ಪಿತ್ತಕಲ್ಲು ಮತ್ತು ಸೋಂಕಿತ ಪಿತ್ತಕೋಶದಿಂದ ಬಳಲುತ್ತಿದ್ದ 93 ವರ್ಷದ ಇಳಿವಯಸ್ಸಿನ ವ್ಯಕ್ತಿಗೆ ರೋಬೋಟ್ ನೆರವಿನ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು: ಪಿತ್ತಕಲ್ಲು ಮತ್ತು ಸೋಂಕಿತ ಪಿತ್ತಕೋಶದ ಸಮಸ್ಯೆಯಿಂದ ಬಳಲುತ್ತಿದ್ದ 93 ವರ್ಷದ ವ್ಯಕ್ತಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಸುಧಾರಿತ ರೋಬೋಟ್ ನೆರವಿನ ಮೂಲಕ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಾಯಿತು.

ಫೋರ್ಟಿಸ್ ಆಸ್ಪತ್ರೆಯ ಮಿನಿಮಲ್ ಆಕ್ಸೆಸ್ ಮತ್ತು ರೊಬೊಟಿಕ್ ಜನರಲ್ ಸರ್ಜರಿ ನಿರ್ದೇಶಕ ಡಾ. ಶ್ರೀಧರ ವಿ ಮಾತನಾಡಿ, 93 ವರ್ಷದ ಸೋಮೇಶ್ (ಹೆಸರು ಬದಲಾಯಿಸಲಾಗಿದೆ) ಎಂಬ ರೋಗಿಯು 4-6 ದಿನಗಳಿಂದ ತೀವ್ರ ಹೊಟ್ಟೆ ನೋವು ಅನುಭವಿಸುತ್ತಿದ್ದರು. ಸಾಕಷ್ಟು ಕಡೆ ತೋರಿಸಿದರೂ ಸೂಕ್ತ ಕಾರಣ ತಿಳಿದಿರಲಿಲ್ಲ. ಬಳಿಕ ಅವರು ಫೋರ್ಟಿಸ್‌ಗೆ ದಾಖಲಾದರು. ಅವರನ್ನು ಸಂಪೂರ್ಣವಾಗಿ ತಪಾಸಣೆ ಮಾಡಿದ ಬಳಿಕ ಅವರಿಗೆ ಪಿತ್ತಕಲ್ಲುಗಳೊಂದಿಗೆ ಸೋಂಕಿತ ಪಿತ್ತಕೋಶ ಇರುವುದು ಕಂಡು ಬಂತು. ಅಷ್ಟೇ ಅಲ್ಲದೆ, ರೋಗಿಯು ಈ ಮೊದಲೇ ಹೃದ್ರೋಗ, ಮಧುಮೇಹ, ಅಧಿಕ ರಕ್ತದೊತ್ತಡದ ಇತಿಹಾಸ ಹೊಂದಿದ್ದು, ಈ ಹಿಂದೆ ಹೃದಯ ಬೈಪಾಸ್ ಶಸ್ತ್ರಚಿಕಿತ್ಸೆ ಮತ್ತು ಆಂಜಿಯೋಪ್ಲ್ಯಾಸ್ಟಿಗೆ ಒಳಪಟ್ಟಿದ್ದರು.

ಈ ಎಲ್ಲಾ ಕಾರಣದಿಂದ ಹಾಗೂ ಅವರ ವಯಸ್ಸಿನ ಕಾರಣದಿಂದ ಅವರಿಗೆ ಓಪನ್‌ ಸರ್ಜರಿ ಮಾಡುವುದು ಅಸಾಧ್ಯವಾಗಿತ್ತು. ಹೀಗಾಗಿ ಅವರಿಗೆ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಮಾಡಲು ನಿರ್ಧರಿಸಿದೆವು, ಇದು ಸುಧಾರಿತ ಕನಿಷ್ಠ ಆಕ್ರಮಣಶೀಲ ತಂತ್ರವಾಗಿದ್ದು, ನಿಖರವಅಗಿ ಶಸ್ತ್ರಚಿಕಿತ್ಸೆ ನಡೆಸಲು ಹಾಗೂ ತ್ವರಿತವಾಗಿ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಕೇವಲ 20 ರಿಂದ 30 ನಿಮಿಷಗಳಲ್ಲೇ ಸೂಕ್ತ ರೀತಿಯಲ್ಲಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಈ ಶಸ್ತ್ರಚಿಕಿತ್ಸೆಯು ಅನೇಕ ವೈದ್ಯಕೀಯ ಸಮಸ್ಯೆಗಳನ್ನು ಏಕಕಾಲದಲ್ಲಿ ಪರಿಹರಿಸುವಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆ ಅತ್ಯಧುತ ವರವೆಂದು ಹೇಳಿದರು.

Ramesh Babu

Journalist

Recent Posts

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

1 hour ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

13 hours ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

13 hours ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

14 hours ago

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…

14 hours ago

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ  ಟಿ.ಎ. ಶರವಣ ವಾಗ್ದಾಳಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…

14 hours ago