Categories: ಕೋಲಾರ

ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಜಿ.ಅಮರೇಶ್ ಅವಿರೋಧ ಆಯ್ಕೆ

ಕೋಲಾರ: ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ಡಿ) ಬ್ಯಾಂಕ್ ಅಧ್ಯಕ್ಷರಾಗಿ ಹೊಳಲಿ ಹೊಸೂರು ಜಿ.ಅಮರೇಶ್ ಗುರುವಾರ ಅವಿರೋಧವಾಗಿ ಆಯ್ಕೆಯಾದರು.

ನಗರದ ಬ್ಯಾಂಕ್ ಆವರಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಯಲವಾರ ಸೊಣ್ಣೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗಧಿಯಾಗಿತ್ತು 14 ನಿರ್ದೇಶಕರಿದ್ದು ಅಧ್ಯಕ್ಷ ಸ್ಥಾನಕ್ಕೆ ಟಿ.ಕೆ ಬೈರೇಗೌಡ, ಕೆ.ಸಿ ಮಂಜುನಾಥ್, ಹಾಗೂ ಜಿ ಅಮರೇಶ್ ಮೂವರು ನಾಮಪತ್ರ ಸಲ್ಲಿಸಿದರು ನಂತರ ಹಿರಿಯರು, ಹಾಗೂ ಜೆಡಿಎಸ್‌ ಮತ್ತು ಬಿಜೆಪಿ ಮುಖಂಡರು ಮನವೊಲಿಸಿ ಟಿ.ಕೆ ಬೈರೇಗೌಡ ಮತ್ತು ಕೆ.ಸಿ ಮಂಜುನಾಥ್ ಅವರ ನಾಮಪತ್ರ ವಾಪಸ್ಸು ಪಡೆದಿದ್ದರಿಂದ ಜಿ.ಅಮರೇಶ್ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಕಾರಿಯಾಗಿದ್ದ ಸಹಕಾರ ಸಂಘಗಳ ಜಂಟಿ ಇಲಾಖೆಯ ಗೀತಾ ಅವರು ಘೋಷಿಸಿದರು.

ನಂತರ ಮಾಧ್ಯಮರೊಂದಿಗೆ ನೂತನ ಅಧ್ಯಕ್ಷ ಜಿ ಅಮರೇಶ್ ಮಾತನಾಡಿದ ಸಂಘದ ಎಲ್ಲ ನಿರ್ದೇಶಕರು ಹಾಗೂ ಹಿರಿಯ ಮುಖಂಡರು ನನ್ನ ಮೇಲೆ ವಿಶ್ವಾಸವಿಟ್ಟು ಒಮ್ಮತದಿಂದ ಅವಿರೋಧವಾಗಿ ಆಯ್ಕೆ ಮಾಡಿರುವುದಕ್ಕೆ ಆಭಾರಿಯಾಗಿದ್ದೇನೆ ಮುಖಂಡರ ಮಾರ್ಗದರ್ಶನದಲ್ಲಿ ಹಾಗೂ ಬ್ಯಾಂಕ್ ನ ಎಲ್ಲಾ ನಿರ್ದೇಶಕರ ಸಹಕಾರ ಮತ್ತು ವಿಶ್ವಾಸದೊಂದಿಗೆ ಬ್ಯಾಂಕ್ ಅಭಿವೃದ್ಧಿ ಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಸಹಕಾರಿ ಸಂಸ್ಥೆಯಲ್ಲಿ ರಾಜಕಾರಣ ಮಾಡದೇ ಎಲ್ಲರ ಒಮ್ಮತದಿಂದ ಚುನಾವಣೆ ನಡೆಯದಂತೆ ಅವಿರೋಧವಾಗಿ ಆಯ್ಕೆ ಮಾಡಿದ್ದೇವೆ ಎಲ್ಲರ ವಿಶ್ವಾಸದಿಂದ ಸಹಕಾರಿ ಸಂಸ್ಥೆಯನ್ನು ಮುನ್ನಡೆಸಬೇಕು ಸಂಸ್ಥೆಯಲ್ಲಿ ರಾಜಕೀಯದ ಹಸ್ತಕ್ಷೇಪ ಇಲ್ಲದೇ ಪ್ರಾಮಾಣಿಕತೆಯಿಂದ ರೈತರ ಅಭಿವೃದ್ಧಿಗೆ ಶ್ರಮಿಸಬೇಕು ತಮಗಿರುವ ನಾಲ್ಕು ತಿಂಗಳ ಅವಧಿಯಲ್ಲಿ ಗ್ರಾಮೀಣ ಭಾಗದಲ್ಲಿನ ರೈತರ ಅಭಿವೃದ್ಧಿ ಮಾಡಲು ಅವಕಾಶ ಸಿಕ್ಕಿದೆ ಎಲ್ಲರ ಮಾರ್ಗದರ್ಶನದಲ್ಲಿ ರೈತರ ಏಳಿಗೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ನೂತನ ಅಧ್ಯಕ್ಷರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಬೆಗ್ಲಿ ಸೂರ್ಯಪ್ರಕಾಶ್, ಕೋಚಿಮುಲ್ ನಿರ್ದೇಶಕ ವಡಗೂರು ಡಿ.ವಿ ಹರೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷೆ ಸುನಂದಮ್ಮ, ನಿರ್ದೇಶಕರಾದ ಯಲವಾರ ಸೊಣ್ಣೇಗೌಡ, ವಿಟ್ಟಪ್ಪನಹಳ್ಳಿ ಡೇರಿ ವೆಂಕಟೇಶ್, ವಿ.ಎ ಶಶಿಧರ್, ಹೆಚ್ ಕೃಷ್ಣೇಗೌಡ, ಮಂಜುನಾಥ್, ಬೈರೇಗೌಡ, ರಾಧಾಕೃಷ್ಣ, ಕೆ.ಸಿ ಮಂಜುನಾಥ್, ಗಂಗಪ್ಪ, ಶೋಭಾ, ಗೋವಿಂದಪ್ಪ, ಮುಖಂಡರಾದ ರಾಜು ಶ್ರೀನಿವಾಸಪ್ಪ, ಇರಗಸಂದ್ರ ವಿಶ್ವನಾಥ್, ಕೆಂಬೋಡಿ ನಾರಾಯಣಗೌಡ, ಸುಭಾಷ್, ಸೀಸಂದ್ರ ಬಾಬು, ಬ್ಯಾಂಕ್ ಸಿಇಒ ಶ್ರೀನಿವಾಸ್, ಲೆಕ್ಕಾಧಿಕಾರಿ ಶೋಭಾರಾಣಿ, ಸಿ.ಶ್ಯಾಮಲಾ ಮುಂತಾದವರು ಇದ್ದರು

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

26 minutes ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

1 hour ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

2 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

4 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

7 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

8 hours ago