Categories: ಕೋಲಾರ

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ ಕಾಯ್ದೆಯ ವಿರುದ್ಧ ತೀರ್ಪು ನೀಡಿರುವುದು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಉದ್ದೇಶ ಪೂರ್ವಕವಾಗಿ ಅನ್ಯಾಯ ಮಾಡುತ್ತಿರುವುದರ ವಿರುದ್ಧ ಕ್ರಮ ಕೈಗೊಳ್ಳಲು ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ‌ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗೆ ಮನವಿ ರವಾನಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದಮನಿತರ ಸಂಘರ್ಷ ಸಮಿತಿ ರಾಜ್ಯ ಅಧ್ಯಕ್ಷ ಮೇಡಹಾಳ ಮುನಿಅಂಜಿನಪ್ಪ ಮಾತನಾಡಿ ದಲಿತರ ಪರವಾದ ಪಿ.ಟಿ.ಸಿ.ಎಲ್ ಕಾಯ್ದೆಯ ಮೂಲ ಉದ್ದೇಶದ ವಿರುದ್ಧವಾಗಿ ಮತ್ತು ಸಂವಿಧಾನ ಆಶಯಗಳ ವಿರುದ್ಧವಾಗಿ ತೀರ್ಪು ನೀಡುತ್ತಿದ್ದಾರೆ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳು ಭೂಮಿಯುನ್ನು ಕಳೆದುಕೊಂಡು ಮತ್ತೆ ಭೂರಹಿತರಾಗುವುವಂತೆ ಮಾಡಿ ದಲಿತರಿಗೆ ಮರಣ ಶಾಸನದ ತೀರ್ಪು ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರವು ಚುನಾವಣೆ ಪೂರ್ವದಲ್ಲಿ ನುಡಿದಂತೆ ನಡೆದು ಮುಖಮಂತ್ರಿಗಳು ಕೊಟ್ಟ ಮಾತಿನಂತೆ ಘನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಅಧಿವೇಶನದಲ್ಲೇ ದಲಿತರ ಭೂಮಿಗಳನ್ನು ರಕ್ಷಣೆ ಮಾಡುವ ಸದುದ್ದೇಶದಿಂದ 2023 ರಲ್ಲಿ ಘನ ರಾಜ್ಯ ಸರ್ಕಾರ ಪಿ.ಟಿ.ಸಿ.ಎಲ್ ಕಾಯ್ದೆ ಕಲಂ 5(1) ಸಿ ಕಾಲಮಿತಿ ಅನ್ವಯವಾಗುವುದಿಲ್ಲವೆಂದು ತಿದ್ದುಪಡಿ ತಂದು ತುಳಿತಕ್ಕೊಳಾಗದ ಸಮುದಾಯಕ್ಕೆ ಆಸರೆಯಾದ ಕಾಂಗ್ರೆಸ್ ಸರ್ಕಾರಕ್ಕೆ ಸಮುದಾಯದ ಪರವಾಗಿ ಅಭಿನಂದನೆಗಳು ಸಲ್ಲಿಸಿದರು.

ಸರ್ಕಾರದ ಸದರಿ ತಿದ್ದುಪಡಿಯಲ್ಲಿ ಸ್ಪಷ್ಟವಾಗಿ ಸರ್ವೋಚ್ಚ ನ್ಯಾಯಾಲಯ, ಉಚ್ಚ ನ್ಯಾಯಾಲಯಗಳು ಅಧೀನ ನ್ಯಾಯಾಲಗಳಲ್ಲಿ ಹಾಗು ರಾಜ್ಯದ ಕಂದಾಯ ನ್ಯಾಯಾಲಯಗಲ್ಲಿ ನಡೆಯುತ್ತಿರುವ ದಾವೆಗಳಿಗೂ, ಬಾಕಿ ಇರುವ ಎಲ್ಲಾ ಪ್ರಕರಣಗಳಿಗೂ ಅನ್ವಯವಾಗುವಂತೆ ತಿದ್ದುಪಡಿಯಾಗಿದರು ಸಹ ಇದರ ವಿರುದ್ಧವಾಗಿ ಉದ್ದೇಶ ಪೂರ್ವಕವಾಗಿ ಜಾತಿವಾದಿಗಳು ರಾಜ್ಯ ಸರ್ಕಾರದ ಪಿ.ಟಿ.ಸಿ.ಎಲ್. ಕಾಯ್ದೆಯ ಆಶಯದ ವಿರುದ್ಧವಾಗಿ ಕಾಲಮಿತಿ ಅನ್ವಯಿಸಿ ಮತ್ತು ಕಾರಣಗಳೇ ಇಲ್ಲದ ಸಣ್ಣಪುಟ್ಟ ಕಾರಣಗಳನ್ನು ಮುಂದಿಟ್ಟುಕೊಂಡು ಎಲ್ಲಾ ನ್ಯಾಯಾಲಯಗಳಲ್ಲಿ ಡಿಸಿ, ಎಸಿ, ಉಚ್ಚ ನ್ಯಾಯಾಲಯಗಳು ಸುಪ್ರೀಂಕೋರ್ಟಿನ ನ್ಯಾಯಾಲಯಗಳು ದಲಿತರ ವಿರುದ್ಧವಾಗಿ ದುರುದ್ದೇಶದಿಂದ ದಲಿತರ ವಿರುದ್ಧ ಬಲಾಡ್ಯರ ಕುತಂತ್ರಗಳಿಗೆ ಮಣೆ ಹಾಕಿ 2023 ರ ಪಿ.ಟಿ.ಸಿಎಲ್. ಕಾಯ್ದೆ ತಿದ್ದು ಪಡಿಯ ವಿರುದ್ಧವಾಗಿ ಹಾಗು ದಲಿತ ಸಮುದಾಯಗಳು ಭೂರಹಿತರಾಗಲು ಆದೇಶಗಳನ್ನೂ ಸದರಿ ನ್ಯಾಯಾಲಯಗಳು ಮಾಡುತ್ತಿವೆ ಎಂದು ಆರೋಪಿಸಿದರು

ನ್ಯಾಯಾಲಯಗಳಲ್ಲಿ ಸರ್ಕಾರದಿಂದ ಮಂಜೂರಾಗಿದ್ದರೂ ಸಹ (ಇನಾಂ, ಜಿಎಂಎಸ್, ಕನಿಷ್ಠ ಬೆಲೆ, ಮಾರುಕಟ್ಟೆ, ಬೆಲೆಗಿಂತ ಕಡಿಮೆ ಬೆಲೆ ನಿರ್ದಿಷ್ಟ ಬೆಲೆ ಇತ್ಯಾದಿ. ಭೂಮಿಗಳನ್ನು ಉದ್ದೇಶ ಪೂರ್ವಕವಾಗಿ ಕಾಯಂ ವ್ಯಾಪ್ತಿಯಲ್ಲಿ ಬರುವುದಿಲ್ಲವೆಂದು ವಜಾ ಮಾಡುತ್ತಿದ್ದಾರೆ. ಕಲಂ 311 ನಲ್ಲಿ ಎಲ್ಲಾ ಸರ್ಕಾರದಿಂದ ಮಂಜೂರಾದ ಜಮೀನುಗಳು ಎಂದು ಇದರೂ ಸಹ ನ್ಯಾಯಾಲಯಗಳು ಮರುದೋಷದಿಂದ ಗೊಂದಲ ಸೃಷ್ಟಿಸುತ್ತಿದ್ದಾರೆ. ಆದರಿಂದ ಎಲ್ಲಾ ಮಂಜೂರಾದ ಭೂಮಿಗಳ ಬಗ್ಗೆ ಸರಿಪಡಿಸಿ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಪಿಟಿಸಿಎಲ್ ಮಂಜುನಾಥ್, ಮಾಯಮ್ಮ, ರಾಘವೇಂದ್ರ, ರತ್ನಯ್ಯ, ಗಂಗುಲಪ್ಪ, ನಳನಿ, ವಿಜಯಲಕ್ಷ್ಮಿ, ಮುನಿರಾಜು, ಮೋಟಪ್ಪ, ಅಂಬರೀಶ್ ಮುಂತಾದವರು ಇದ್ದರು.

Ramesh Babu

Journalist

Recent Posts

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

9 hours ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

9 hours ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

15 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

1 day ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

1 day ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

2 days ago