ಪಿಸ್ತೂಲ್ ತೋರಿಸಿ ಚಿನ್ನಾಭರಣ ದೋಚಿದ್ದ ಕಳ್ಳರ ಗ್ಯಾಂಗ್: ಚಿನ್ನ ಕದ್ದು ರಾಜಸ್ತಾನಕ್ಕೆ ಪರಾರಿ: ಕಳ್ಳರನ್ನು ಬಂಧಿಸಿದ ಮಾದನಾಯಕನಹಳ್ಳಿ ಪೋಲಿಸರು: ಬಂಧಿತರಿಂದ 35 ಲಕ್ಷ ರೂ. ಮೌಲ್ಯದ‌ 417 ಗ್ರಾಂ ಚಿನ್ನಾಭರಣ, ಪಿಸ್ತೂಲ್, ಡ್ರಾಗರ್, ಒಂದು ಬೈಕ್, ಆಟೋ ವಶ

ಪಿಸ್ತೂಲ್ ತೋರಿಸಿ ಚಿನ್ನಾಭರಣ ದೋಚಿದ್ದ 6 ಮಂದಿ ಕುಖ್ಯಾತ ಕಳ್ಳರನ್ನು ಮಾದನಾಯಕನಹಳ್ಳಿ ಪೋಲಿಸರು ಬಂಧಿಸಿದ್ದಾರೆ.

ನಾರಾಯಣ ಲಾಲ್, ರಾಮ್ ಲಾಲ್, ಕಿಶೋರ್ ಪವಾರ್, ಮಹೇಂದ್ರ ಗೆಹ್ಲೋಟ್, ಕೀರ್ತರಾಮ್, ಅಶೋಕ್ ಕುಮಾರ್, ಸೋಹನ್ ರಾಮ್ ಬಂಧಿತ ಆರೋಪಿಗಳು

ಬಂಧಿತರಿಂದ 35 ಲಕ್ಷ ರೂಪಾಯಿ ಮೌಲ್ಯದ‌ 417 ಗ್ರಾಂ ಚಿನ್ನಾಭರಣ, ಪಿಸ್ತೂಲ್, ಡ್ರಾಗರ್, ಒಂದು ಬೈಕ್, ಆಟೋ ವಶಕ್ಕೆ ಪಡೆಯಲಾಗಿದೆ.

ಈ ಕಳ್ಳರ ಗ್ಯಾಂಗ್ ಕಳೆದ ಒಂದು ತಿಂಗಳ ಹಿಂದೆ ಮಾದನಾಯಕನಹಳ್ಳಿಯ ದೊಂಬರಹಳ್ಳಿ ಬಳಿ ಇರುವ ಪದಮ್ ಜ್ಯೂವಲೆರಿ ಅಂಗಡಿಗೆ ನುಗ್ಗಿ ಪಿಸ್ತೂಲ್ ತೋರಿಸಿ ಚಿನ್ನ ಕದ್ದು ಪರಾರಿಯಾಗಿದ್ದರು.

ಈ ಆರೋಪಿಗಳ ತಂಡವು ದರೋಡೆ ಮಾಡಿ ರಾಜಸ್ಥಾನದಲ್ಲಿ ತಲೆಮರಿಸಿಕೊಂಡಿತ್ತು. ಖಚಿತ ಮಾಹಿತಿ ಮೇರೆಗೆ ಮಾದನಾಯಕನಹಳ್ಳಿ ಪೋಲಿಸರು ರಾಜಸ್ಥಾನಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿ ಕರೆತಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!