ಪಿತ್ತಕಲ್ಲು ಮತ್ತು ಸೋಂಕಿತ ಪಿತ್ತಕೋಶದಿಂದ ಬಳಲುತ್ತಿದ್ದ 93 ವರ್ಷದ ಇಳಿವಯಸ್ಸಿನ ವ್ಯಕ್ತಿಗೆ ರೋಬೋಟ್ ನೆರವಿನ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು: ಪಿತ್ತಕಲ್ಲು ಮತ್ತು ಸೋಂಕಿತ ಪಿತ್ತಕೋಶದ ಸಮಸ್ಯೆಯಿಂದ ಬಳಲುತ್ತಿದ್ದ 93 ವರ್ಷದ ವ್ಯಕ್ತಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಸುಧಾರಿತ ರೋಬೋಟ್ ನೆರವಿನ ಮೂಲಕ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಾಯಿತು.

ಫೋರ್ಟಿಸ್ ಆಸ್ಪತ್ರೆಯ ಮಿನಿಮಲ್ ಆಕ್ಸೆಸ್ ಮತ್ತು ರೊಬೊಟಿಕ್ ಜನರಲ್ ಸರ್ಜರಿ ನಿರ್ದೇಶಕ ಡಾ. ಶ್ರೀಧರ ವಿ ಮಾತನಾಡಿ, 93 ವರ್ಷದ ಸೋಮೇಶ್ (ಹೆಸರು ಬದಲಾಯಿಸಲಾಗಿದೆ) ಎಂಬ ರೋಗಿಯು 4-6 ದಿನಗಳಿಂದ ತೀವ್ರ ಹೊಟ್ಟೆ ನೋವು ಅನುಭವಿಸುತ್ತಿದ್ದರು. ಸಾಕಷ್ಟು ಕಡೆ ತೋರಿಸಿದರೂ ಸೂಕ್ತ ಕಾರಣ ತಿಳಿದಿರಲಿಲ್ಲ. ಬಳಿಕ ಅವರು ಫೋರ್ಟಿಸ್‌ಗೆ ದಾಖಲಾದರು. ಅವರನ್ನು ಸಂಪೂರ್ಣವಾಗಿ ತಪಾಸಣೆ ಮಾಡಿದ ಬಳಿಕ ಅವರಿಗೆ ಪಿತ್ತಕಲ್ಲುಗಳೊಂದಿಗೆ ಸೋಂಕಿತ ಪಿತ್ತಕೋಶ ಇರುವುದು ಕಂಡು ಬಂತು. ಅಷ್ಟೇ ಅಲ್ಲದೆ, ರೋಗಿಯು ಈ ಮೊದಲೇ ಹೃದ್ರೋಗ, ಮಧುಮೇಹ, ಅಧಿಕ ರಕ್ತದೊತ್ತಡದ ಇತಿಹಾಸ ಹೊಂದಿದ್ದು, ಈ ಹಿಂದೆ ಹೃದಯ ಬೈಪಾಸ್ ಶಸ್ತ್ರಚಿಕಿತ್ಸೆ ಮತ್ತು ಆಂಜಿಯೋಪ್ಲ್ಯಾಸ್ಟಿಗೆ ಒಳಪಟ್ಟಿದ್ದರು.

ಈ ಎಲ್ಲಾ ಕಾರಣದಿಂದ ಹಾಗೂ ಅವರ ವಯಸ್ಸಿನ ಕಾರಣದಿಂದ ಅವರಿಗೆ ಓಪನ್‌ ಸರ್ಜರಿ ಮಾಡುವುದು ಅಸಾಧ್ಯವಾಗಿತ್ತು. ಹೀಗಾಗಿ ಅವರಿಗೆ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಮಾಡಲು ನಿರ್ಧರಿಸಿದೆವು, ಇದು ಸುಧಾರಿತ ಕನಿಷ್ಠ ಆಕ್ರಮಣಶೀಲ ತಂತ್ರವಾಗಿದ್ದು, ನಿಖರವಅಗಿ ಶಸ್ತ್ರಚಿಕಿತ್ಸೆ ನಡೆಸಲು ಹಾಗೂ ತ್ವರಿತವಾಗಿ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಕೇವಲ 20 ರಿಂದ 30 ನಿಮಿಷಗಳಲ್ಲೇ ಸೂಕ್ತ ರೀತಿಯಲ್ಲಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಈ ಶಸ್ತ್ರಚಿಕಿತ್ಸೆಯು ಅನೇಕ ವೈದ್ಯಕೀಯ ಸಮಸ್ಯೆಗಳನ್ನು ಏಕಕಾಲದಲ್ಲಿ ಪರಿಹರಿಸುವಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆ ಅತ್ಯಧುತ ವರವೆಂದು ಹೇಳಿದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

21 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago