ಪಿಸ್ತೂಲ್ ತೋರಿಸಿ ಚಿನ್ನಾಭರಣ ದೋಚಿದ್ದ ಕಳ್ಳರ ಗ್ಯಾಂಗ್: ಚಿನ್ನ ಕದ್ದು ರಾಜಸ್ತಾನಕ್ಕೆ ಪರಾರಿ: ಕಳ್ಳರನ್ನು ಬಂಧಿಸಿದ ಮಾದನಾಯಕನಹಳ್ಳಿ ಪೋಲಿಸರು: ಬಂಧಿತರಿಂದ 35 ಲಕ್ಷ ರೂ. ಮೌಲ್ಯದ‌ 417 ಗ್ರಾಂ ಚಿನ್ನಾಭರಣ, ಪಿಸ್ತೂಲ್, ಡ್ರಾಗರ್, ಒಂದು ಬೈಕ್, ಆಟೋ ವಶ

ಪಿಸ್ತೂಲ್ ತೋರಿಸಿ ಚಿನ್ನಾಭರಣ ದೋಚಿದ್ದ 6 ಮಂದಿ ಕುಖ್ಯಾತ ಕಳ್ಳರನ್ನು ಮಾದನಾಯಕನಹಳ್ಳಿ ಪೋಲಿಸರು ಬಂಧಿಸಿದ್ದಾರೆ.

ನಾರಾಯಣ ಲಾಲ್, ರಾಮ್ ಲಾಲ್, ಕಿಶೋರ್ ಪವಾರ್, ಮಹೇಂದ್ರ ಗೆಹ್ಲೋಟ್, ಕೀರ್ತರಾಮ್, ಅಶೋಕ್ ಕುಮಾರ್, ಸೋಹನ್ ರಾಮ್ ಬಂಧಿತ ಆರೋಪಿಗಳು

ಬಂಧಿತರಿಂದ 35 ಲಕ್ಷ ರೂಪಾಯಿ ಮೌಲ್ಯದ‌ 417 ಗ್ರಾಂ ಚಿನ್ನಾಭರಣ, ಪಿಸ್ತೂಲ್, ಡ್ರಾಗರ್, ಒಂದು ಬೈಕ್, ಆಟೋ ವಶಕ್ಕೆ ಪಡೆಯಲಾಗಿದೆ.

ಈ ಕಳ್ಳರ ಗ್ಯಾಂಗ್ ಕಳೆದ ಒಂದು ತಿಂಗಳ ಹಿಂದೆ ಮಾದನಾಯಕನಹಳ್ಳಿಯ ದೊಂಬರಹಳ್ಳಿ ಬಳಿ ಇರುವ ಪದಮ್ ಜ್ಯೂವಲೆರಿ ಅಂಗಡಿಗೆ ನುಗ್ಗಿ ಪಿಸ್ತೂಲ್ ತೋರಿಸಿ ಚಿನ್ನ ಕದ್ದು ಪರಾರಿಯಾಗಿದ್ದರು.

ಈ ಆರೋಪಿಗಳ ತಂಡವು ದರೋಡೆ ಮಾಡಿ ರಾಜಸ್ಥಾನದಲ್ಲಿ ತಲೆಮರಿಸಿಕೊಂಡಿತ್ತು. ಖಚಿತ ಮಾಹಿತಿ ಮೇರೆಗೆ ಮಾದನಾಯಕನಹಳ್ಳಿ ಪೋಲಿಸರು ರಾಜಸ್ಥಾನಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿ ಕರೆತಂದಿದ್ದಾರೆ.

Ramesh Babu

Journalist

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

14 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

20 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

24 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

1 day ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

1 day ago