ಪಿಎಸ್ಐ ಜಗದೀಶ್ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಜಿಲ್ಲಾ ನ್ಯಾಯಾಲಯ

ದೊಡ್ಡಬಳ್ಳಾಪುರ: ನಗರ ಪೊಲೀಸ್ ಠಾಣೆಯಲ್ಲಿ  ಸಬ್ ಇನ್ಸ್ಪೆಕ್ಟರ್ ಆಗಿದ್ದ ಜಗದೀಶ್ ಹತ್ಯೆ ಆರೋಪಿಗಳಿಗೆ ಶಿಕ್ಷೆ ಹಾಗೂ ದಂಡವನ್ನು ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಮತ್ತು ಸತ್ರಾ ನ್ಯಾಯಾಲಯದ ನ್ಯಾಯಾಧೀಶರಾದ ರಘುನಾಥ್ ಅವರು ತೀರ್ಪು ನೀಡಿದ್ದಾರೆ.

ಐದು ಜನ ಆರೋಪಿಗಳ ಪೈಕಿ ಮೊದಲ ಆರೋಪಿ ಮಧು ಎಂಬಾತನಿಗೆ 7 ವರ್ಷ ಸಜೆ ಹಾಗೂ ₹1 ಲಕ್ಷ ದಂಡ, ಎರಡನೇ ಆರೋಪಿ ಹರೀಶ್ ಬಾಬು ಎಂಬಾತನಿಗೆ ಜೀವಾವಧಿ ಸಜೆ ಹಾಗೂ ₹3 ಲಕ್ಷ ದಂಡ ವಿಧಿಸಲಾಗಿದೆ. ಉಳಿದ ಮೂರು ಜನ ಆರೋಪಿಗಳಾದ ರಘು, ತಿಮ್ಮಕ್ಕ, ಯಲಾಲ ಹನುಮಂತರಾವ್ ಖುಲಾಸೆಗೊಂಡಿದ್ದಾರೆ.

ಹತ್ಯೆಗೀಡಾದ ಸಬ್ಇನ್ಸ್ಪಕ್ಟರ್ ಜಗದೀಶ್ ಅವರು ನಗರ ಠಾಣೆಯ ಸಿಬ್ಬಂದಿ ವೆಂಕಟೇಶ್‌ ಕುಮಾರ್, ಚಂದ್ರು, ಶಶಧರ್ ಅವರೊಂದಿಗೆ 2015 ಅಕ್ಟೋಬರ್ 16 ರಂದು ಖಚಿತ ಮಾಹಿತಿ ಮೇರೆಗೆ ಬೈಕ್ ಸೇರಿದಂತೆ ಇತರೆ ಕಳ್ಳತನ ಪ್ರಕರಣಗಳ ಆರೋಪಿಗಳನ್ನು ಬಂಧಿಸಲು ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟೇಶ್ವರ ಕಲ್ಯಾಣ ಪಂಟಪದ ಬಳಿ ಇರುವ ಟರ್ಬೋ ಹೊಂಡಾ ಶೋರೂಮ್ ಹತ್ತಿರ ಹೋಗಿದ್ದರು.

ಆರೋಪಿಗಳಾದ ಮಧು ಮತ್ತು ಕೃಷ್ಣಪ್ಪ ಅವರನ್ನು ಹಿಡಿದುಕೊಳ್ಳಲು ಜಗದೀಶ್ ಅವರು ಹಿಂಬಾಲಿಸಿದಾಗ ಇದ್ದಕ್ಕಿದ್ದಂತೆ ಇಬ್ಬರು ಹಿಂತಿರುಗಿ ಮಧು ಎಂಬಾತ ರಸ್ತೆ ಪಕ್ಕದ ಚರಂಡಿಗೆ ಪಿಎಸ್ಐ ಅವರನ್ನು ಕೆಡವಿಕೊಂಡು ಪಿಸ್ತೂಲ್ ಕಸಿದುಕೊಂಡು ಅವರ ತಂದೆ ಕೃಷ್ಣಪ್ಪನ ಬಳಿ ಇದ್ದ ಚಾಕುವಿನಿಂದ ಜಗದೀಶ್ ಅವರ ಎಡಭಾಗದ ಪಕ್ಕೆಗೆ ಐದಾರು ಬಾರಿ ಇರಿದ್ದಿದ್ದ ಇದರಿಂದ ಮೃತಪಟ್ಟಿದ್ದರು.

ಪಿಎಸ್ಐ ಅವರನ್ನು ಹಿಂಬಾಲಿಸಿಕೊಂಡು ಹೋಗಿದ್ದ ಕಾನ್ಸ್ಟೇಬಲ್ ವೆಂಕಟೇಶ್ ಕುಮಾರ್ ಎಂಬುವವರಿಗು ಸಹ ಚಾಕುವಿನಿಂದ ಇರಿದು ಪಿಎಸ್ಐ ಅವರ ಸರ್ವಿಸ್ ಪಿಸ್ತೂಲ್ ನೊಂದಿಗೆ  ಪರಾರಿಯಾಗಿದ್ದರು.

ಕೊಲೆಯ ನಂತರ ರೈಲಿನಲ್ಲಿ ಪರಾರಿಯಾಗಿದ್ದ ಆರೋಪಿಗಳನ್ನು ಆಂಧ್ರಪ್ರದೇಶದಲ್ಲಿ ಅಂದಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಬಾನೂತ್ ಅವರು ಬಂಧಿಸಿದ್ದರು.

ಈ ಕುರಿತಂತೆ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ನೆಲಮಂಗಲ ಉಪವಿಭಾಗದ ಡಿವೈಎಸ್ಪಿ ರಾಜೇಂದ್ರಕುಮಾರ್ ಅವರು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿದ್ದರು. ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಮೀನಾಕುಮಾರಿ,ಎಸ್.ವಿ.ಭಟ್ ವಾದಿಸಿದ್ದರು.

ಹತ್ಯೆಗೀಡಾಗಿರುವ ಪಿಎಸ್ಐ ಜಗದೀಶ್ ಅವರ ಪತ್ನಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲಾಗಿದೆ, ಇವರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.

ಶಿಕ್ಷೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು:

ಆರೋಪಿಗಳನ್ನು ಬಂಧಿಸುವ ಸಮಯದಲ್ಲಿ ಸಾರ್ವಜನಿಕವಾಗಿ ಹತ್ಯೆ ಮಾಡಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಲಿದೆ ಎನ್ನುವ ನಿರೀಕ್ಷೆ ಇತ್ತು. ಆದರೆ ಈಗ ನ್ಯಾಯಾಲಯ ನೀಡಿರುವ ತೀರ್ಪು ಅಸಮಧಾನ ತರಿಸಿದೆ. ಈ ತೀರ್ಪಿನನ್ನು ಪ್ರಶ್ನಿಸಿ, ದಿ. ಪಿಎಸ್ಐ ಜಗದೀಶ್ ಅವರ ಕುಟುಂಬದ ಜೊತೆ ಚರ್ಚಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುವುದು ಹುತಾತ್ಮ ಪಿಎಸ್ಐ ಫೌಂಡೇಶನ್ ಟ್ರಸ್ಟ್ ನ ಅಧ್ಯಕ್ಷ ರಾಜಘಟ್ಟರವಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

19 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

19 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

1 day ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

4 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

4 days ago