ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಸ್ಥಾನ ಚುನಾವಣೆ: ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್ ನಿಲುವೇನು…?

ದೊಡ್ಡಬಳ್ಳಾಪುರ: ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ಪಿಎಲ್ಡಿ) ನಿಯಮಿತದ ಚುನಾವಣೆಯ ಅಂತಿಮ ಫಲಿತಾಂಶ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕಟವಾಗಿದೆ.

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತಕ್ಕೆ ಫೆಬ್ರವರಿ 16 ರಿಂದ ಮುಂದಿನ 05 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಚುನಾವಣೆಯಲ್ಲಿ ನಡೆಸಲಾಗಿತ್ತು.

ಈ ಚುನಾವಣೆಯಲ್ಲಿ ಸಾಲಗಾರರ ಸಾಮಾನ್ಯ ಸ್ಥಾನದ ರಾಜಘಟ್ಟ ಕ್ಷೇತ್ರ, ಮಹಿಳಾ ಮೀಸಲು ಸ್ಥಾನದ ದೊಡ್ಡಬೆಳವಂಗಲ ಹಾಗೂ ದೊಡ್ಡಬಳ್ಳಾಪುರ ನಗರ ಕ್ಷೇತ್ರ, ಹಿಂದುಳಿದ ವರ್ಗಗಳ ಪ್ರವರ್ಗ ‘ಎ’ ಸ್ಥಾನದ ತೂಬಗೆರೆ ಕ್ಷೇತ್ರ, ಹಿಂದುಳಿದ ವರ್ಗಗಳ ಪ್ರವರ್ಗ ‘ಎ’ ಕೊನಘಟ್ಟ ಕ್ಷೇತ್ರ, ಪರಿಶಿಷ್ಟ ಜಾತಿ ಸ್ಥಾನದ ಎಸ್.ಎಸ್.ಘಾಟಿ ಕ್ಷೇತ್ರ, ಪರಿಶಿಷ್ಟ ಪಂಗಡ ಸ್ಥಾನದ ಹೊಸಹಳ್ಳಿ ಕ್ಷೇತ್ರದಿಂದ ಹಾಗೂ ಸಾಲಗಾರರಲ್ಲದ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಳಿದಂತೆ ಸಾಲಗಾರರ ಸಾಮಾನ್ಯ ಸ್ಥಾನದ ಮೆಳೇಕೋಟೆ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಲಕ್ಷ್ಮೀದೇವಿಪುರದ ಬಸವರಾಜು ಬಿ 17 ಮತಗಳು, ಸಿ.ಡಿ.ಅಗ್ರಹಾರ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಸಿ.ಅಶ್ವಥ್ ನಾರಾಯಣ ಗೌಡ 61 ಮತಗಳು, ಹಣಬೆ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ವಾಣಿಗರಹಳ್ಳಿ ವಿ.ವೇಣುಕುಮಾರ್ 43 ಮತಗಳು, ಮಧುರೆ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಕಸಾಘಟ್ಟ ಉಗ್ರಯ್ಯ 38 ಮತಗಳು, ಕೊಡಿಗೇಹಳ್ಳಿ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ತಳಗವಾರ ಟಿವಿ ಲಕ್ಷ್ಮೀನಾರಾಯಣ್ 17 ಮತಗಳು, ಮತ್ತು ಸಾಸಲು ಕ್ಷೇತ್ರದ ಸ್ಪರ್ಧಿಸಿದ್ದ ಚನ್ನವೀರನಹಳ್ಳಿಯ ಸಿವಿ ಲಕ್ಷ್ಮೀಪತಯ್ಯ 27 ಮತಗಳನ್ನು ಪಡೆದು ವಿಜೇತರಾಗಿದ್ದಾರೆ.

ಚುನಾವಣೆ ಫಲಿತಾಂಶ ಪ್ರಕಟವಾಗುತ್ತಲೇ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಕಣ್ಣು ನೆಟ್ಟಿದ್ದು, ಚರ್ಚೆ ತೀವ್ರಗೊಂಡಿದೆ.

ಈ ಕುರಿತಾಗಿ ಇಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್ ಮಾತನಾಡಿ, ನಮಗೆ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ಪಿಎಲ್ ಡಿ) ನಿಯಮಿತದ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡುತ್ತಾರೋ ಅವರ ಪರ ನಿಲ್ಲುವ ಬಯಕೆ ನನ್ನದು, ಇನ್ನೂ ಈ ಬಗ್ಗೆ ಜೆಡಿಎಸ್ ಜಿಲ್ಲಾಧ್ಯಕ್ಷರು ಯಾವ ತೀರ್ಮಾನ ಕೈಗೊಳ್ಳುತ್ತಾರೋ‌ ಕಾದು ನೋಡಬೇಕಿದೆ ಎಂದರು.

ಎಲ್ಲಾರಿಗೂ ಅಧಿಕಾರದ ಆಸೆ ಇದ್ದೇ ಇರುತ್ತದೆ. ನಮ್ಮ ಜೆಡಿಎಸ್ ಪಕ್ಷವನ್ನು ಹೊಡೆದು ಹೋಗದ ರೀತಿ ಕಾಪಾಡಬೇಕು. ಈಗಾಗಲೇ ನಮ್ಮ ಪಕ್ಷದಿಂದ ಗೆದ್ದಿರುವ ಐದು ಮಂದಿಯನ್ನು ಹಿಡಿದಿಟ್ಟುಕೊಂಡು ಆಮೇಲೆ ಬೇರೆ ಪಕ್ಷದ ಜೊತೆ ಹೊಂದಾಣಿಕೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಜೆಡಿಎಸ್ ಕಾಂಗ್ರೆಸ್ ಜೊತೆ ವಿಲೀನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾವು ಕಾಂಗ್ರೆಸ್ ಜೊತೆ ವಿಲೀನವಾಗುವುದಿಲ್ಲ. ಕೆಲವು ನಾಯಕರು ಅಧಿಕಾರದ ಆಸೆಗೋಸ್ಕರ ಕಾಂಗ್ರೆಸ್ ಜೊತೆ ಹೋಗಬಹುದು. ಅದು ಅವರ ವೈಯಕ್ತಿಕ ವಿಚಾರ ನಾವು ಏನೂ ಮಾಡುವುದಕ್ಕೆ ಆಗೋದಿಲ್ಲ. ಪಿಎಲ್ ಡಿ ಬ್ಯಾಂಕ್ ರೈತರ ಅಭಿವೃದ್ಧಿಗಾಗಿ ಇರುವ ಸಂಸ್ಥೆ. ಈ ಸಂಸ್ಥೆಗೆ ಅನುಕೂಲವಾಗುತ್ತೆ ಅಂದರೆ ಅಧಿಕಾರ ಹಂಚಿಕೆಗೂ ನಾವು ಬದ್ಧರಾಗಿರುತ್ತೇವೆ. ಚುನಾವಣೆ ಬೇಡ ಅಂತಾ ನನಗೆ ಅನಿಸುತ್ತದೆ ಎಂದರು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

4 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

7 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

9 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

20 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

21 hours ago