ಪಿಎಸ್ಐ ಜಗದೀಶ್ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಜಿಲ್ಲಾ ನ್ಯಾಯಾಲಯ

ದೊಡ್ಡಬಳ್ಳಾಪುರ: ನಗರ ಪೊಲೀಸ್ ಠಾಣೆಯಲ್ಲಿ  ಸಬ್ ಇನ್ಸ್ಪೆಕ್ಟರ್ ಆಗಿದ್ದ ಜಗದೀಶ್ ಹತ್ಯೆ ಆರೋಪಿಗಳಿಗೆ ಶಿಕ್ಷೆ ಹಾಗೂ ದಂಡವನ್ನು ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಮತ್ತು ಸತ್ರಾ ನ್ಯಾಯಾಲಯದ ನ್ಯಾಯಾಧೀಶರಾದ ರಘುನಾಥ್ ಅವರು ತೀರ್ಪು ನೀಡಿದ್ದಾರೆ.

ಐದು ಜನ ಆರೋಪಿಗಳ ಪೈಕಿ ಮೊದಲ ಆರೋಪಿ ಮಧು ಎಂಬಾತನಿಗೆ 7 ವರ್ಷ ಸಜೆ ಹಾಗೂ ₹1 ಲಕ್ಷ ದಂಡ, ಎರಡನೇ ಆರೋಪಿ ಹರೀಶ್ ಬಾಬು ಎಂಬಾತನಿಗೆ ಜೀವಾವಧಿ ಸಜೆ ಹಾಗೂ ₹3 ಲಕ್ಷ ದಂಡ ವಿಧಿಸಲಾಗಿದೆ. ಉಳಿದ ಮೂರು ಜನ ಆರೋಪಿಗಳಾದ ರಘು, ತಿಮ್ಮಕ್ಕ, ಯಲಾಲ ಹನುಮಂತರಾವ್ ಖುಲಾಸೆಗೊಂಡಿದ್ದಾರೆ.

ಹತ್ಯೆಗೀಡಾದ ಸಬ್ಇನ್ಸ್ಪಕ್ಟರ್ ಜಗದೀಶ್ ಅವರು ನಗರ ಠಾಣೆಯ ಸಿಬ್ಬಂದಿ ವೆಂಕಟೇಶ್‌ ಕುಮಾರ್, ಚಂದ್ರು, ಶಶಧರ್ ಅವರೊಂದಿಗೆ 2015 ಅಕ್ಟೋಬರ್ 16 ರಂದು ಖಚಿತ ಮಾಹಿತಿ ಮೇರೆಗೆ ಬೈಕ್ ಸೇರಿದಂತೆ ಇತರೆ ಕಳ್ಳತನ ಪ್ರಕರಣಗಳ ಆರೋಪಿಗಳನ್ನು ಬಂಧಿಸಲು ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟೇಶ್ವರ ಕಲ್ಯಾಣ ಪಂಟಪದ ಬಳಿ ಇರುವ ಟರ್ಬೋ ಹೊಂಡಾ ಶೋರೂಮ್ ಹತ್ತಿರ ಹೋಗಿದ್ದರು.

ಆರೋಪಿಗಳಾದ ಮಧು ಮತ್ತು ಕೃಷ್ಣಪ್ಪ ಅವರನ್ನು ಹಿಡಿದುಕೊಳ್ಳಲು ಜಗದೀಶ್ ಅವರು ಹಿಂಬಾಲಿಸಿದಾಗ ಇದ್ದಕ್ಕಿದ್ದಂತೆ ಇಬ್ಬರು ಹಿಂತಿರುಗಿ ಮಧು ಎಂಬಾತ ರಸ್ತೆ ಪಕ್ಕದ ಚರಂಡಿಗೆ ಪಿಎಸ್ಐ ಅವರನ್ನು ಕೆಡವಿಕೊಂಡು ಪಿಸ್ತೂಲ್ ಕಸಿದುಕೊಂಡು ಅವರ ತಂದೆ ಕೃಷ್ಣಪ್ಪನ ಬಳಿ ಇದ್ದ ಚಾಕುವಿನಿಂದ ಜಗದೀಶ್ ಅವರ ಎಡಭಾಗದ ಪಕ್ಕೆಗೆ ಐದಾರು ಬಾರಿ ಇರಿದ್ದಿದ್ದ ಇದರಿಂದ ಮೃತಪಟ್ಟಿದ್ದರು.

ಪಿಎಸ್ಐ ಅವರನ್ನು ಹಿಂಬಾಲಿಸಿಕೊಂಡು ಹೋಗಿದ್ದ ಕಾನ್ಸ್ಟೇಬಲ್ ವೆಂಕಟೇಶ್ ಕುಮಾರ್ ಎಂಬುವವರಿಗು ಸಹ ಚಾಕುವಿನಿಂದ ಇರಿದು ಪಿಎಸ್ಐ ಅವರ ಸರ್ವಿಸ್ ಪಿಸ್ತೂಲ್ ನೊಂದಿಗೆ  ಪರಾರಿಯಾಗಿದ್ದರು.

ಕೊಲೆಯ ನಂತರ ರೈಲಿನಲ್ಲಿ ಪರಾರಿಯಾಗಿದ್ದ ಆರೋಪಿಗಳನ್ನು ಆಂಧ್ರಪ್ರದೇಶದಲ್ಲಿ ಅಂದಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಬಾನೂತ್ ಅವರು ಬಂಧಿಸಿದ್ದರು.

ಈ ಕುರಿತಂತೆ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ನೆಲಮಂಗಲ ಉಪವಿಭಾಗದ ಡಿವೈಎಸ್ಪಿ ರಾಜೇಂದ್ರಕುಮಾರ್ ಅವರು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿದ್ದರು. ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಮೀನಾಕುಮಾರಿ,ಎಸ್.ವಿ.ಭಟ್ ವಾದಿಸಿದ್ದರು.

ಹತ್ಯೆಗೀಡಾಗಿರುವ ಪಿಎಸ್ಐ ಜಗದೀಶ್ ಅವರ ಪತ್ನಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲಾಗಿದೆ, ಇವರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.

ಶಿಕ್ಷೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು:

ಆರೋಪಿಗಳನ್ನು ಬಂಧಿಸುವ ಸಮಯದಲ್ಲಿ ಸಾರ್ವಜನಿಕವಾಗಿ ಹತ್ಯೆ ಮಾಡಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಲಿದೆ ಎನ್ನುವ ನಿರೀಕ್ಷೆ ಇತ್ತು. ಆದರೆ ಈಗ ನ್ಯಾಯಾಲಯ ನೀಡಿರುವ ತೀರ್ಪು ಅಸಮಧಾನ ತರಿಸಿದೆ. ಈ ತೀರ್ಪಿನನ್ನು ಪ್ರಶ್ನಿಸಿ, ದಿ. ಪಿಎಸ್ಐ ಜಗದೀಶ್ ಅವರ ಕುಟುಂಬದ ಜೊತೆ ಚರ್ಚಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುವುದು ಹುತಾತ್ಮ ಪಿಎಸ್ಐ ಫೌಂಡೇಶನ್ ಟ್ರಸ್ಟ್ ನ ಅಧ್ಯಕ್ಷ ರಾಜಘಟ್ಟರವಿ ತಿಳಿಸಿದ್ದಾರೆ.

Ramesh Babu

Journalist

Recent Posts

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

1 hour ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

6 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

7 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

8 hours ago

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

18 hours ago

Accident Update: ನೆಲಮಂಗಲದ ಜಿಂದಾಲ್‌ ಸಮೀಪ ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು ಕೇಸ್: ಮೃತರಲ್ಲಿ ಮೂವರ ಕಣ್ಣುಗಳ ದಾನ

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…

19 hours ago