ಪಿಎಸ್‌ಐ ಗಾದಿಲಿಂಗಪ್ಪ ಹಾಗೂ ಬಿಜೆಪಿ ಮುಖಂಡ ಹನುಮಂತೇಗೌಡ ನಡುವೆ ಗಲಾಟೆ ವಿಚಾರ: ಪಿಎಸ್ಐ ಗಾದಿಲಿಂಗಪ್ಪರನ್ನ ಈ ಕೂಡಲೇ ಅಮಾನತು ಮಾಡಬೇಕು- ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹ

ಚಿತ್ರದುರ್ಗ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಗಾದಿಲಿಂಗಪ್ಪ ಹಾಗೂ ಬಿಜೆಪಿ ಮಧುಗಿರಿ ಘಟಕದ ಹನುಮಂತೇಗೌಡ ನಡುವೆ ಹೊಡೆದಾಟ ನಡೆದಿದೆ ಎಂದು ಆರೋಪಿಸಲಾಗಿದೆ.

ಚಿತ್ರದುರ್ಗದಲ್ಲಿ ತುರುವನೂರು ರಸ್ತೆಯಲ್ಲಿ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ, ಆರೋಪಿ ಹನುಮಂತೇಗೌಡ ತನ್ನ ಸಂಗಡಿಗರೊಂದಿಗೆ ಗುಂಪು ಕಟ್ಟಿಕೊಂಡು ರಸ್ತೆಯಲ್ಲಿ ನಿಂತಿದ್ದರು. ಅದನ್ನು ಪ್ರಶ್ನಿಸಿದ್ದಕ್ಕಾಗಿ ಹಲ್ಲೆ ನಡೆಸಿದ್ದಾರೆ ಎಂದು ಪಿಎಸ್‌ಐ ಗಾದಿಲಿಂಗಪ್ಪ ಆರೋಪಿಸಲಾಗಿದೆ.

ಆರೋಪಿ ಹನುಮಂತೇಗೌಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದಾಗ್ಯೂ ಪೊಲೀಸರೇ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹನುಮಂತೇಗೌಡ ಕೂಡ ಆರೋಪ ಮಾಡಿದ್ದಾರೆ. ತಮಗೂ ಎದೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನು ತೀವ್ರವಾಗಿ ಖಂಡಿಸಿದ  ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ ಕೆಲವು ಕೆಳಹಂತದ ಪೊಲೀಸ್ ಅಧಿಕಾರಿಗಳು ಸಾಮಾನ್ಯರು ಹಾಗೂ ಜವಾಬ್ದಾರಿಯುತ ನಾಗರಿಕರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸಿ ದೈಹಿಕ ಹಲ್ಲೆಗೂ ಮುಂದಾಗುತ್ತಿದ್ದಾರೆ ಎಂದು ದೂರಿದ್ದಾರೆ.

ಚಿತ್ರದುರ್ಗದಲ್ಲಿ ನಮ್ಮ ಪಕ್ಷದ ಮಧುಗಿರಿ (ಸಂಘಟನಾತ್ಮಕ ಜಿಲ್ಲೆ)  ಜಿಲ್ಲಾಧ್ಯಕ್ಷರಾದ ಹನುಮಂತೇಗೌಡ ಅವರ ಮೇಲೆ ಪಿಎಸ್​ಐ ಗಾದಿಲಿಂಗಪ್ಪ ಹಲ್ಲೆ ನಡೆಸಿ ಗೂಂಡಾಗಿರಿ ಪ್ರದರ್ಶಿಸಿದ್ದು ಇದನ್ನು ರಾಜ್ಯ ಬಿಜೆಪಿ ಅತ್ಯುಗ್ರವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ.

ನಾಗರಿಕ ಸಮಾಜದಲ್ಲಿ ಶಾಂತಿ ಸಂರಕ್ಷಿಸಲಾಗದ ಅಧಿಕಾರಿಗಳು ಮಧ್ಯರಾತ್ರಿಯಲ್ಲಿ ತಮ್ಮ ಪೊಲೀಸ್ ರೌದ್ರಾವತಾರ ಪ್ರದರ್ಶಿಸಲು ಹೊರಟಿದ್ದಾರೆ. ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸುವ ಮುನ್ನ ಅವರ ಸಾಮಾಜಿಕ ಸ್ಥಾನಮಾನವನ್ನೂ ಲೆಕ್ಕಿಸದೆ ಗೂಂಡಾಗಿರಿ ಪ್ರದರ್ಶಿಸುವುದು ಪೋಲಿಸ್ ಇಲಾಖೆಯ ದಕ್ಷತೆಯ ಘನತೆಯನ್ನು ಕಳೆದಂತೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪ್ರಭಾವಿಗಳಿಂದ ಆಯಾ ಕಟ್ಟಿನ ಸ್ಥಾನದಲ್ಲಿ ಕುಳಿತುಕೊಂಡಿರುವ ಕೆಲವು ಪೊಲೀಸ್ ಅಧಿಕಾರಿಗಳು ತಮಗೆ ಯಾರೂ ಏನೂ ಮಾಡಲಾಗದು ಎಂಬ ಮನಸ್ಥಿತಿಯನ್ನು ಮೈಗೂಡಿಸಿಕೊಂಡಿದ್ದು ಎಲ್ಲೆಂದರಲ್ಲಿ ತಮ್ಮ ದರ್ಪ ಪ್ರದರ್ಶಿಸುತ್ತಿದ್ದಾರೆ. ಚಿತ್ರದುರ್ಗದ ಘಟನೆಯ ಹಿಂದೆ ರಾಜಕಾರಣದ ಪ್ರಚೋದನೆ ಇರುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು, ಅಧಿಕಾರಸ್ತ ರಾಜಕಾರಣಿಗಳ ಕೈಗೊಂಬೆಯಂತೆ ವರ್ತಿಸುತ್ತಿರುವ ಪೊಲೀಸರು ಇಲಾಖೆಯ ಗೌರವ ಕಳೆಯುತ್ತಿದ್ದಾರೆ ಎಂದು ಗುಡುಗಿದ್ದಾರೆ.

ಚಿತ್ರದುರ್ಗದ ಪಿಎಸ್ಐ ಗಾದಿಲಿಂಗಪ್ಪ ಅವರನ್ನು ಈ ಕೂಡಲೇ ಪೊಲೀಸ್ ಮಹಾನಿರ್ದೇಶಕರು ಅಮಾನತ್ತಿನಲ್ಲಿಡದಿದ್ದರೆ ಬಿಜೆಪಿಯು ನಾಗರಿಕರೊಡಗೂಡಿ ಹೋರಾಟ ನಡೆಸುವುದು ಅನಿವಾರ್ಯವಾದೀತು ಎಂದು ಎಚ್ಚರಿಸುತ್ತೇನೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

16 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago