Categories: ಕೋಲಾರ

ಪಿಎಲ್ ಡಿ ಬ್ಯಾಂಕ್ ಅಧಿಕಾರಿಗಳು ಆಡಳಿತ ಮಂಡಳಿಗಳ ಜೊತೆಗೆ ರಾಜಕಾರಣಿಗಳನ್ನು ವಿಶ್ವಾಸ ಪಡೆದು ರೈತರಿಂದ ಸಾಲ ವಸೂಲಿಗೆ ಆದ್ಯತೆ ನೀಡಿ- ಯಲವಾರ ಸೊಣ್ಣೇಗೌಡ ಅಧಿಕಾರಿಗಳಿಗೆ ಸೂಚನೆ

ಕೋಲಾರ: ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪಕ್ಷಾತೀತವಾಗಿ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರೈತರಿಂದ ಸಾಲ ವಸೂಲಿ ಮಾಡುವ ಮೂಲಕ ಬ್ಯಾಂಕ್ ಏಳಿಗೆಗಾಗಿ ಶ್ರಮಿಸುವಂತೆ ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ ನಿರ್ದೇಶಕ ಯಲವಾರ ಸೊಣ್ಣೇಗೌಡ ತಿಳಿಸಿದರು.

ನಗರದ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ ಕಛೇರಿಯಲ್ಲಿ ಶನಿವಾರ ಜಿಲ್ಲೆಯ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರು ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳ ಸಭೆಯಲ್ಲಿ ಮಾತನಾಡಿದ ಅವರು ಅಧಿಕಾರಿಗಳು ಬ್ಯಾಂಕ್ ವಿಚಾರದಲ್ಲಿ ಯಾವತ್ತೂ ರಾಜಕಾರಣ ಮಾಡಬಾರದು ಎಲ್ಲಾ ಪಕ್ಷಗಳ ಜೊತೆಗೆ ಆಡಳಿತ ಮಂಡಳಿಯೊಂದಿಗೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಬ್ಯಾಂಕ್ ಅನ್ನು ಸರಿದಾರಿಗೆ ತೆಗೆದುಕೊಳ್ಳಬೇಕು ಆರ್ಥಿಕವಾಗಿ ವ್ಯವಸ್ಥೆ ಸರಿ ಇದ್ದರೆ‌ ಮಾತ್ರವೇ ಬ್ಯಾಂಕ್ ನಡೆಯಲು ಸಾಧ್ಯ ವಸೂಲಿ ಮಾಡದೇ ಹೋದರೆ ರೈತರಿಗೆ ಸಾಲ ನೀಡಲು ಸಾಧ್ಯವಿಲ್ಲ ಎಂದರು

ಕೆಲವು ಕಡೆ ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ಲಕ್ಷ್ಯದಿಂದ ವಸೂಲಿ ಕಡಿಮೆಯಾಗಿದೆ ಎಲ್ಲೂ ಸಹ ದುರುಪಯೋಗ ಆಗಿಲ್ಲ ಗ್ಯಾಪ್ ಉಳಿದಿದೆ ಬ್ಯಾಂಕಿಂಗ್ ಚಟುವಟಿಕೆ ಚುರುಕುಗೊಳಿಸಬೇಕು. ವಸೂಲಿಗೆ ಮೊದಲ ‌ಆದ್ಯತೆ‌ ನೀಡಬೇಕು ಜನರಿಗೆ ‌ಮತ್ತೆ ಸಾಲ‌ ನೀಡಿ ಲಾಭಾದಾಯಕವಾಗಿ ಬ್ಯಾಂಕ್ ಮಾಡಬೇಕು ಮಾರ್ಚ್ ತಿಂಗಳೊಳಗೆ ರಾತ್ರಿ ಹಗಲು ಎನ್ನದೆ ರೈತರನ್ನು ಮನವೊಲಿಸಿ ವಸೂಲಿ‌ ಮಾಡಬೇಕು.‌ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಒಳ್ಳೆಯ ಭಾವನೆಯಿಂದ ಕೆಲಸ ಮಾಡಿದರೆ ಪ್ರತಿಫಲ ಖಂಡಿತ ಸಿಗುತ್ತದೆ ಎಂದರು

ರೈತರು ಸಹ ಮಾರ್ಚ್ 31 ರೊಳಗೆ ಸಾಲ ಮರುಪಾವತಿ ಮಾಡುವಂತೆ ಮನವರಿಕೆ ಮಾಡಿ ಮಾರ್ಚ್ ಮುಗಿದ ನಂತರ ಹೆಚ್ಚುವರಿ ಬಡ್ಡಿ ಕಟ್ಟಬೇಕಾಗುತ್ತದೆ ರೈತರು ಸಹ ಸ್ವಯಂಪ್ರೇರಿತವಾಗಿ ತಾವು ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವುದರಿಂದ ಇತರ ರೈತರಿಗೆ ಸಾಲ ನೀಡುವುದರ ಜತೆಗೆ ಬ್ಯಾಂಕಿನ ಅಭಿವೃದ್ಧಿಗೂ ಅವಕಾಶವಾಗಲಿದೆ. ಆದ್ದರಿಂದ ಈಗ ಪಡೆಯುತ್ತಿರುವ ಸಾಲವನ್ನು ನಿಯಮಿತವಾಗಿ ರೈತರು ಕಟ್ಟಲು ಮುಂದಾಗಬೇಕೆಂದು ಎಂದರು.

ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಮುಳಬಾಗಿಲು ತಾಲೂಕು ಅಧ್ಯಕ್ಷ ಗಂಗಿರೆಡ್ಡಿ, ಕೋಲಾರ ಅಧ್ಯಕ್ಷ ಕೆಂದಟ್ಟಿ ಶಿವಕುಮಾರ್, ಬಂಗಾರಪೇಟೆ ಅಧ್ಯಕ್ಷ ಹೆಚ್.ಎಸ್ ರಘುನಾಥ್, ಮಾಲೂರು ಉಪಾಧ್ಯಕ್ಷ ವೆಂಕಟೇಶಪ್ಪ, ಸೇರಿದಂತೆ ಅಧಿಕಾರಿಗಳು ಸಿಬ್ಬಂದಿ ಸಭೆಯಲ್ಲಿ ಇದ್ದರು

Ramesh Babu

Journalist

Recent Posts

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

5 hours ago

ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು…

ದೃಷ್ಟಿಕೋನ........ ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು, ಕನಸು ಕಾಣುತ್ತಲೇ ಇರುವ ಬಡ, ಮಧ್ಯಮ ವರ್ಗದವರು, ಅಧಿಕ ಪ್ರಸಂಗಿಗಳಂತೆ…

7 hours ago

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗ ತುಳಿದು ದೌರ್ಜನ್ಯ: ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವು: ವ್ಯಕ್ತಿ ಬಂಧನ

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ…

18 hours ago

ಮೇ.5ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್‌ಗಳಲ್ಲಿ ವಿದ್ಯುತ್…

1 day ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

2 days ago