Categories: ಕೋಲಾರ

ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಜಿ.ಅಮರೇಶ್ ಅವಿರೋಧ ಆಯ್ಕೆ

ಕೋಲಾರ: ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ಡಿ) ಬ್ಯಾಂಕ್ ಅಧ್ಯಕ್ಷರಾಗಿ ಹೊಳಲಿ ಹೊಸೂರು ಜಿ.ಅಮರೇಶ್ ಗುರುವಾರ ಅವಿರೋಧವಾಗಿ ಆಯ್ಕೆಯಾದರು.

ನಗರದ ಬ್ಯಾಂಕ್ ಆವರಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಯಲವಾರ ಸೊಣ್ಣೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗಧಿಯಾಗಿತ್ತು 14 ನಿರ್ದೇಶಕರಿದ್ದು ಅಧ್ಯಕ್ಷ ಸ್ಥಾನಕ್ಕೆ ಟಿ.ಕೆ ಬೈರೇಗೌಡ, ಕೆ.ಸಿ ಮಂಜುನಾಥ್, ಹಾಗೂ ಜಿ ಅಮರೇಶ್ ಮೂವರು ನಾಮಪತ್ರ ಸಲ್ಲಿಸಿದರು ನಂತರ ಹಿರಿಯರು, ಹಾಗೂ ಜೆಡಿಎಸ್‌ ಮತ್ತು ಬಿಜೆಪಿ ಮುಖಂಡರು ಮನವೊಲಿಸಿ ಟಿ.ಕೆ ಬೈರೇಗೌಡ ಮತ್ತು ಕೆ.ಸಿ ಮಂಜುನಾಥ್ ಅವರ ನಾಮಪತ್ರ ವಾಪಸ್ಸು ಪಡೆದಿದ್ದರಿಂದ ಜಿ.ಅಮರೇಶ್ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಕಾರಿಯಾಗಿದ್ದ ಸಹಕಾರ ಸಂಘಗಳ ಜಂಟಿ ಇಲಾಖೆಯ ಗೀತಾ ಅವರು ಘೋಷಿಸಿದರು.

ನಂತರ ಮಾಧ್ಯಮರೊಂದಿಗೆ ನೂತನ ಅಧ್ಯಕ್ಷ ಜಿ ಅಮರೇಶ್ ಮಾತನಾಡಿದ ಸಂಘದ ಎಲ್ಲ ನಿರ್ದೇಶಕರು ಹಾಗೂ ಹಿರಿಯ ಮುಖಂಡರು ನನ್ನ ಮೇಲೆ ವಿಶ್ವಾಸವಿಟ್ಟು ಒಮ್ಮತದಿಂದ ಅವಿರೋಧವಾಗಿ ಆಯ್ಕೆ ಮಾಡಿರುವುದಕ್ಕೆ ಆಭಾರಿಯಾಗಿದ್ದೇನೆ ಮುಖಂಡರ ಮಾರ್ಗದರ್ಶನದಲ್ಲಿ ಹಾಗೂ ಬ್ಯಾಂಕ್ ನ ಎಲ್ಲಾ ನಿರ್ದೇಶಕರ ಸಹಕಾರ ಮತ್ತು ವಿಶ್ವಾಸದೊಂದಿಗೆ ಬ್ಯಾಂಕ್ ಅಭಿವೃದ್ಧಿ ಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಸಹಕಾರಿ ಸಂಸ್ಥೆಯಲ್ಲಿ ರಾಜಕಾರಣ ಮಾಡದೇ ಎಲ್ಲರ ಒಮ್ಮತದಿಂದ ಚುನಾವಣೆ ನಡೆಯದಂತೆ ಅವಿರೋಧವಾಗಿ ಆಯ್ಕೆ ಮಾಡಿದ್ದೇವೆ ಎಲ್ಲರ ವಿಶ್ವಾಸದಿಂದ ಸಹಕಾರಿ ಸಂಸ್ಥೆಯನ್ನು ಮುನ್ನಡೆಸಬೇಕು ಸಂಸ್ಥೆಯಲ್ಲಿ ರಾಜಕೀಯದ ಹಸ್ತಕ್ಷೇಪ ಇಲ್ಲದೇ ಪ್ರಾಮಾಣಿಕತೆಯಿಂದ ರೈತರ ಅಭಿವೃದ್ಧಿಗೆ ಶ್ರಮಿಸಬೇಕು ತಮಗಿರುವ ನಾಲ್ಕು ತಿಂಗಳ ಅವಧಿಯಲ್ಲಿ ಗ್ರಾಮೀಣ ಭಾಗದಲ್ಲಿನ ರೈತರ ಅಭಿವೃದ್ಧಿ ಮಾಡಲು ಅವಕಾಶ ಸಿಕ್ಕಿದೆ ಎಲ್ಲರ ಮಾರ್ಗದರ್ಶನದಲ್ಲಿ ರೈತರ ಏಳಿಗೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ನೂತನ ಅಧ್ಯಕ್ಷರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಬೆಗ್ಲಿ ಸೂರ್ಯಪ್ರಕಾಶ್, ಕೋಚಿಮುಲ್ ನಿರ್ದೇಶಕ ವಡಗೂರು ಡಿ.ವಿ ಹರೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷೆ ಸುನಂದಮ್ಮ, ನಿರ್ದೇಶಕರಾದ ಯಲವಾರ ಸೊಣ್ಣೇಗೌಡ, ವಿಟ್ಟಪ್ಪನಹಳ್ಳಿ ಡೇರಿ ವೆಂಕಟೇಶ್, ವಿ.ಎ ಶಶಿಧರ್, ಹೆಚ್ ಕೃಷ್ಣೇಗೌಡ, ಮಂಜುನಾಥ್, ಬೈರೇಗೌಡ, ರಾಧಾಕೃಷ್ಣ, ಕೆ.ಸಿ ಮಂಜುನಾಥ್, ಗಂಗಪ್ಪ, ಶೋಭಾ, ಗೋವಿಂದಪ್ಪ, ಮುಖಂಡರಾದ ರಾಜು ಶ್ರೀನಿವಾಸಪ್ಪ, ಇರಗಸಂದ್ರ ವಿಶ್ವನಾಥ್, ಕೆಂಬೋಡಿ ನಾರಾಯಣಗೌಡ, ಸುಭಾಷ್, ಸೀಸಂದ್ರ ಬಾಬು, ಬ್ಯಾಂಕ್ ಸಿಇಒ ಶ್ರೀನಿವಾಸ್, ಲೆಕ್ಕಾಧಿಕಾರಿ ಶೋಭಾರಾಣಿ, ಸಿ.ಶ್ಯಾಮಲಾ ಮುಂತಾದವರು ಇದ್ದರು

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

15 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

21 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago