ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎ ಎಸ್ಐ ಆಗಿದ್ದ ಸಿ.ಕೃಷ್ಣಪ್ಪನವರು ಸೇವಾನುಭವ ಆಧಾರದ ಮೇಲೆ ದೊಡ್ಡಬಳ್ಳಾಪುರ ನಗರ ಠಾಣೆಗೆ ಪಿಎಸ್ಐ ಆಗಿ ಮುಂಬಡ್ತಿ ಪಡೆದಿದ್ದಾರೆ. ಪಿಎಸ್ಐ ಆಗಿ ಮುಂಬಡ್ತಿ ಪಡೆದ ಹಿನ್ನೆಲೆ ತಾಲೂಕಿನ ನಾಯಕ ಸಮುದಾಯದ ಮುಖಂಡರು ಪಿಎಸ್ಐ ಸಿ.ಕೃಷ್ಣಪ್ಪನವರಿಗೆ ಪುಷ್ಪಗುಚ್ಛ ನೀಡುವುದರ ಮೂಲಕ ಅಭಿನಂದನೆ ಸಲ್ಲಿಸಿ, ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಶುಭಕೋರಿದರು.
ಮುಖಂಡರ ಮನವಿ ಹಾಗೂ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪಿಎಸ್ಐ ಸಿ.ಕೃಷ್ಣಪ್ಪ, ಪೊಲೀಸ್ ಇಲಾಖೆ ಸದಾ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತದೆ. ಸಾರ್ವಜನಿಕರ ಸಹಕಾರ ಇಲಾಖೆಗೆ ಅತ್ಯಗತ್ಯ. ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡಲು ಅವಿರತವಾಗಿ ನಾವು ದುಡಿಯುತ್ತೇವೆ. ನಗರದಲ್ಲಿ ಶಾಂತಿ ಸುವ್ಯವಸಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…