ಪಿತ್ತಕಲ್ಲು ಮತ್ತು ಸೋಂಕಿತ ಪಿತ್ತಕೋಶದಿಂದ ಬಳಲುತ್ತಿದ್ದ 93 ವರ್ಷದ ಇಳಿವಯಸ್ಸಿನ ವ್ಯಕ್ತಿಗೆ ರೋಬೋಟ್ ನೆರವಿನ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು: ಪಿತ್ತಕಲ್ಲು ಮತ್ತು ಸೋಂಕಿತ ಪಿತ್ತಕೋಶದ ಸಮಸ್ಯೆಯಿಂದ ಬಳಲುತ್ತಿದ್ದ 93 ವರ್ಷದ ವ್ಯಕ್ತಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಸುಧಾರಿತ ರೋಬೋಟ್ ನೆರವಿನ ಮೂಲಕ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಾಯಿತು.

ಫೋರ್ಟಿಸ್ ಆಸ್ಪತ್ರೆಯ ಮಿನಿಮಲ್ ಆಕ್ಸೆಸ್ ಮತ್ತು ರೊಬೊಟಿಕ್ ಜನರಲ್ ಸರ್ಜರಿ ನಿರ್ದೇಶಕ ಡಾ. ಶ್ರೀಧರ ವಿ ಮಾತನಾಡಿ, 93 ವರ್ಷದ ಸೋಮೇಶ್ (ಹೆಸರು ಬದಲಾಯಿಸಲಾಗಿದೆ) ಎಂಬ ರೋಗಿಯು 4-6 ದಿನಗಳಿಂದ ತೀವ್ರ ಹೊಟ್ಟೆ ನೋವು ಅನುಭವಿಸುತ್ತಿದ್ದರು. ಸಾಕಷ್ಟು ಕಡೆ ತೋರಿಸಿದರೂ ಸೂಕ್ತ ಕಾರಣ ತಿಳಿದಿರಲಿಲ್ಲ. ಬಳಿಕ ಅವರು ಫೋರ್ಟಿಸ್‌ಗೆ ದಾಖಲಾದರು. ಅವರನ್ನು ಸಂಪೂರ್ಣವಾಗಿ ತಪಾಸಣೆ ಮಾಡಿದ ಬಳಿಕ ಅವರಿಗೆ ಪಿತ್ತಕಲ್ಲುಗಳೊಂದಿಗೆ ಸೋಂಕಿತ ಪಿತ್ತಕೋಶ ಇರುವುದು ಕಂಡು ಬಂತು. ಅಷ್ಟೇ ಅಲ್ಲದೆ, ರೋಗಿಯು ಈ ಮೊದಲೇ ಹೃದ್ರೋಗ, ಮಧುಮೇಹ, ಅಧಿಕ ರಕ್ತದೊತ್ತಡದ ಇತಿಹಾಸ ಹೊಂದಿದ್ದು, ಈ ಹಿಂದೆ ಹೃದಯ ಬೈಪಾಸ್ ಶಸ್ತ್ರಚಿಕಿತ್ಸೆ ಮತ್ತು ಆಂಜಿಯೋಪ್ಲ್ಯಾಸ್ಟಿಗೆ ಒಳಪಟ್ಟಿದ್ದರು.

ಈ ಎಲ್ಲಾ ಕಾರಣದಿಂದ ಹಾಗೂ ಅವರ ವಯಸ್ಸಿನ ಕಾರಣದಿಂದ ಅವರಿಗೆ ಓಪನ್‌ ಸರ್ಜರಿ ಮಾಡುವುದು ಅಸಾಧ್ಯವಾಗಿತ್ತು. ಹೀಗಾಗಿ ಅವರಿಗೆ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಮಾಡಲು ನಿರ್ಧರಿಸಿದೆವು, ಇದು ಸುಧಾರಿತ ಕನಿಷ್ಠ ಆಕ್ರಮಣಶೀಲ ತಂತ್ರವಾಗಿದ್ದು, ನಿಖರವಅಗಿ ಶಸ್ತ್ರಚಿಕಿತ್ಸೆ ನಡೆಸಲು ಹಾಗೂ ತ್ವರಿತವಾಗಿ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಕೇವಲ 20 ರಿಂದ 30 ನಿಮಿಷಗಳಲ್ಲೇ ಸೂಕ್ತ ರೀತಿಯಲ್ಲಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಈ ಶಸ್ತ್ರಚಿಕಿತ್ಸೆಯು ಅನೇಕ ವೈದ್ಯಕೀಯ ಸಮಸ್ಯೆಗಳನ್ನು ಏಕಕಾಲದಲ್ಲಿ ಪರಿಹರಿಸುವಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆ ಅತ್ಯಧುತ ವರವೆಂದು ಹೇಳಿದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

10 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

14 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

21 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

22 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago