧ್ಯಕ್ಷ ಕೆಂದಟ್ಟಿ ಶಿವಕುಮಾರ್, ಬಂಗಾರಪೇಟೆ ಅಧ್ಯಕ್ಷ ಹೆಚ್.ಎಸ್ ರಘುನಾಥ್, ಮಾಲೂರು ಉಪಾಧ್ಯಕ್ಷ ವೆಂಕಟೇಶಪ್ಪ, ಸೇರಿದಂತೆ ಅಧಿಕಾರಿಗಳು ಸಿಬ್ಬಂದಿ ಸಭೆಯಲ್ಲಿ ಇದ್ದರು

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

5 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

7 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

9 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

10 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

22 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

22 hours ago