ಪಿಎಸ್ಐ ಆಗಿ ಮುಂಬಡ್ತಿ ಪಡೆದ ಸಿ.ಕೃಷ್ಣಪ್ಪನವರಿಗೆ ವಾಲ್ಮೀಕಿ ಸಮುದಾಯ ಮುಖಂಡರಿಂದ ಅಭಿನಂದನೆ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎ ಎಸ್ಐ ಆಗಿದ್ದ ಸಿ.ಕೃಷ್ಣಪ್ಪನವರು ಸೇವಾನುಭವ ಆಧಾರದ ಮೇಲೆ ದೊಡ್ಡಬಳ್ಳಾಪುರ ನಗರ ಠಾಣೆಗೆ ಪಿಎಸ್ಐ ಆಗಿ ಮುಂಬಡ್ತಿ ಪಡೆದಿದ್ದಾರೆ. ಪಿಎಸ್ಐ ಆಗಿ ಮುಂಬಡ್ತಿ ಪಡೆದ ಹಿನ್ನೆಲೆ ತಾಲೂಕಿನ ನಾಯಕ ಸಮುದಾಯದ ಮುಖಂಡರು ಪಿಎಸ್ಐ ಸಿ.ಕೃಷ್ಣಪ್ಪನವರಿಗೆ ಪುಷ್ಪಗುಚ್ಛ ನೀಡುವುದರ ಮೂಲಕ ಅಭಿನಂದನೆ ಸಲ್ಲಿಸಿ, ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಶುಭಕೋರಿದರು.

ನಗರದಲ್ಲಿ ಶಾಂತಿ‌ಸುವ್ಯವಸ್ಥೆ, ಟ್ರಾಫಿಕ್ ನಿಯಂತ್ರಣ, ಅಪರಾಧ ಚಟುವಟಿಕೆಗಳಿಗೆ ಕಡಿವಾಣ, ಕಳ್ಳತನ ಪ್ರಕರಣಗಳನ್ನ ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಂಡು ನಗರದ ಜನತೆ ನೆಮ್ಮದಿ ಜೀವನ ನಡೆಸಲು ಅನುವುಮಾಡಿಕೊಡಬೇಕು ಎಂದು ಮುಖಂಡರು ಮನವಿ ಮಾಡಿದರು.

ಮುಖಂಡರ ಮನವಿ ಹಾಗೂ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪಿಎಸ್ಐ ಸಿ.ಕೃಷ್ಣಪ್ಪ, ಪೊಲೀಸ್ ಇಲಾಖೆ ಸದಾ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತದೆ. ಸಾರ್ವಜನಿಕರ ಸಹಕಾರ ಇಲಾಖೆಗೆ ಅತ್ಯಗತ್ಯ. ಅಪರಾಧ ಪ್ರಕರಣಗಳನ್ನು ಕಡಿಮೆ‌ ಮಾಡಲು ಅವಿರತವಾಗಿ ನಾವು ದುಡಿಯುತ್ತೇವೆ. ನಗರದಲ್ಲಿ ಶಾಂತಿ ಸುವ್ಯವಸಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ವೇಳೆ ಸಿ ಪಿ ಐ ಅಮರೇಶ್ ಗೌಡ, ವಾಲ್ಮೀಕಿ ಸಂಘದ ತಾಲೂಕು‌ ಅಧ್ಯಕ್ಷ ಪ್ರೇಮ್ ಕುಮಾರ್, ಉಪಾಧ್ಯಕ್ಷ ಕುಮಾರ್, ಹಿರಿಯ ಹೋರಾಟಗಾರರಾದ ಸಂಜೀವ್ ನಾಯಾಕ, ಸಮುದಾಯದ ಹಿರಿಯ ಮುಖಂಡ ಬಸವರಾಜ್, ಮಂಜುನಾಥ್, ಕೃಷ್ಣ, ತಿಮ್ಮಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

12 minutes ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

2 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

2 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

7 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

9 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

22 hours ago