ಕೋಲಾರ: ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪಕ್ಷಾತೀತವಾಗಿ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರೈತರಿಂದ ಸಾಲ ವಸೂಲಿ ಮಾಡುವ ಮೂಲಕ ಬ್ಯಾಂಕ್ ಏಳಿಗೆಗಾಗಿ ಶ್ರಮಿಸುವಂತೆ ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ಯಲವಾರ ಸೊಣ್ಣೇಗೌಡ ತಿಳಿಸಿದರು.
ನಗರದ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಕಛೇರಿಯಲ್ಲಿ ಶನಿವಾರ ಜಿಲ್ಲೆಯ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರು ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳ ಸಭೆಯಲ್ಲಿ ಮಾತನಾಡಿದ ಅವರು ಅಧಿಕಾರಿಗಳು ಬ್ಯಾಂಕ್ ವಿಚಾರದಲ್ಲಿ ಯಾವತ್ತೂ ರಾಜಕಾರಣ ಮಾಡಬಾರದು ಎಲ್ಲಾ ಪಕ್ಷಗಳ ಜೊತೆಗೆ ಆಡಳಿತ ಮಂಡಳಿಯೊಂದಿಗೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಬ್ಯಾಂಕ್ ಅನ್ನು ಸರಿದಾರಿಗೆ ತೆಗೆದುಕೊಳ್ಳಬೇಕು ಆರ್ಥಿಕವಾಗಿ ವ್ಯವಸ್ಥೆ ಸರಿ ಇದ್ದರೆ ಮಾತ್ರವೇ ಬ್ಯಾಂಕ್ ನಡೆಯಲು ಸಾಧ್ಯ ವಸೂಲಿ ಮಾಡದೇ ಹೋದರೆ ರೈತರಿಗೆ ಸಾಲ ನೀಡಲು ಸಾಧ್ಯವಿಲ್ಲ ಎಂದರು
ಕೆಲವು ಕಡೆ ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ಲಕ್ಷ್ಯದಿಂದ ವಸೂಲಿ ಕಡಿಮೆಯಾಗಿದೆ ಎಲ್ಲೂ ಸಹ ದುರುಪಯೋಗ ಆಗಿಲ್ಲ ಗ್ಯಾಪ್ ಉಳಿದಿದೆ ಬ್ಯಾಂಕಿಂಗ್ ಚಟುವಟಿಕೆ ಚುರುಕುಗೊಳಿಸಬೇಕು. ವಸೂಲಿಗೆ ಮೊದಲ ಆದ್ಯತೆ ನೀಡಬೇಕು ಜನರಿಗೆ ಮತ್ತೆ ಸಾಲ ನೀಡಿ ಲಾಭಾದಾಯಕವಾಗಿ ಬ್ಯಾಂಕ್ ಮಾಡಬೇಕು ಮಾರ್ಚ್ ತಿಂಗಳೊಳಗೆ ರಾತ್ರಿ ಹಗಲು ಎನ್ನದೆ ರೈತರನ್ನು ಮನವೊಲಿಸಿ ವಸೂಲಿ ಮಾಡಬೇಕು. ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಒಳ್ಳೆಯ ಭಾವನೆಯಿಂದ ಕೆಲಸ ಮಾಡಿದರೆ ಪ್ರತಿಫಲ ಖಂಡಿತ ಸಿಗುತ್ತದೆ ಎಂದರು
ರೈತರು ಸಹ ಮಾರ್ಚ್ 31 ರೊಳಗೆ ಸಾಲ ಮರುಪಾವತಿ ಮಾಡುವಂತೆ ಮನವರಿಕೆ ಮಾಡಿ ಮಾರ್ಚ್ ಮುಗಿದ ನಂತರ ಹೆಚ್ಚುವರಿ ಬಡ್ಡಿ ಕಟ್ಟಬೇಕಾಗುತ್ತದೆ ರೈತರು ಸಹ ಸ್ವಯಂಪ್ರೇರಿತವಾಗಿ ತಾವು ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವುದರಿಂದ ಇತರ ರೈತರಿಗೆ ಸಾಲ ನೀಡುವುದರ ಜತೆಗೆ ಬ್ಯಾಂಕಿನ ಅಭಿವೃದ್ಧಿಗೂ ಅವಕಾಶವಾಗಲಿದೆ. ಆದ್ದರಿಂದ ಈಗ ಪಡೆಯುತ್ತಿರುವ ಸಾಲವನ್ನು ನಿಯಮಿತವಾಗಿ ರೈತರು ಕಟ್ಟಲು ಮುಂದಾಗಬೇಕೆಂದು ಎಂದರು.
ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಮುಳಬಾಗಿಲು ತಾಲೂಕು ಅಧ್ಯಕ್ಷ ಗಂಗಿರೆಡ್ಡಿ, ಕೋಲಾರ ಅಧ್ಯಕ್ಷ ಕೆಂದಟ್ಟಿ ಶಿವಕುಮಾರ್, ಬಂಗಾರಪೇಟೆ ಅಧ್ಯಕ್ಷ ಹೆಚ್.ಎಸ್ ರಘುನಾಥ್, ಮಾಲೂರು ಉಪಾಧ್ಯಕ್ಷ ವೆಂಕಟೇಶಪ್ಪ, ಸೇರಿದಂತೆ ಅಧಿಕಾರಿಗಳು ಸಿಬ್ಬಂದಿ ಸಭೆಯಲ್ಲಿ ಇದ್ದರು
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…