ಕೋಲಾರ: ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ಡಿ) ಬ್ಯಾಂಕ್ ಅಧ್ಯಕ್ಷರಾಗಿ ಹೊಳಲಿ ಹೊಸೂರು ಜಿ.ಅಮರೇಶ್ ಗುರುವಾರ ಅವಿರೋಧವಾಗಿ ಆಯ್ಕೆಯಾದರು.
ನಗರದ ಬ್ಯಾಂಕ್ ಆವರಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಯಲವಾರ ಸೊಣ್ಣೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗಧಿಯಾಗಿತ್ತು 14 ನಿರ್ದೇಶಕರಿದ್ದು ಅಧ್ಯಕ್ಷ ಸ್ಥಾನಕ್ಕೆ ಟಿ.ಕೆ ಬೈರೇಗೌಡ, ಕೆ.ಸಿ ಮಂಜುನಾಥ್, ಹಾಗೂ ಜಿ ಅಮರೇಶ್ ಮೂವರು ನಾಮಪತ್ರ ಸಲ್ಲಿಸಿದರು ನಂತರ ಹಿರಿಯರು, ಹಾಗೂ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಮನವೊಲಿಸಿ ಟಿ.ಕೆ ಬೈರೇಗೌಡ ಮತ್ತು ಕೆ.ಸಿ ಮಂಜುನಾಥ್ ಅವರ ನಾಮಪತ್ರ ವಾಪಸ್ಸು ಪಡೆದಿದ್ದರಿಂದ ಜಿ.ಅಮರೇಶ್ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಕಾರಿಯಾಗಿದ್ದ ಸಹಕಾರ ಸಂಘಗಳ ಜಂಟಿ ಇಲಾಖೆಯ ಗೀತಾ ಅವರು ಘೋಷಿಸಿದರು.
ನಂತರ ಮಾಧ್ಯಮರೊಂದಿಗೆ ನೂತನ ಅಧ್ಯಕ್ಷ ಜಿ ಅಮರೇಶ್ ಮಾತನಾಡಿದ ಸಂಘದ ಎಲ್ಲ ನಿರ್ದೇಶಕರು ಹಾಗೂ ಹಿರಿಯ ಮುಖಂಡರು ನನ್ನ ಮೇಲೆ ವಿಶ್ವಾಸವಿಟ್ಟು ಒಮ್ಮತದಿಂದ ಅವಿರೋಧವಾಗಿ ಆಯ್ಕೆ ಮಾಡಿರುವುದಕ್ಕೆ ಆಭಾರಿಯಾಗಿದ್ದೇನೆ ಮುಖಂಡರ ಮಾರ್ಗದರ್ಶನದಲ್ಲಿ ಹಾಗೂ ಬ್ಯಾಂಕ್ ನ ಎಲ್ಲಾ ನಿರ್ದೇಶಕರ ಸಹಕಾರ ಮತ್ತು ವಿಶ್ವಾಸದೊಂದಿಗೆ ಬ್ಯಾಂಕ್ ಅಭಿವೃದ್ಧಿ ಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಸಹಕಾರಿ ಸಂಸ್ಥೆಯಲ್ಲಿ ರಾಜಕಾರಣ ಮಾಡದೇ ಎಲ್ಲರ ಒಮ್ಮತದಿಂದ ಚುನಾವಣೆ ನಡೆಯದಂತೆ ಅವಿರೋಧವಾಗಿ ಆಯ್ಕೆ ಮಾಡಿದ್ದೇವೆ ಎಲ್ಲರ ವಿಶ್ವಾಸದಿಂದ ಸಹಕಾರಿ ಸಂಸ್ಥೆಯನ್ನು ಮುನ್ನಡೆಸಬೇಕು ಸಂಸ್ಥೆಯಲ್ಲಿ ರಾಜಕೀಯದ ಹಸ್ತಕ್ಷೇಪ ಇಲ್ಲದೇ ಪ್ರಾಮಾಣಿಕತೆಯಿಂದ ರೈತರ ಅಭಿವೃದ್ಧಿಗೆ ಶ್ರಮಿಸಬೇಕು ತಮಗಿರುವ ನಾಲ್ಕು ತಿಂಗಳ ಅವಧಿಯಲ್ಲಿ ಗ್ರಾಮೀಣ ಭಾಗದಲ್ಲಿನ ರೈತರ ಅಭಿವೃದ್ಧಿ ಮಾಡಲು ಅವಕಾಶ ಸಿಕ್ಕಿದೆ ಎಲ್ಲರ ಮಾರ್ಗದರ್ಶನದಲ್ಲಿ ರೈತರ ಏಳಿಗೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ನೂತನ ಅಧ್ಯಕ್ಷರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಬೆಗ್ಲಿ ಸೂರ್ಯಪ್ರಕಾಶ್, ಕೋಚಿಮುಲ್ ನಿರ್ದೇಶಕ ವಡಗೂರು ಡಿ.ವಿ ಹರೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷೆ ಸುನಂದಮ್ಮ, ನಿರ್ದೇಶಕರಾದ ಯಲವಾರ ಸೊಣ್ಣೇಗೌಡ, ವಿಟ್ಟಪ್ಪನಹಳ್ಳಿ ಡೇರಿ ವೆಂಕಟೇಶ್, ವಿ.ಎ ಶಶಿಧರ್, ಹೆಚ್ ಕೃಷ್ಣೇಗೌಡ, ಮಂಜುನಾಥ್, ಬೈರೇಗೌಡ, ರಾಧಾಕೃಷ್ಣ, ಕೆ.ಸಿ ಮಂಜುನಾಥ್, ಗಂಗಪ್ಪ, ಶೋಭಾ, ಗೋವಿಂದಪ್ಪ, ಮುಖಂಡರಾದ ರಾಜು ಶ್ರೀನಿವಾಸಪ್ಪ, ಇರಗಸಂದ್ರ ವಿಶ್ವನಾಥ್, ಕೆಂಬೋಡಿ ನಾರಾಯಣಗೌಡ, ಸುಭಾಷ್, ಸೀಸಂದ್ರ ಬಾಬು, ಬ್ಯಾಂಕ್ ಸಿಇಒ ಶ್ರೀನಿವಾಸ್, ಲೆಕ್ಕಾಧಿಕಾರಿ ಶೋಭಾರಾಣಿ, ಸಿ.ಶ್ಯಾಮಲಾ ಮುಂತಾದವರು ಇದ್ದರು
ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್ಗಳು ಹಾಗೂ ಇತರೆ…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…